ಕಲಬುರಗಿ | ವಕೀಲ ಕೊಲೆ ಪ್ರಕರಣ: ಮತ್ತೆ ಇಬ್ಬರ ಬಂಧನ

Date:

Advertisements

ಕಲಬುರಗಿ ಹೊರವಲಯದ ಉದನೂರು ಗ್ರಾಮದ ವಕೀಲ ಈರಣ್ಣಗೌಡ ಪಾಟೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಮತ್ತೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

ದಂಪತಿಗಳಾದ ನೀಲಕಂಠ ಪಾಟೀಲ್ ಹಾಗೂ ಸಿದ್ದಮ್ಮ ಪಾಟೀಲ್ ಬಂಧಿತ ಆರೋಪಿಗಳು. ಕೊಲೆ ಪ್ರಕರಣದ ಬಳಿಕ ಪ್ರಮುಖ ಆರೋಪಿ ನೀಲಕಂಠರಾವ್‌ ಪಾಟೀಲ್ ಪರಾರಿಯಾಗಿದ್ದನು. ಈತನಿಗಾಗಿ ಪೊಲೀಸರು ಹುಡುಕಾಟ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜತೆಗೆ ನಿಲಕಂಠರಾವ್‌ ಪತ್ನಿ ಸಿದ್ದಮ್ಮ ಪಾಟೀಲ್‌ ಅವಳನ್ನು ಬಂಧಿಸಿದ್ದಾರೆ.

ಡಿಸೆಂಬರ್​​ 7 ರಂದು ಕಲಬುರಗಿ ನಗರದ ಅರ್ಪಾಟಮೆಂಟ್​ ಒಂದರಲ್ಲಿ ವಕೀಲ ಈರಣ್ಣಗೌಡ ಪಾಟೀಲ್ ಅವರನ್ನು ಹಾಡುಹಗಲೇ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಕ್ಕೂ ಮುನ್ನ ಮೂವರು ಪ್ರಮುಖ ಆರೋಪಿಗಳಾದ ಮಲ್ಲಿನಾಥ, ಬಸಣ್ಣಾ , ಅವಣಪ್ಪಾ ಅವರನ್ನು ಬಂಧಿಸಲಾಗಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಮಹುವಾ ಉಚ್ಚಾಟನೆ; ಉಳಿಗಾಲವಿಲ್ಲವೇ ಅದಾನಿ ಎದುರು ಹಾಕಿಕೊಂಡರೆ?

ಆಸ್ತಿ ಸಂಬಂಧಿತ ವಿಚಾರವಾಗಿ ವಕೀಲ ಈರಣ್ಣಗೌಡ ಪಾಟೀಲ್‌ ಅವರ ಹತ್ಯೆ ನಡೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X