ಬೀದರ್‌ | ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸಿದ ಪಕ್ಷಕ್ಕೆ ಲಿಂಗಾಯತರು ಬೆಂಬಲಿಸಿ : ರೊಟ್ಟೆ

Date:

Advertisements

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಪಕ್ಷಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತರು ಬೆಂಬಲಿಸಬೇಕು ಎಂದು ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಹೇಳಿದರು.

ಬೀದರ್‌ನ ಪತ್ರಿಕಾಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ಸಮಿತಿ ರಚಿಸಿ ಕೇಂದ್ರಕ್ಕೆ ವರದಿ ಸಲ್ಲಿಸಿದ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್‌ ಸರ್ಕಾರಕ್ಕೆ ಲಿಂಗಾಯತರು ಮತ ಚಲಾಯಿಸುವ ಮೂಲಕ ಕೋಮುವಾದಿ ಸರ್ಕಾರವನ್ನು ಸೋಲಿಸಬೇಕು ಎಂದು” ಮನವಿ ಮಾಡಿದರು.

“2017ರಲ್ಲಿ ಬೀದರ್‌ನಲ್ಲಿ ನಡೆದ ಲಿಂಗಾಯತ ಸ್ವತಂತ್ರ ಧರ್ಮ ಸಾಂವಿಧಾನಿಕ ಮಾನ್ಯತೆಗಾಗಿ ನಡೆದ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಸಂಸದ ಭಗವಂತ ಖೂಬಾರವರನ್ನುಆಹ್ವಾನಿಸಿದರೆ, ಲಿಂಗಾಯತ ಹೋರಾಟದಲ್ಲಿ ಭಾಗವಹಿಸಬಾರದೆಂದು ಸಂಘ ಪರಿವಾರದ ಆದೇಶವಿದೆʼ ಎಂದು ಉತ್ತರಿಸಿದರು. ದೆಹಲಿಯಲ್ಲಿ ಲಿಂಗಾಯತ ಹೋರಾಟ ನಡೆದ ವೇಳೆ ಪೊಲೀಸರು ಸಾವಿರಾರು ಲಿಂಗಾಯತರ ಮೇಲೆ ಲಾಟಿ ಪ್ರಹಾರ ನಡೆಸಿ ಬಂಧಿಸಿದರು. ಆದರೆ ಅಲ್ಲೇ ಇದ್ದ ಭಗವಂತ ಖೂಬಾ ನಮಗೆ ಸ್ಪಂದಿಸಲಿಲ್ಲ. ಇಂತಹ ಲಿಂಗಾಯತ ವಿರೋಧಿ ಸಂಸದರಿಗೆ ಲಿಂಗಾಯತರು ಯಾಕೆ ಮತ ಹಾಕಬೇಕು” ಎಂದು ಪ್ರಶ್ನಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಅಭಿವೃದ್ಧಿ ಪ್ರಚಾರದಿಂದ ಕೋಮು ಧೃವೀಕರಣಕ್ಕೆ ಮೋದಿ ಬದಲಾಗಿದ್ದೇಕೆ? ಗೆಲ್ಲುವುದಾ ದ್ವೇಷ ಭಾಷಣ?

ಬಿಜೆಪಿ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆಂದು ಸ್ವಪಕ್ಷೀಯರೇ ಭಗವಂತ ಖೂಬಾ ಅವರನ್ನು ವಿರೋಧಿಸಿ ಟಿಕೆಟ್‌ ಕೊಡಬೇಡಿ ಎಂದು ಹೈಕಮಾಂಡ್‌ಗೆ ಎಚ್ಚರಿಸಿದರು. ಆದರೆ ಸನಾತನ ಧರ್ಮಕ್ಕೆ ಗೊಂಬೆಯಂತೆ ಕುಣಿಯುವ ವ್ಯಕ್ತಿ ಭಗವಂತ ಖೂಬಾಗೆ ಮತ್ತೆ ಬಿಜೆಪಿ ಟಿಕೆಟ್‌ ನೀಡಿದೆ. ವೈದಿಕ ಸಿದ್ಧಾಂತ ಒಪ್ಪುವ ಭಗವಂತ ಖೂಬಾರನ್ನು ಸೋಲಿಸುವ ಮೂಲಕ ಲಿಂಗಾಯತರು ಕಲ್ಯಾಣ ನಾಡಿನಲ್ಲಿ ಬಸವತತ್ವ ಸಿದ್ಧಾಂತ ಒಪ್ಪುವ ಸರ್ಕಾರವನ್ನು ಬೆಂಬಲಿಸಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X