ಕುಮಾರಸ್ವಾಮಿ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ: ರಾಮಲಿಂಗಾರೆಡ್ಡಿ

Date:

  • ಕುಮಾರಸ್ವಾಮಿ ನಮ್ಮನ್ನು ಎಂದಾದರೂ ಹೊಗಳಲು ಸಾಧ್ಯವೇ?
  • ‘ಬಿಜೆಪಿಯವರು ಮೊದಲು ಮನೆ ದೇವರುಗಳ ಮೇಲೆ ಆಣೆ ಮಾಡಲಿ’

ವಿರೋಧ ಪಕ್ಷದಲ್ಲಿರುವ ಎಚ್‌ ಡಿ ಕುಮಾರಸ್ವಾಮಿ ನಮ್ಮನ್ನು ಎಂದಾದರೂ ಹೊಗಳಲು ಸಾಧ್ಯವೇ? ಅವರ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ. ನಮ್ಮ ಸರ್ಕಾರ ಟೇಕಾಫ್ ಆಗಿ ಸಾವಿರಾರು ಕಿಲೋಮೀಟರ್ ಮುಂದೆ ಹೋಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

- Advertisement -

ರಾಮನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಟೀಕೆ ಮಾಡುವವರು ಮಾಡಲಿ. ವಿರೋಧ ಪಕ್ಷದವರ ಕೆಲಸವೇ ಅದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಭ್ರಷ್ಟಾಚಾರ ಆರೋಪ ಕುರಿತು ಮನೆ ದೇವರ ಮೇಲೆ ಆಣೆ ಮಾಡಲಿ ಎನ್ನುವ ಬಿಜೆಪಿಯವರು, ತಮ್ಮ ಕಾಲದಲ್ಲಿ ಭ್ರಷ್ಟಾಚಾರವೇ ನಡೆದಿಲ್ಲ ಎಂದು ಮೊದಲು ಮನೆ ದೇವರುಗಳ ಮೇಲೆ ಆಣೆ ಮಾಡಿ ತೋರಿಸಲಿ. ಬಿಜೆಪಿಯೊಳಗೆ ಶಾಸಕ ಸಿ ಎನ್ ಅಶ್ವತ್ಥನಾರಾಯಣ ಮಾತಿಗೆ ಕಿಮ್ಮತ್ತಿಲ್ಲ. ಹೀಗಿರುವಾಗ ಉಳಿದವರು ಕಿಮ್ಮತ್ತು ಕೊಡುತ್ತಾರಾ?” ಎಂದು ಕುಟುಕಿದರು.

ಮೇಕೆದಾಟು ಯೋಜನೆ

“ಮೇಕೆದಾಟು ಯೋಜನೆಯಿಂದ ಯಾರಿಗೂ ಸಮಸ್ಯೆ ಇಲ್ಲ. ಯಾವುದೇ ಸರ್ಕಾರವಿದ್ದರೂ ತಮಿಳುನಾಡು ಕ್ಯಾತೆ ತೆಗೆಯುತ್ತಲೇ ಇರುತ್ತದೆ. ಈಗ ಅವರು ಕೋರ್ಟ್ ಮೋರೆ ಹೋಗಿದ್ದಾರೆ. ನಾವು ಸಹ ಕೋರ್ಟ್ ಮೂಲಕವೇ ಹೋರಾಟ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಮುನಿಯಪ್ಪ ಅವರದು ವೈಯಕ್ತಿಕ ಅಭಿಪ್ರಾಯ

“ಎರಡು ವರ್ಷದ ಬಳಿಕ ಹಿರಿಯ ಸಚಿವರು ಕಿರಿಯರಿಗೆ ಅವಕಾಶ ನೀಡಬೇಕು ಎಂಬುದು ಸಚಿವ ಮುನಿಯಪ್ಪ ಅವರ ವೈಯಕ್ತಿಕ ಅಭಿಪ್ರಾಯ. ಹೊಸಬರಿಗೆ ಅವಕಾಶ ನೀಡುವ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....