ಬಳ್ಳಾರಿ | ದಲಿತರಿಗೆ ಹೋಟೆಲ್‌ನಲ್ಲಿ ಊಟ ಕೊಡದೆ ಅಸ್ಪೃಶ್ಯತೆ ಆಚರಣೆ

Date:

Advertisements

ಅಸ್ಪೃಶ್ಯತೆ ನಿರ್ಮೂಲನೆಗೆ ಕಾನೂನುಗಳಿದ್ದರೂ, ಹಳ್ಳಿಗಳಲ್ಲಿ ಅಸ್ಪೃಶ್ಯತೆ ಮುಂದುವರಿದಿದೆ. ಇತ್ತೀಚೆಗೆ, ಅಸ್ಪೃಶ್ಯತೆ ಆಚರಣೆಯ ಕ್ರೌರ್ಯಗಳು ವರದಿಯಾಗಿ, ಬೆಳಕಿಗೆ ಬರುತ್ತಿವೆ. ಅದೇ ರೀತಿ, ಬಳ್ಳಾರಿ ಜಿಲ್ಲೆಯಲ್ಲಿ ಹೋಟೆಲ್ ಮಾಲೀಕರೊಬ್ಬರು ಅಸ್ಪೃಶ್ಯತೆಯ ಕ್ರೌರ್ಯ ಮೆರೆದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಜಿಲ್ಲೆಯ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದ ಹೋಟೆಲ್‌ನಲ್ಲಿ ದಲಿತರಿಗೆ ಊಟ ನೀಡಲು ನಿರಾಕರಿಸಿದ್ದಾರೆ. ‘ಹೋಟೆಲ್‌ ಮುಚ್ಚುತ್ತೇನೆ. ಆದರೆ, ನಿಮಗೆ ಊಟ ಕೊಡುವುದಿಲ್ಲ’ ಎಂದು ಹೋಟೆಲ್‌ನ ನಡೆಸುವ ಮಹಿಳೆ ದಲಿತ ಯುವಕರಿಗೆ ಹೇಳಿದ್ದಾರೆ ಎಂದು ವರದಿಯಾಗಿದೆ.

ಆಕೆಯ ನಡೆಯನ್ನು ಖಂಡಿಸಿರುವ ಯುವಕರು ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಕರಣದ ಮಾಹಿತಿ ಪಡೆದ ಕುರುಗೋಡು ತಹಶೀಲ್ದಾರ್ ರಾಘವೇಂದ್ರ ಹಾಗೂ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

Advertisements

ಪ್ರಕರಣ ಸಂಬಂಧ, ಹೆಚ್ಚಿನ ಮಾಹಿತಿಗಾಗಿ ಕುರುಗೋಡು ತಹಶೀಲ್ದಾರ್‌ ರಾಘವೇಂದ್ರ ಅವರನ್ನು ಈದಿನ.ಕಾಮ್‌ ಸಂಪರ್ಕಿಸಿದ್ದು, ಅವರು ನಮ್ಮ ಕರೆಗೆ ಉತ್ತರಿಸಿಲ್ಲ.

ಈ ಹಿಂದೆ, ಧಾರವಾಡದಲ್ಲಿ ದಲಿತರಿಗೆ ಹೋಟೆಲ್‌, ಸಲೂನ್‌ಗಳಲ್ಲಿ ಪ್ರವೇಶವಿಲ್ಲ ಎಂಬ ಸುದ್ದಿ ಬೆಳಕಿಗೆ ಬಂದಿತ್ತು. ಇತ್ತೀಚೆಗೆ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲುಕಿನ ಗೇರಮರಡಿ ಗ್ರಾಮದಲ್ಲಿ ದಲಿತ ಯುವಕನ ಮೇಲೆ ಗೊಲ್ಲ ಸಮುದಾಯದ ಗುಂಪು ಹಲ್ಲೆ ನಡೆಸಿತ್ತು. ಇದೀಗ, ಬಳ್ಳಾರಿಯಲ್ಲಿ ಅಸ್ಪೃಶ್ಯತೆ ಆಚರಣೆ ಪ್ರಕರಣ ಬೆಳಕಿಗೆ ಬಂದಿದೆ.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X