ಕುಕನೂರು | ಬಂಜಾರ, ಭೋವಿ, ಕೊರಚ, ಕೊರಮ ಸಮಾಜದವರಿಗೆ ಶೇ.6ರಷ್ಟು ಮೀಸಲಾತಿಗಾಗಿ ಮನವಿ

Date:

Advertisements

ಪರಿಶಿಷ್ಟ ಪಂಗಡದ ಅವೈಜ್ಞಾನಿಕ ಒಳಮೀಸಲಾತಿಯನ್ನು ರದ್ದು ಪಡಿಸಬೇಕು. ಇಲ್ಲವೇ ನಮ್ಮ ಬಂಜಾರ, ಭೋವಿ, ಕೊರಚ, ಕೊರಮ ಸಮಾಜಗಳಿಗೆ ಶೇ.6ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದು ಗೋರ್‌ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ ಬಳೂಟಗಿ ಆಗ್ರಹಿಸಿದರು.

ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಪ್ರವಾಸಿ ಮಂದಿರಕ್ಕೆ ಆಗಮಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಸಮಸ್ತ ಬಂಜಾರ, ಭೋವಿ, ಕೊರಚ, ಕೊರಮ ಸಮಾಜದ ಸರ್ವ ನಾಗರಿಕರು ತಮ್ಮ ಸರ್ಕಾರ ಪರಿಶಿಷ್ಟ ಪಂಗಡದಲ್ಲಿ ಒಳಮೀಸಲಾತಿ ಮಾಡುತ್ತಿರುವುದು ಸರಿಯಷ್ಟೆ. ಆದರೆ ಇದನ್ನು ಮಾಡುವಾಗ ನ್ಯಾ.ನಾಗಮೋಹನ ದಾಸ್ ವರದಿ ತಯಾರಿಸಲು ಜಾತಿ ಗಣತಿ ಕಾರ್ಯವನ್ನು ಮಾಡಿರುತ್ತೀರಿ. ಇದು ಸಮರ್ಪಕವಾಗಿ, ವೈಜ್ಞಾನಿಕವಾಗಿ ನ್ಯಾಯವಾಗಿ ನಡೆದಿರುವದಿಲ್ಲ. ನಮ್ಮ ಜನಾಂಗದವರು ಅನಕ್ಷರಸ್ಥರು. ಮುಗ್ಧರು ಇರುವುದರಿಂದ ಹಾಗೂ ನಮ್ಮ ಹತ್ತಿರ ಸರಿಯಾದ ದಾಖಲೆಗಳು ಇಲ್ಲದಿರುವುದರಿಂದ ನಮ್ಮ ಜನಾಂಗಗಳ ನೋಂದಣಿ ಸರಿಯಾಗಿ ಆಗಿಲ್ಲ” ಎಂದು ಆರೋಪಿಸಿದರು.

Advertisements

ಇದನ್ನೂ ಓದಿದ್ದೀರಾ? ಬೆಳಗಾವಿ | ರಾಷ್ಟ್ರದ ತೈಲ ಸುರಕ್ಷತೆಗೆ ತಾಳೆ ಕೃಷಿಯ ಬಲ: ರೈತ ಸದಾನಂದ ಕರಾಡೆಯ ಯಶೋಗಾಥೆ

ಜಾತಿ ಗಣತಿ ಸಂದರ್ಭದಲ್ಲಿ ಕೆಲವೊಂದಿಷ್ಟು ಜನ ಹೊಟ್ಟೆಪಾಡಿಗಾಗಿ ದುಡಿಯಲು ಗುಳೆ ಹೋಗಿರುವುದರಿಂದ ಈ ಜಾತಿಗಣತಿಯಿಂದ ಹೊರಗುಳಿದಿದ್ದಾರೆ. ಆದ ಕಾರಣ ಈ ಒಳಮೀಸಲಾತಿಯನ್ನು ಇಲ್ಲಿಗೆ ಬಿಡುವುದು ಸೂಕ್ತವೆಂದು ನಮ್ಮ ಅಭಿಪ್ರಾಯ. ಹಾಗೊಂದು ವೇಳೆ ಮಾಡಲೇಬೇಕೆಂಬ ಇಚ್ಛೆ ನಿಮಗಿದ್ದರೆ ಒಳಮೀಸಲಾತಿಯಲ್ಲಿ ನಮ್ಮ ಈ ನಾಲ್ಕು ಸಮಾಜಗಳಿಗೆ ಶೇ.6ರಷ್ಟು ಮೀಸಲಾತಿ ನೀಡಿದರೆ ನಮಗೆ ಅನುಕೂಲವಾಗುತ್ತದೆ. ಸಾಮಾಜಿಕ ನ್ಯಾಯದ ಅಡಿಯಲ್ಲಿ ನಮಗೆ ಉಪಕಾರ ಮಾಡುತ್ತೀರೆಂದು ತಮ್ಮಲ್ಲಿ ಕಳಕಳಿಯ ವಿನಂತಿ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಮೇಘರಾಜ ಬಳಿಗೇರಿ, ಯಮನೂರಪ್ಪ ಕಟ್ಟಿಮನಿ, ಪ್ರಕಾಶ ಬಳಿಗೇರಿ, ಹನಮಂತ ಚವ್ಹಾಣ, ಪ್ರಾಣೇಶ ನಾಯಕ, ರಾಘವೇಂದ್ರ ಬಳಗೇರಿ, ಲಿಂಬಣ್ಣ ನಾಯಕ, ಚೇತನ ಬಳಿಗೇರಿ, ದಿಲೀಪ ಕಾರಭಾರಿ ಹಾಗೂ ಸಮಾಜದ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X