ಉಡುಪಿ | ಕುಂದಾಪುರ ಜಾನಪದದ ತವರು – ಡಾ ಜಾನಪದ ಎಸ್ ಬಾಲಾಜಿ

Date:

ಕುಂದಾಪುರ ಜಾನಪದದ ತವರು ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಹಾಗೂ ಭಾರತ ಸರ್ಕಾರದ ಐಸಿಸಿಆರ್ ಸದಸ್ಯ ಡಾ ಜಾನಪದ ಎಸ್ ಬಾಲಾಜಿ ತಿಳಿಸಿದರು.

- Advertisement -

ಹಾಲಾಡಿಯ ರಾಜೀವ್ ಶೆಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಕನ್ನಡ ಜಾನಪದ ಪರಿಷತ್ ಅಂಗ ಸಂಸ್ಥೆ ಜಾನಪದ ಯುವ ಬ್ರಿಗೇಡ್ ಉಡುಪಿ ಜಿಲ್ಲಾ ಘಟಕದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಕುಂದಾಪುರದ ಗ್ರಾಮೀಣ ಭಾಗಗಳಲ್ಲಿ ಮೂಲ ಜಾನಪದ ಸಂಸ್ಕೃತಿ ಜೀವಂತವಾಗಿದೆ, ಅಳಿವಿನ ಅಂಚಿನಲ್ಲಿರುವ ಮೂಲ ಜಾನಪದ ಕಲೆಗಳನ್ನು ದಾಖಲಿಕಾರಣ ಮೂಲಕ ಜಾನಪದ ಯುವ ಬ್ರಿಗೇಡ್ ಉಡುಪಿ ಜಿಲ್ಲಾ ಘಟಕ ಜಾನಪದ ಸಂರಕ್ಷಣೆ ಕಾರ್ಯದಲ್ಲಿ ತೊಡಗಲಿದೆ ಎಂದು ತಿಳಿಸಿದರು. ಯುವಜನರು ಸ್ಥಳೀಯ ಜಾನಪದ ಕಲೆಯನ್ನು ಅನುಕರಣೆ ಮಾಡಿ ಅದನ್ನೇ ಅಭ್ಯಾಸ ಮಾಡಬೇಕೆಂದು ತಿಳಿಸಿದರು.

ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಅಶೋಕ್ ಶೆಟ್ಟಿ ಮಾತನಾಡಿ ನಶಿಸಿಹೋಗುವ ಜಾನಪದ ಕಲೆಗಳನ್ನು ಪುನರ್ಜೀವ ಕೊಡುವ ಕಾರ್ಯ ಜಾನಪದ ಯುವ ಬ್ರಿಗೇಡ್ ಮೂಲಕ ಆಗುತ್ತಿರುವುದು ಉತ್ತಮ ಬೆಳವಣಿಗೆಯನ್ನು ತಿಳಿಸಿದರು.

ಕನ್ನಡ ಜಾನಪದ ಪರಿಸರ ರಾಜ್ಯ ಮಹಿಳಾ ಘಟಕ ಸಂಚಾಲಕಿ ಡಾ ಭಾರತಿ ಮರವಂತೆ ಪ್ರಾಸ್ತಾವಿಕವಾಗಿ ಮಾತನಾಡಿ ಕನ್ನಡ ಜಾನಪದ ಪರಿಷತ್ ಮೂಲಕ ಯುವಜನರನ್ನು ಜಾನಪದ ಜಾಗೃತಿ ಮೂಡಿಸುವ ಕಾರ್ಯ ರಾಜ್ಯಾದ್ಯಂತ ಪ್ರಾರಂಭವಾಗಿದೆ, ಸ್ಥಳೀಯ ಜನಪದ ಸಂಪ್ರದಾಯ ಕಲೆಗಳನ್ನು ತರಬೇತಿ ಹಾಗೂ ದಾಖಲೀಕರಣದ ಮೂಲಕ ಯುವಜನರು ಎಂದು ತಿಳಿಸಿದರು.

ಸಾಹಿತಿ ಮಂಜುನಾಥ್ ಕಾಮತ್ ಮಾತನಾಡಿ ಜಾನಪದ ಯುವ ಬ್ರಿಗೇಡ್ ಇಂದಿನ ದಿನಗಳಲ್ಲಿ ಅಗತ್ಯತೆ ಬಹಳಷ್ಟಿದೆ ಯುವ ಜನರ ಮೂಲಕ ಸಂಸ್ಕೃತಿ ಉಳಿಸುವ ಕನ್ನಡ ಜಾನಪದ ಪರಿಷತ್ ಪ್ರಯತ್ನ ಮೆಚ್ಚುಗೆಗೆ ಪಾತ್ರ ಎಂದರು.

ಜಾನಪದ ಯುವ ಬ್ರಿಗೇಡ್ ಜಿಲ್ಲಾ ಸಂಚಾಲಕರಾಗಿ ವಿನಯ್, ಸಹ ಸಂಚಾಲಕರಾಗಿ ಶರತ್ ಪೂಜಾರಿ, ಬೈಂದೂರ್ ಸಂಚಾಲಕರಾಗಿ ದರ್ಶನ್ ಪೂಜಾರಿ, ಸ್ವಸ್ಟಿಕ್ ಬಂಡಾರಿ, ಪ್ರಕೃತಿ ಸಾಲಿಗ್ರಾಮ, ಸೌಪಣಿಕ ಪದವಿ ಸ್ವೀಕರಿಸಿದರು. ಹಾಲಾಡಿ ಚಂಡೆ ತಂಡ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಂದ ಜನಪದ ಕಾರ್ಯಕ್ರಮ ಹಾಗೂ ಯಕ್ಷಗಾನ ಪ್ರದರ್ಶನ ನೀಡಲಾಯಿತು.

ಗ್ರಾಮ ಪಂಚಾಯತ್ ಸದಸ್ಯರಾದ ಗುರುಪ್ರಸಾದ್ ಶೆಟ್ಟಿ, ಜನಾರ್ಧನ್ ಹಾಲಾಡಿ,ಪುನೀತ್ ಪೂಜಾರಿ, ಕಾಲೇಜಿನ ಉಪನ್ಯಾಸಕರು ಪ್ರಕಾಶ್, ಚಂದ್ರಶೇಖರ, ಗಣಪತಿ ಹೆಗಡೆ, ಕುಮಾರ್ ಕಲಾವಿದ ಗುಂಡು ಪೂಜಾರಿ, ಜಾನಪದ ಯುವ ಬ್ರಿಗೇಡ್ ರಾಜ್ಯ ಸಂಚಾಲಕರು ಅಭಿ ಶೆಟ್ಟಿ, ಕರಾವಳಿ ವಿಭಾಗ ಸಂಚಾಲಕರು ಸಂದೇಶ್ ನಾಯಕ, ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕರು ಸಂಪತ್ ಕುಮಾರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...