ಶಿವಮೊಗ್ಗ | ಗೃಹ ಸಚಿವರ ಕ್ಷೇತ್ರದಲ್ಲಿ ಮೂಲ ಸೌಕರ್ಯ ಕೊರತೆ; ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Date:

Advertisements
  • ರಸ್ತೆ ಹದಗೆಟ್ಟಿರುವ ಕಾರಣ ಕಾಲ್ನಡಿಗೆಯಲ್ಲೂ ಹೋಗುವುದು ಕಷ್ಟ
  • ಇಪ್ಪತ್ತು ವರ್ಷಗಳಿಂದ ಮನವಿ ಸಲ್ಲಿಸುತ್ತವೇ ಇರುವ ಗ್ರಾಮಸ್ಥರು

ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಿಗೆ ರಸ್ತೆ ಮತ್ತು ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಂಬ್ಳೆಬೈಲು, ಮಾದ್ಲುಮನೆ, ಸಣ್ಣಮನೆ, ಹೊಸಕೊಪ್ಪ, ಕಪ್ಪೆಹೊಂಡ, ಆಲೂರು, ಹತ್ತಳ್ಳಿ, ಚಿಕ್ಕಮತ್ತಿಗ, ಕಲ್ಲಳ್ಳಿ, ಶಿವಳ್ಳಿಕೊಪ್ಪ, ದೇಮ್ಲಾಪುರ, ಮಳಲಿಮಕ್ಕಿ, ಕೋಣಂದೂರು ಸಂಪರ್ಕಿಸುವ ನಾಲ್ಕೈದು ಕಿ.ಮೀ ರಸ್ತೆಯು ಸಂಪೂರ್ಣ ಹದಗೆಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ರಸ್ತೆ ಹದಗೆಟ್ಟಿರುವ ಕಾರಣ ಕಾಲ್ನಡಿಗೆಯಲ್ಲೂ ಹೋಗುವುದು ಕಷ್ಟವಾಗಿದೆ. ಆರೋಗ್ಯ ತುರ್ತು ಸಂದರ್ಭದಲ್ಲಿ ಯಾವ ಆಟೋ ಚಾಲಕರು, ಆ್ಯಂಬುಲೆನ್ಸ್, ಶಾಲಾ ವಾಹನಗಳು, ಈ ರಸ್ತೆಯಲ್ಲಿ ಬರಲು ಒಪ್ಪದೆ ಇರುವುದರಿಂದ ನಿತ್ಯ ಸಂಕಷ್ಟದಲ್ಲಿ ದಿನ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

Advertisements

ಹದಗೆಟ್ಟಿರುವ ರಸ್ತೆಯನ್ನು ದುರಸ್ತಿ ಮಾಡುವಂತೆ ಒತ್ತಾಯಿಸಿ ಇಲ್ಲಿನ ಜನಪ್ರತಿನಿಧಿಗಳಿಗೆ ಕಳೆದ ಇಪ್ಪತ್ತು ವರ್ಷಗಳಿಂದ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನೊಂದಿರುವ ಗ್ರಾಮಸ್ಥರು ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಮೂಲಸೌಕರ್ಯ ಕೊರತೆ; ಚುನಾವಣೆ ಬಹಿಷ್ಕರಿಸುವುದಾಗಿ ನೊಂದ ಗ್ರಾಮಸ್ಥರ ಎಚ್ಚರಿಕೆ

ಈ ಕುರಿತು ಲಯನ್ಸ್ ನಾಗೇಶ್ ಮಾತನಾಡಿ, “ಈ ಭಾಗದ ರಸ್ತೆಗಳು ದುರಸ್ತಿಯಾಗದೇ ಹಲವು ವರ್ಷಗಳೇ ಕಳೆದಿವೆ. ಒಂದು ಕೋಟಿ ರೂಪಾಯಿ ಅನುದಾನ ಬಂದಿದೆ ಎಂದು ಹೇಳಿದ್ದರು. ಆದರೆ, ಒಂದು ರೂಪಾಯಿಯೂ ಬಂದಿಲ್ಲ. ಹಲವು ಗ್ರಾಮಗಳನ್ನು ಸಂಪರ್ಕಿಸುವ ಈ ರಸ್ತೆ ದುರಸ್ತಿಯಾಗದೇ ಉಳಿದಿರುವುದು ದುರಂತ. ಹಿಂದೆ ಅನೇಕ ಘಟನೆಗಳು ಇಲ್ಲಿ ನಡೆದಿವೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇದೇ ಕ್ಷೇತ್ರದವರು. ಚುನಾವಣಾ ಬಹಿಷ್ಕಾರದಿಂದ ನಾವೆಂದೂ ಹಿಂದೆ ಸರಿಯುವುದಿಲ್ಲ” ಎಂದರು.

ಶಿವಾನಂದ ಎಂಬುವರು ಮಾತನಾಡಿ, “ನಾನು ಮೊದಲ ಸಲ ಗ್ರಾಮ ಪಂಚಾಯಿತಿಗೆ ಆಯ್ಕೆ ಆಗಿದ್ದೇನೆ, ಒಂದು ರೂಪಾಯಿ ಕೂಡ ಅನುದಾನ ಇಲ್ಲ. ನಮ್ಮೂರಿಗೆ ನೀರಿಲ್ಲ, ರಸ್ತೆ ಇಲ್ಲ, ಬೀದಿ ದೀಪ ಇಲ್ಲ. ತಾಲೂಕಿನಲ್ಲಿ ಎಲ್ಲ ಅಭಿವೃದ್ಧಿ ಆಗಿದೆ, ಶಾಂತವೇರಿ ಗೋಪಾಲಗೌಡ, ಕುವೆಂಪು ಹುಟ್ಟಿದ್ದು ಎಂದು ಭಾಷಣ ಮಾಡ್ತಾರೆ. ಆದರೆ, ಅಭಿವೃದ್ಧಿ ಮಾತ್ರ ಮರಿಚಿಕೆ. ಈ ವರ್ಷ ಯಾವುದೇ ಕಾರಣಕ್ಕೂ ಮತ ಹಾಕೋದಿಲ್ಲ” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X