ಚಿಕ್ಕಮಗಳೂರು | ಜನರ ನೋವಿಗೆ ಮಾಧ್ಯಮ ದನಿಯಾಗಲಿ : ಭರತ್‌ ಹೆಬ್ಬಾಳ

Date:

Advertisements

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರಂಭಾಪುರಿ ಜಗದ್ಗುರು ರುದ್ರಮುನಿಶ್ವರ ಕಲ್ಯಾಣ ಮಂಟಪದಲ್ಲಿ ಈದಿನ.ಕಾಮ್ʼ ಮಾಧ್ಯಮ ಸಂಸ್ಥೆಯು ಎರಡು ವರ್ಷ ಪೂರೈಸಿದ ಹಿನ್ನಲೆ ಆಯೋಜಿಸಿದ್ದ ʼಈದಿನ ಸಮಾಗಮ ಹಾಗೂ ಮಲೆನಾಡಿನ ಬಿಕ್ಕಟ್ಟುಗಳುʼ ಕುರಿತು ವಿಶೇಷ ʼಸಮಾಗಮʼ ಕಾರ್ಯಕ್ರಮ ಜರುಗಿತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ʼಈದಿನ.ಕಾಮ್ʼ ಮಾಧ್ಯಮದ ಸಂಪನ್ಮೂಲ ವ್ಯಕ್ತಿ ಭರತ್ ಹೆಬ್ಬಾಳ ಮಾತನಾಡಿ, ʼಸಮಾಜದಲ್ಲಿ ನೊಂದ, ನಿರ್ಗತಿಕ, ದೀನ ದಲಿತರ ಸಮಸ್ಯೆಗಳಿಗೆ ಮುಕ್ತಿಗೊಳಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಸಮಾಜಮುಖಿ ಪತ್ರಿಕೋದ್ಯಮ ನಡೆಸಲು ನಾವು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದೇವೆ. ಕಳೆದ ಚುನಾವಣೆಗಳಲ್ಲಿ ಕರಾರುವಕ್ಕಾಗಿ ಸಮೀಕ್ಷೆ ನಡೆಸುವ ಮೂಲಕ ದೇಶದ ಗಮನ ಸೆಳೆದಿದ್ದೇವೆ ಎಂದರು. ಈದಿನ ಮಾಧ್ಯಮದ ಮುಂದಿನ ಕಾರ್ಯಗಳೇನು ಹಾಗೂ ಜನರಭಾಗಿತ್ವ ನಮ್ಮೊಂದಿಗೆ ಹೇಗಿರಬೇಕುʼ ಎಂದು ಮಾಹಿತಿ ನೀಡಿದರು.

ಈದಿನ ಕೇಂದ್ರೀಯ ಸಂಯೋಜಕ ಸಂತೋಷ್ ಎಚ್.ಎಂ ಮಾತನಾಡಿ, ʼಈದಿನʼ ಮಾಧ್ಯಮ ಎಂಬುದು ನಾಗರಿಕ ಪತ್ರಕರ್ತರನ್ನು ಹುಟ್ಟು ಹಾಕುವ ಮೂಲಕ ಜನರ ಕುಂದು ಕೊರತೆಗಳಿಗೆ ಜನರೇ ಸುದ್ದಿ ಬರೆಯುವಂತೆ ಪ್ರೇರಣೆ ನೀಡಿ ಪ್ರೋತ್ಸಾಹಿಸುವ ವಿಶಿಷ್ಟ ಮಾಧ್ಯಮವಾಗಿದೆ. ಈದಿನ ಮಾಧ್ಯಮ ಮತ್ತಷ್ಟು ಗಟ್ಟಿಗೊಳಿಸಲು ಈ ಭಾಗದಲ್ಲಿ ಹೆಚ್ಚಿನ ನಾಗರಿಕ ಪತ್ರಕರ್ತರ ಅಗತ್ಯವಿದೆ. ಇದು ಒಂದು ಸಂಸ್ಥೆಯಲ್ಲದೇ ಜನರೇ ರೂಪಿಸಿಕೊಂಡ ಮಾಧ್ಯಮವಾಗಿದ್ದು, ಇದಕ್ಕೆ ನಿಮ್ಮೆಲ್ಲರ ಸಹಕಾರ ಮುಖ್ಯವಾಗಿದೆʼ ಎಂದು ಹೇಳಿದರು.

Advertisements
WhatsApp Image 2024 10 01 at 3.08.10 PM
ಸಮಾಗಮದಲ್ಲಿ ವಿವಿಧ ತಾಲೂಕಿನ 60ಕ್ಕೂ ಹೆಚ್ಚಿನ ʼಈದಿನʼ ನಾಗರಿಕ ಪತ್ರಕರ್ತರು ಪಾಲ್ಗೊಂಡಿದ್ದರು.

ಮಲೆನಾಡಿನ ಬಿಕ್ಕಟ್ಟುಗಳು ಹಾಗೂ ಸಮಸ್ಯೆಗಳಿಗೆ ಮಾಧ್ಯಮ ಸ್ಪಂದಿಸಬೇಕು ಕುರಿತು ಪರಿಸರವಾದಿ
ಡಾ.ಕಲ್ಕುಳಿ ವಿಠಲ ಹೆಗ್ಡೆ ಅವರು ವಿಸ್ತ್ರತವಾಗಿ ವಿವರಿಸಿದರು. ಮಲೆನಾಡಿನ ಪ್ರತಿ ತಾಲೂಕು, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಜನಪ್ರತಿನಿಧಿಗಳಿಗೆ, ಅಧಿಕಾರಿಗಳ ಗಮನಕ್ಕೆ ಬರುವಂತೆ ಪ್ರಕಟಿಸಬೇಕು ಎಂದು ತಿಳಿಸಿದರು.

ಈದಿನ ಚಿಕ್ಕಮಗಳೂರು ಜಿಲ್ಲಾ ಸಂಯೋಜಕಿ ಗಿರಿಜಾ ಎಸ್.ಜಿ ಪ್ರಾಸ್ತಾವಿಕವಾಗಿ ಮಾತಾಡಿದರು. ಸಮಾಗಮದಲ್ಲಿ ಭಾಗವಹಿಸಿದ ಈದಿನ ಮಾಧ್ಯಮ ಓದುಗರು ತಮ್ಮ ಅಭಿಪ್ರಾಯ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅತ್ಯಾಚಾರ : 17 ವರ್ಷದ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಾರ್ಯಕ್ರಮದಲ್ಲಿ ಲೇಖಕ ಗುರುಮೂರ್ತಿ ಜೋಗಿಬೈಲು, ರೈತ ಸಂಘಟನೆ ಹಿರಿಯ ಮುಖಂಡ ಸುರೇಶ್ ಭಟ್ರು , ಹಿರಿಯ ಪತ್ರಕರ್ತ ಯಜ್ಞಾಪುರುಷ ಭಟ್ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಎಂಟು ತಾಲ್ಲೂಕಿನ ಪತ್ರಕರ್ತರು, ಬರಹಗಾರರು ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಪರಿಸರ ಪ್ರೇಮಿಗಳು ಭಾಗವಹಿಸಿದ್ದರು. ಈದಿನ ಜೋನಲ್‌ ಸಂಯೋಜಕ ಮುಹಮ್ಮದ್ ಶಾರೂಖ್ ನಿರೂಪಿಸಿ, ಸ್ವಾಗತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X