ಮಣಿಪುರ ಹಿಂಸಾಚಾರಕ್ಕೆ ಕುಕಿ ಸಮುದಾಯವೇ ಕಾರಣ; ಚಕ್ರವರ್ತಿ ಸೂಲಿಬೆಲೆ ಆರೋಪ

Date:

Advertisements

ಮಣಿಪುರ ಹಿಂಸಾಚಾರಕ್ಕೆ ಕುಕಿ ಬಡುಕಟ್ಟು ಸಮುದಾಯವೇ ಕಾರಣ. ಅವರು ಗಾಂಜಾ ಬೆಳೆದು ಮೈತೇಯಿ ಯುವಕರನ್ನು ನಶೆಗೆ ದಾಸರನ್ನಾಗಿ ಮಾಡಿದ್ದಾರೆ. ಮಯನ್ಮಾರ್ ಅಕ್ರಮ ವಲಸಿಗರಿಗೆ ವಾಸಿಸಲು ಜಾಗ ನೀಡಿದ್ದಾರೆ. ಇದೇ ಘರ್ಷಣೆಗೆ ಮೂಲ ಕಾರಣವಾಗಿದೆ ಎಂದು ಯುವಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ನಮೋಬ್ರಿಗೇಡ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮಣಿಪುರದಲ್ಲಿ ನಡೆದ ಮಹಿಳೆಯ ಮೇಲೆ ದೌರ್ಜನ್ಯ ಸಭ್ಯ ಸಮಾಜ ತಲೆತಗ್ಗಿಸಬೇಕಾದ ಘಟನೆಯಾಗಿದೆ. ಆದರೆ, ಮಣಿಪುರ ಹಿಂಸಾಚಾರಕ್ಕೆ ಬೇರೆಯ ಆಯಾಮವಿದೆ. ಕುಕಿ ಬುಡಕಟ್ಟು ಸಮುದಾಯ ತಮಗೆ ದೊರೆತಿದ್ದ ಸವಲತ್ತನ್ನು ಅಕ್ರಮ ವಿಷಯಗಳಿಗೆ ಬಳಸಿಕೊಂಡಿದೆ. ಮಾದಕ ವಸ್ತುಗಳ ಮಾರಾಟ ಮಾಡಿ, ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಕೊಂಡಿದ್ದಾರೆ. ಇದೆಲ್ಲದಕ್ಕೂ ಚೀನಾ ಬೆಂಬಲ ನಿಡುತ್ತಿದೆ” ಎಂದು ದೂರಿದ್ದಾರೆ.

“ಮೈಥೇಯಿಗಳನ್ನು ಪ್ರಯೋಜನವಿಲ್ಲದವರು ಎಂಬಂತೆ ಬಿಂಬಿಸಿದ್ದರು. ಇಂಫಾಲ್‌ನಲ್ಲಿ ಮೈಥೇಯಿಗಳು ಕ್ರೂರತೆ ಮೆರೆದ ಘಟನೆಗಳು ಕಾಣುತ್ತಿವೆ. ಆದರೆ, ಗುಡ್ಡಗಾಡು ಪ್ರದೇಶದಲ್ಲಿ ಕುಕಿಗಳು ಹಿಂಸಾಚಾರ ನಡೆಸುತ್ತಿದ್ದಾರೆ. ಅವುಗಳು ಪ್ರಚಾರ ಪಡೆಯುತ್ತಿಲ್ಲ” ಎಂದು ಹೇಳಿದ್ದಾರೆ.

Advertisements

ಮಣಿಪುರದಲ್ಲಿ ಪ್ರಬಲ ಮತ್ತು ಬಹುಸಂಖ್ಯಾತರಾಗಿರುವ ಮೈಥೇಯಿ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ನೀಡಲು ಪರಿಗಣಿಸಬಹುದು ಎಂದು ಅಲ್ಲಿನ ಹೈಕೋರ್ಟ್‌ ಅದೇಶ ನೀಡಿತ್ತು. ಅದನ್ನು ಖಂಡಿಸಿ ಕುಕಿ ಸಮುದಾಯ ಇಂಫಾಲ್‌ನಲ್ಲಿ ಶಾಂತಿ ಪ್ರತಿಭಟನೆ ನಡೆಸಿದ್ದವು. ಆದರೆ, ಅಂದಿನ ರಾತ್ರಿ ವೇಳೆಗೆ ಮೈಥೇಯಿ ಸಮುದಾಯಕ್ಕೆ ಸೇರಿದ ಕೆಲವರು ಗಲಭೆ ಎಬ್ಬಿಸಿದ್ದರು. ಹಿಂಸಾಚಾರ ಆರಂಭವಾಗಿ 90 ದಿನಗಳ ಕಳೆದಿವೆ. ಆದರೂ, ಹಿಂಸಾಚಾರವನ್ನು ತಡೆಯುವಲ್ಲಿ ಬಿಜೆಪಿ ಡಬ್ಬಲ್ ಎಂಜಿನ್ ಸರ್ಕಾರ ವಿಫಲವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X