ಲೋಕಸಭಾ ಚುನಾವಣೆ | 85 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತದಾನಕ್ಕೆ ಅವಕಾಶ

Date:

Advertisements

ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ರವರ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ ಸೇರಿದಂತೆ 3 ಲೋಕಸಭಾ ಕ್ಷೇತ್ರಗಳಲ್ಲಿ ಬರುವ ಮತದಾರರ ಪಟ್ಟಿಯಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ವಿಶೇಷ ಚೇತನರು (ಶೇ.40ಕ್ಕಿಂತ ಹೆಚ್ಚು ಅಂಗವಿಲತೆ ಉಳ್ಳವರು) ಅಂಚೆ ಮತದಾನ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಬಿಬಿಎಂಪಿ ಹೇಳಿದೆ.

ಈ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಿರುವ ಪಾಲಿಕೆ, “ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆ, ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರು ಅಂಚೆ ಮತದಾನ ಮಾಡುವ ನಿಟ್ಟನಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮಾರ್ಚ್‌ 21 ರಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರ ಪಟ್ಟಿಯನುಸಾರ ಮನೆ-ಮನೆ ಭೇಟಿ ನೀಡಿ ಪಟ್ಟಿ ಸಂಗ್ರಹಿಸಿ 12ಡಿ ನಮೂನೆಗಳ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ” ಎಂದಿದೆ.

“85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೆತನರು ಮತಗಟ್ಟೆಗಳಿಗೆ ತೆರಳಿ ಮತ ಚಲಾಯಿಸುವ ಅವಕಾಶವಿದ್ದು, ಅಂಚೆ ಮತದಾನ ಮಾಡಲು 12ಡಿ ನಮೂನೆ ಮೂಲಕ ದೃಢೀಕರಣ ನೀಡಿದ ನಂತರ ಮತಗಟ್ಟೆಗೆ ತೆರಳಿ ಮತದಾನ ಮಾಡುವ ಅವಕಾಶವಿರುವುದಿಲ್ಲ” ಎಂದು ಹೇಳಿದೆ.

Advertisements

“ಹಿರಿಯ ನಾಗರಿಕರ ವಯಸ್ಸು 80 ರಿಂದ 85ಕ್ಕೆ ಹೆಚ್ಚಿಸಿರುವುದರಿಂದ ಎವಿಎಸ್‌ಸಿ ವರ್ಗದಡಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಅಂಚೆ ಮತಪತ್ರ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಚುನಾವಣಾ ಅಧಿಸೂಚನೆಯ ನಂತರ 5 ದಿನಗಳ ಒಳಗಾಗಿ ಭರ್ತಿಮಾಡಿದ ಧೃಡೀಕೃತ 12ಡಿ ನಮೂನೆಯನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗೆ ಸಲ್ಲಿಸಬೇಕಾಗಿರುತ್ತದೆ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಹೋಳಿ ಹಬ್ಬ | ರೈನ್‌ ಡ್ಯಾನ್ಸ್‌, ಪೂಲ್‌ ಡ್ಯಾನ್ಸ್‌ಗೆ ಕಾವೇರಿ ನೀರು, ಬೋರ್‌ವೆಲ್‌ ನೀರು ಬಳಸದಿರಿ ಎಂದ ಜಲಮಂಡಳಿ

ಚುನಾವಣಾ ವೆಬ್ ಸೈಟ್ ಮೂಲಕ ನೋಂದಣಿಗೆ ಅವಕಾಶ

“ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರ ಮನೆ-ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ 12ಡಿ ನಮೂನೆ ಪಡೆದು ದೃಢೀಕರೀಸಲು ಸಾಧ್ಯವಾಗದಿದ್ದಲ್ಲಿ, ಭಾರತ ಚುನಾವಣಾ ಆಯೋಗದ ವೆಬ್‌ಸೈಟ್ https://www.eci.gov.in/ಗೆ ಭೇಟಿ ನೀಡಿದರೆ 12ಡಿ ನಮೂನೆಗಳು ಲಭ್ಯವಿದ್ದು, ಸದರಿ ನಮೂನೆಗಳನ್ನು ಭರ್ತಿಮಾಡಿ ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೆ 12ಡಿ ನಮೂನೆಗಳನ್ನು ನೇರವಾಗಿ ಸಲ್ಲಿಸುವ ಅವಕಾಶವೂ ಇದೆ” ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X