ಗದಗ | ಚಿಕ್ಕನರಗುಂದದಲ್ಲಿ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

Date:

Advertisements

ನರಗುಂದ ತಾಲ್ಲೂಕಿನ ಚಿಕ್ಕನರಗುಂದ ಗ್ರಾಮದಲ್ಲಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆಯ 4ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ ಚಾಲನೆ ನೀಡಿದರು.

ʼವಿಶ್ವ ರೇಬಿಸ್ʼ ದಿನದ ಅಂಗವಾಗಿ ಲಸಿಕಾ ಅಭಿಯಾನ ನಡೆಡಿದೆ ರೇಬಿಸ್ ಲಸಿಕೆ ಹಾಕಿಸಿ ರೇಬಿಸ್ ರೋಗ ಮುಕ್ತ ವಲಯವನ್ನು ಮಾಡಬೇಕು. ಪ್ರಥಮ ಚಿಕಿತ್ಸೆ ರೈತರ ನಡುವೆ ಸಂಪರ್ಕ ಕೊಂಡಿಯಂತೆ ಕಾರ್ಯ ನಿರ್ವಹಿಸಬೇಕೆಂದು ಸೂಚಿಸಿದರು. ಈ ಲಸಿಕಾ ಕಾರ್ಯಕ್ರಮ ಒಂದು ತೀಂಗಳುಗಳ ಕಾಲ ನಡೆಯಲಿದೆ. ಪಶು ಆಸ್ಪತ್ರೆಯ ಸಿಬ್ಬಂದಿ ಚಿಕ್ಕನರಗುಂದ, ಬೆನಕನಕೊಪ್ಪ, ಸಂಕಧಾಳ, ಅರಿಷಿನಗೋಡಿ, ಹಿರೇಕೊಪ್ಪ, ಕುರಗೋವಿನಕೊಪ್ಪ ಗ್ರಾಮದ ರೈತರ ಮನೆ ಬಾಗಿಲಿಗೆ ಬಂದು ಸೇವೆ ಸಲ್ಲಿಸಲಿದ್ದಾರೆ. ನಿಮ್ಮ ರಾಸುಗಳಿಗೆ ಲಸಿಕೆ ಹಾಕಲಿದ್ದಾರೆ. ಹೀಗಾಗಿ ಎಲ್ಲಾ ಗ್ರಾಮದ ರೈತರು ತಪ್ಪದೇ ನಿಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ ಎಂದು ಮನವಿ ಮಾಡಿದರು.

ಚಿಕ್ಕನರಗುಂದ ಪಶು ಚಿಕಿತ್ಸಾಲಯದ ವ್ಯಾಪ್ತಿಗೆ ಸೇರುವ ಆರು ಹಳ್ಳಿಗಳಲ್ಲಿನ 3,572 ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಹೊಂದಿದ್ದು, ಲಸಿಕೆದಾರರು 30 ದಿನಗಳ ಕಾಲ ಮನೆ ಮನೆಗಳಿಗೆ ತೆರಳಿ ಲಸಿಕೆ ಹಾಕುತ್ತಾರೆ. ಈ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸಿ ಯಶಸ್ವಿಗೊಳಿಸಬೇಕು. ಎಲ್ಲ ರೈತರು ತಮ್ಮ ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಬೇಕೆಂದು ಚಿಕ್ಕನರಗುಂದ ಪಶು ವೈದ್ಯಕೀಯ ಪರೀಕ್ಷಕ ವೈ.ಎಸ್.ಚಂದ್ರಗಿರಿ ತಿಳಿಸಿದರು.

Advertisements

ಈ ಸಂಧರ್ಭದಲ್ಲಿ ಶಿವಾನಂದ ಬಾಚಿ, ಮಂಜುನಾಥ ಹೂಲಿ, ಮಲ್ಲು ಹೊಸಗಾಣಿಗೇರ, ಶಿವು ಮೇಟಿ, ಚನ್ನಪ್ಪ ಹಡಪದ, ಪಶು ಚಿಕಿತ್ಸಾಲಯ ಸಿಬ್ಬಂದಿ, ಪಶು ಸಕಿಯರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X