ಬರಿದಾಗುತ್ತಿದೆ ಲಿಂಗನಮಕ್ಕಿ ಜಲಾಶಯ; ಲಾಂಚ್‌ಗಳ ಸಂಚಾರಕ್ಕೆ ಸಂಕಷ್ಟ

Date:

Advertisements

ಶರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಲಿಂಗನಮಕ್ಕಿ ಅಣೆಕಟ್ಟೆಯ ಹಿನ್ನೀರು ಬರಿದಾಗುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಮಳೆಯಾಗದಿದ್ದರೆ, ಇರುವ ನೀರು ಮತ್ತಷ್ಟು ಖಾಲಿಯಾಗಲಿದೆ. ಹೆಚ್ಚು ನೀರಿಲ್ಲದೆ ಅಂಬಾರಗೋಡ್ಲು ಮತ್ತು ಕಳಸವಳ್ಳಿ ನಡುವೆ ಸಂಪರ್ಕಕೊಂಡಿಯಾಗುವ ಲಾಂಚ್‌ಗಳ ಸಂಚಾರಕ್ಕೆ ಸಂಕಷ್ಟ ಎದುರಾಗಿದೆ. ಕಡಿಮೆ ನೀರಿನಲ್ಲಿ ಲಾಂಚ್‌ಗಳು ಸಾಗುವುದರಿಂದ ಅಪಾಯ ಎದುರಾಗಬಹುದು ಎಂಬ ಆತಂಕ ಸ್ಥಳೀಯರಲ್ಲಿ ಮನೆ ಮಾಡಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿರುವ ಅಣೆಕಟ್ಟೆಗೆ ನೀರು ತರುವ ಭಾಗದಲ್ಲಿ ಮಳೆಯಾಗಲಿದ್ದರೆ, ಲಾಂಚ್‌ಗಳ ಸಂಚಾರವನ್ನು ಕಷ್ಟವಾಗುತ್ತದೆ. ನೀರಿನಲ್ಲಿ ಕೆಳಭಾಗದಲ್ಲಿರುವ ಮರದ ದಿಮ್ಮಿಗಳು ಲಾಂಚ್‌ನ ರೇಡರ್‌ಗಳಿಗೆ ಸಕ್ಕಿಕೊಂಡು ಅಪಾಯ ಸಂಭವಿಸಬಹುದು. ಹಾಗಾಗಿ, ಲಾಂಚ್‌ಗಳ ಸಂಚಾರ ನಿಲ್ಲಿಸಬೇಕಾಗುತ್ತದೆ ಎಂದು ಒಳ ಜಲಜಾರಿಗೆ ಮಂಡಳಿಯ ಅಧಿಕಾರಿಗಳು ಹೇಳಿದ್ದಾರೆ.

ನೀರಿಲ್ಲದ ಕಾರಣ ನದಿ ದಡದಿಂದ ಲಾಂಚ್‌ಗಳಿಗೆ ಜನರು ಮತ್ತು ವಾಹನಗಳು ಹತ್ತಲೂ ಕೂಡ ಸಮಸ್ಯೆಯಾಗುತ್ತದೆ. ಆ ರೀತಿ ಸಮಸ್ಯೆಯಾಗಬಾರದು ಎಂದರೆ, ಲಾಂಚ್‌ಗಳ ಬಾಗಿಲುಗಳನ್ನು ನವೀಕರಿಸಬೇಕು. ಅಧಿಕಾರಿಗಳು ಅದಕ್ಕಾಗಿ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಹೇಳಿದ್ದಾರೆ.

Advertisements

ಲಾಂಚ್‌ಗಳ ಸಂಚಾರವನ್ನೇ ನಿಲ್ಲಿಸಿಬಿಟ್ಟರೆ, ಉದ್ಯೋಗಿಗಳು, ಆಸ್ಪತ್ರೆಗೆ ತೆರಳುವ ರೋಗಿಗಳು, ಗರ್ಭಿಣಿಯರು ಸೇರಿದಂತೆ ಹಲವರಿಗೆ ಸಮಸ್ಯೆಯಾಗುತ್ತದೆ ಎಂದು ಉಭಯ ಗ್ರಾಮಗಳ ನಿವಾಸಿಗಳು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X