ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ ಬಡವರ ಮನೆ ಬೆಳಕಾಗಿದೆ. ಸಂವಿಧಾನ ಅಡಿಯಲ್ಲಿ ಪ್ರತಿಯೊಬ್ಬರಿಗೂ ನ್ಯಾಯ ದೊರಕಿದೆ. ಆದರೆ ಬಿಜೆಪಿಯವರು ಸಂವಿಧಾನ ವಿರೋಧಿಗಳು ಹಾಗೂ ಸಂವಿಧಾನವನ್ನು ಬದಲಾಯಿಸುವುದಾಗಿ ಘಂಟಾಘೋಷವಾಗಿ ಹೇಳಿಕೆ ನೀಡಿದ್ದಾರೆ. ಅದಕ್ಕಾಗಿ ಬಡವರ ಪರ, ನಿರಾಶ್ರಿತರ ಪರವಿರುವ ಕಾಂಗ್ರೆಸ್ಗೆ ಮತ ನೀಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮನವಿ ಮಾಡಿದರು.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹಾವೇರಿ-ಗದಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರು ಹಾವೇರಿ ಜಿಲ್ಲೆಯಲ್ಲಿ ಭರ್ಜರಿ ಮತಯಾಚನೆ ಮಾಡಿದ ವೇಳೆ ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಸಂಸದ ಉಮೇಶ್ ಜಾಧವ್ ಎದುರಲ್ಲೇ ಬಿಜೆಪಿ ಮುಖಂಡರ ಅಸಮಾಧಾನದ ಕಿಡಿ
ಈ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ಉಪಾಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಲಕ್ಷ್ಮೇಶ್ವರ ತಾಲೂಕು ಪಂಚಾಯತ್ ರಾಜ್ಯ ಸಂಘಟನಾ ಅಧ್ಯಕ್ಷ ಫಕ್ಕೀರೇಶ ಮ್ಯಾಟನ್ನವರವರ, ಪುರಸಭೆ ಮಾಜಿ ಸದಸ್ಯ ರಾಮಣ್ಣ ಅಡಗಿಮನಿ, ಹಾವೇರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ ಎಂ ಹಿರೇಮಠ, ಕಾಂಗ್ರೆಸ್ ತಾಲೂಕು ಪ್ರಧಾನ ಕಾರ್ಯದರ್ಶಿ ಮಾರ್ತಾಂಡ ಪೆದ್ದರವರು, ಅಜ್ಜಪ್ಪ ಬೆಳಗಟ್ಟಿ ಸೇರಿದಂತೆ ಅನೇಕ ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ವರದಿ : ಮಲ್ಲೇಶ ಮಣ್ಣಮ್ಮನವರ ಸಿಟಿಜನ್ ಜರ್ನಲಿಸ್ಟ್