ದಕ್ಷಿಣ ಕನ್ನಡ | ಗಾಂಧೀಜಿ ಕುರಿತು ಸತ್ಯ ವಿಚಾರ ಪಸರಿಸೋಣ: ರಮಾನಾಥ ರೈ

Date:

Advertisements

ನಮ್ಮ ದೇಶದ ಜಾತ್ಯತೀತ ಪರಂಪರೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಮಹಾತ್ಮ ಗಾಂಧೀಜಿ. ಅವರ ಕುರಿತು ಅಪಪ್ರಚಾರ ನಡೆಯುತ್ತಿರುವ ಕಾಲಘಟ್ಟದಲ್ಲಿ ಅವರ ಜೀವನ, ಆದರ್ಶ, ಮೌಲ್ಯಗಳ ಕುರಿತ ಸತ್ಯ ವಿಚಾರಗಳನ್ನು ಸಮಾಜದಲ್ಲಿ ಪಸರಿಸುವ ಕಾರ್ಯ ನಡೆಯಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆದ ಗಾಂಧೀಜಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಗಾಂಧೀಜಿ ಕುರಿತು ತಪ್ಪು ಭಾವನೆಗಳನ್ನು ಇಟ್ಟುಕೊಂಡವರು ಬಹಳಷ್ಟು ಮಂದಿ ಇದ್ದಾರೆ. ಆದರೆ ಗಾಂಧೀಜಿ ಇಡೀ ಜಗತ್ತು ಮೆಚ್ಚಿದ, ಒಪ್ಪಿಕೊಂಡ ನಾಯಕ, ಗಾಂಧಿ ಜನ್ಮದಿನವನ್ನು ಜಗತ್ತಿನ ದೇಶಗಳು ಅಹಿಂಸಾ ದಿನವಾಗಿ ಆಚರಿಸುತ್ತಿದ್ದರೆ, ನಮ್ಮ ದೇಶದಲ್ಲಿ ಗಾಂಧಿ ಹತ್ಯೆ ಮಾಡಿದವರನ್ನೇ ವೈಭವೀಕರಿಸುವುದು ನೋವು ತರುವ ವಿಚಾರ. ಗಾಂಧೀಜಿ ಯಾಕೆ ಹುತಾತ್ಮರಾದರು ಎನ್ನುವುದನ್ನು ವಿಮರ್ಶೆ ಮಾಡಬೇಕಾದ ಕಾಲ ಸನ್ನಿಹಿತವಾಗಿದೆ” ಎಂದು ಹೇಳಿದರು.

“ಅಹಿಂಸಾ ಚಳವಳಿ ಮೂಲಕ ಸ್ವಾತಂತ್ರ್ಯ ತಂದುಕೊಡಬಹುದು ಅಂತ ಇಡೀ ಪ್ರಪಂಚಕ್ಕೆ ತೋರಿಸಿಕೊಟ್ಟದ್ದು ಮಹಾತ್ಮಾ ಗಾಂಧೀಜಿ. ಎಷ್ಟೋ ವರ್ಷಗಳ ಕಾಲ ಜೈಲುವಾಸವನ್ನೂ ಅನುಭವಿಸಿದ್ದಾರೆ. ಆದರೆ ಗಾಂಧೀಜಿ ದೇಶಕ್ಕಾಗಿ ಏನು ತ್ಯಾಗ ಮಾಡಿದ್ದಾರೆ ಎಂದು ಲಘುವಾಗಿ ಮಾತನಾಡುವವರಿದ್ದಾರೆ. ಈ ಹಿನ್ನೆಲೆಯಲ್ಲಿ, ಗಾಂಧೀಜಿ ಬಗ್ಗೆ ಸತ್ಯ ವಿಚಾರಗಳುಳ್ಳ ಪುಸ್ತಕಗಳನ್ನು ಓದಿಕೊಂಡು, ಸತ್ಯ ವಿಚಾರಗಳನ್ನು ಸಮಾಜದಲ್ಲಿ ಪಸರಿಸಬೇಕು. ಗಾಂಧೀಜಿ ಅವರ ಕೊಡುಗೆಗಳನ್ನು ಸದಾ ಕಾಲ ದೇಶ ಸ್ಮರಿಸಿಕೊಳ್ಳಬೇಕು” ಎಂದರು.

Advertisements

“ಇಂದು ದೇಶದ ಪರಿಸ್ಥಿತಿ ಅಪಾಯದಲ್ಲಿದೆ. ಆಡಳಿತ ಯಂತ್ರ ಒಂದು ದೃಷ್ಟಿಯಲ್ಲಿ ಅಪಾಯದ ಕಡೆ ಹೋಗ್ತಿದೆ. ಅದನ್ನು ತಡೆಯಬೇಕಾದರೆ ದೇಶದ ಜಾತ್ಯತೀತ ಚಳವಳಿಯನ್ನು ಸ್ಥಿರಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಒಂದಾಗುವ ಅಗತ್ಯವಿದೆ” ಎಂದು ರೈ ಹೇಳಿದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮಾತನಾಡಿ, “ಗಾಂಧೀಜಿ ಆಚಾರ ವಿಚಾರಗಳು ಇಂದಿಗೂ ಪ್ರಸ್ತುತ. ಗಾಂಧೀಜಿ ಬಗ್ಗೆ ಇಂದಿನ ಪೀಳಿಗೆಗೆ ಶಾಲೆ ಕಾಲೇಜುಗಳಲ್ಲಿ, ಯುವಕರಿಗೆ ಆದಷ್ಟು ತಿಳಿಹೇಳುವ ಕೆಲಸ ಮಾಡಬೇಕಿದೆ. ಗಾಂಧೀಜಿ ಕಾಣುತ್ತಿದ್ದ ಕನಸನ್ನು ಯಾವಾಗ ಮರೆಯುತ್ತೇವೋ ಅಂದು ದೇಶದ ಪ್ರಜಾಪ್ರಭುತ್ವಕ್ಕೆ ಕಂಟಕ ಬರಲಿದೆ. ಹಾಗಾಗಿ ಗಾಂಧೀಜಿ ಆದರ್ಶಗಳನ್ನು ಯುವ ಪೀಳಿಗೆಗೆ ತಿಳಿಸುವುದು ಎಲ್ಲರ ಕರ್ತವ್ಯ” ಎಂದು ಹೇಳಿದರು.

ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಕೃಪಾ ಆಳ್ವಾ, ಬ್ಲಾಕ್ ಅಧ್ಯಕ್ಷರಾದ ಅಬ್ದುಲ್ ಸಲೀಂ, ಪ್ರಕಾಶ್ ಸಾಲಿಯಾನ್, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರಾದ ಬಿ.ಎಂ. ಅಬ್ಬಾಸ್ ಅಲಿ, ಮನೋರಾಜ್ ರಾಜೀವ್, ಲಾರೆನ್ಸ್ ಡಿಸೋಜ, ಸುಹಾನ್ ಆಳ್ವ, ಅಬ್ದುಲ್ ರವೂಫ್, ಕಿರಣ್ ಬುಡ್ಲೆಗುತ್ತು, ನೀರಜ್‌ಪಾಲ್, ಶಬೀರ್ ಎಸ್., ಸುಧೀರ್ ಟಿ ಕೆ, ಪ್ರಕಾಶ್ ಆಳ್ವಿನ್, ತನ್ವಿರ್ ಶಾ, ಗಣೇಶ್ ಪೂಜಾರಿ, ವಿಕಾಸ್ ಶೆಟ್ಟಿ, ಹೈದರ್ ಬೋಳಾರ್, ಸುರೇಖಾ ಚಂದ್ರಹಾಸ್, ಲಿಯಾಕತ್ ಶಾ, ಯೋಗೀಶ್ ನಾಯಕ್, ಚಂದ್ರಕಲಾ ಜೋಗಿ, ಸುರೇಶ್ ಪೂಜಾರಿ, ನಮಿತಾ ಡಿ ರಾವ್, ಸಲೀಮ್ ಮಕ್ಕ, ಶಾಂತಲಾ ಗಟ್ಟಿ, ಜೋರ್ಜ್, ಸಬಿತಾ ಮಿಸ್ಕಿತ್, ಮಲರ್ ಮೋನು, ದಿನೇಶ್ ರಾವ್, ನಝೀರ್ ಬಜಾಲ್ ಇದ್ದರು. ಮಾಜಿ ಮೇಯರ್‌ ಶಶಿಧರ್ ಹೆಗ್ಡೆ ಸ್ವಾಗತಿಸಿದರು. ಶುಭೋದಯ ಆಳ್ವ ವಂದಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X