ಮಂಗಳೂರು | ಮಾಟ-ಮಂತ್ರ ನಿವಾರಿಸುವ ನೆಪದಲ್ಲಿ ಮಹಿಳೆಗೆ ವಂಚನೆ, ಲೈಂಗಿಕ ಕಿರುಕುಳ: ‘ಕೂಳೂರು ಉಸ್ತಾದ್’ ಬಂಧನ

Date:

Advertisements

ಮಹಿಳೆಯೊಬ್ಬರಿಗೆ ಯಾರೋ ಮಾಟ , ಮಂತ್ರ ಮಾಡಿಸಿದ್ದಾರೆ ಎಂದು ನಂಬಿಸಿ ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿ, ಸುಮಾರು ಒಂದು ಲಕ್ಷ ರೂಪಾಯಿವರೆಗೆ ವಂಚಿಸಿದ ಆರೋಪದಲ್ಲಿ ಮಂಗಳೂರು ನಗರದ ಕೂಳೂರು ಉಸ್ತಾದ್ ಅವರನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ಖಿನ್ನತೆಯಿಂದ ಬಳಲುತ್ತಿರುವುದನ್ನೇ ತನ್ನ ಲಾಭಕ್ಕೆ ಬಳಸಿಕೊಂಡು ಈ ಕೃತ್ಯವೆಸಗಿದ್ದಾನೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಮದುವೆಯಾಗುವುದಾಗಿ ನಂಬಿಸಿ 77 ಮಹಿಳೆಯರಿಗೆ ವಂಚನೆ; ದುಷ್ಕರ್ಮಿ ಬಂಧನ

Advertisements

ಸಂತ್ರಸ್ತೆಗೆ 2022ರಲ್ಲಿ ಖಿನ್ನತೆ ಕಾಣಿಸಿಕೊಂಡಿದೆ. ತನ್ನ ಅಕ್ಕನ ಪತಿಯ ಸಲಹೆಯಂತೆ ಹೆಜಮಾಡಿಯಲ್ಲಿದ್ದ ಉಸ್ತಾದ್ ಅಬ್ದುಲ್ ಕರೀಮ್ ಮನೆಗೆ ಹೋಗಿದ್ದರು. ಕೂಳೂರು ಉಸ್ತಾದ್ ಎಂದು ಕರೆಸಿಕೊಳ್ಳುವ ಅಬ್ದುಲ್ ಮಹಿಳೆಯನ್ನು ನೋಡಿ ಯಾರೋ ಮಾಟ ಮಂತ್ರ ಮಾಡಿದ್ದಾರೆ ಎಂದು ಹೇಳಿ ನಂಬಿಸಿದ್ದಾನೆ.

ಇದರ ನಿವಾರಣೆ ಮಾಡುವುದಾಗಿ ಹೇಳಿದ ಕಾರಣ ಮಹಿಳೆ ತನ್ನ ಅಕ್ಕನ ಜೊತೆ ಈ ವ್ಯಕ್ತಿ ಬಳಿ ಹಲವು ಬಾರಿ ಹೋಗಿದ್ದಾರೆ. ಅಲ್ಲಿ ಆರೋಪಿ ಕೆಲವು ಬಾರಿ ಮಹಿಳೆಯಿಂದ ಕುರಾನ್ ಓದಿಸಿದ್ದಾನೆ ದೂರಿನಲ್ಲಿ ತಿಳಿಸಲಾಗಿದೆ.

2022ರ ಫೆ.10 ರಂದು ಸಂತ್ರಸ್ತೆಯ ಅಕ್ಕನಿಗೆ ಕೆಲಸ ಇದ್ದ ಕಾರಣ ಸಂತ್ರಸ್ತೆ ಒಬ್ಬಳೇ ಹೆಜಮಾಡಿ ಮನೆಗೆ ಹೋಗಿದ್ದು, ಅಲ್ಲಿ ಈ ಕೂಳೂರು ಉಸ್ತಾದ್ ಕುರಾನ್ ಓದಿಸಿ ಬಳಿಕ ಚಿಕಿತ್ಸೆ ನೆಪದಲ್ಲಿ ಮೈಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ವಂಚನೆ ಪ್ರಕರಣ: ವಿಮಾನ ನಿಲ್ದಾಣದಲ್ಲೇ ಮಾಜಿ ಪಿಡಿಒ ಬಂಧನ

ಮಹಿಳೆಯಿಂದ 55,000 ರೂ. ಪಡೆದಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಹಿಳೆ ತಿಳಿಸಿದ್ದಾರೆ. ಇನ್ನು ಚಿಕಿತ್ಸೆಗೆ ಹೆಚ್ಚು ಖರ್ಚಾಗುವುದಾಗಿ ಹೇಳಿ ಒಟ್ಟು ಸರಿ ಸುಮಾರು ಒಂದು ಲಕ್ಷ ರೂಪಾಯಿವರೆಗೆ ವಂಚಿಸಿರುವುದಾಗಿ ಸಂತ್ರಸ್ತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರಾದ ಬಾಲಕೃಷ್ಣ ನಾಯಕ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X