ಬೆಂ.ಗ್ರಾಮಾಂತರ | ಲಂಚ ಸ್ವೀಕಾರ; ಬೆಸ್ಕಾಂ ಎಇಇ, ಎಸ್‌ಒ ಲೋಕಾಯುಕ್ತ ಬಲೆಗೆ

Date:

Advertisements

ನೂತನ ಬಡಾವಣೆಗೆ ವಿದ್ಯುತ್‌ ಸಂಪರ್ಕ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಸ್ಕಾಂ ಎಇಇ ಮತ್ತು ಎಸ್‌ಒ ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಂ.ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅವಲಹಳ್ಳಿ ಬೆಸ್ಕಾಂ ಎಇಇ ರಮೇಶ್‌ ಬಾಬು ಮತ್ತು ಎಸ್‌ ಒ ನಾಗೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿಗಳು.

ಬೆಂ.ಗ್ರಾಮಾಂತರ ಜಿಲ್ಲೆಯ ಬೊಮ್ಮನಹಳ್ಳಿ ಗ್ರಾಮದ ಸರ್ವೆ ನಂ. 101/33, 149 ಜಮೀನಿನಲ್ಲಿ ನಿರ್ಮಾಣ ಮಾಡಿರುವ ಪಿ.ಮುತ್ತುಸ್ವಾಮಿ ಎಂಬುವರ ಬಡಾವಣೆಗೆ ವಿದ್ಯುತ್ ಸಂಪರ್ಕ ನೀಡಲು ಶ್ರೀ ಚಕ್ರ ಎಲೆಕ್ಟಿಕಲ್‌ನ ಸೀನಿಯರ್ ಮ್ಯಾನೇಜರ್ ವಿಜಯಕುಮಾರ್ ಎಂಬುವರ ಬಳಿ ಅವಲಹಳ್ಳಿ ಬೆಸ್ಕಾಂ ಎಇಇ ರಮೇಶ್‌ ಬಾಬು ಅವರು ಸೆಕ್ಷನ್‌ ಆಫೀಸರ್‌ ನಾಗೇಶ್‌ ಮೂಲಕ 16.50ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

Advertisements

ಈ ಕುರಿತು ವಿಜಯಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರಿನ ಹಿನ್ನೆಲೆ ಗುರುವಾರ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಬೊಮ್ಮೇನಹಳ್ಳಿಯ ನ್ಯೂ ರಾಯಲ್ ಪ್ರೆಷ್ ಮಾರ್ಟ್ ಬಳಿ ಎಸ್‌ಒ ನಾಗೇಶ್ ಲಂಚವನ್ನು ಪಡೆಯುವಾಗ ಹಣದ ಸಮೇತ ಬಂಧಿಸಿದ್ದಾರೆ. ಲಂಚ ನೀಡುವಂತೆ ತಿಳಿಸಿದ್ದ ಎಇಇ ರಮೇಶ್‌ ಬಾಬು ಅವರನ್ನೂ ಸಹ ದಸ್ತಗಿರಿ ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈದಿನ ಸಂಪಾದಕೀಯ | ಮಳೆ ನಿರ್ವಹಣೆಗೆ ಬೇಕು 500 ವರ್ಷಗಳ ದೂರದೃಷ್ಟಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಅಧೀಕ್ಷಕ ಪವನ್ ನೆಟ್ಟೂರ್ ಮಾರ್ಗದರ್ಶನದಂತೆ ಪೊಲೀಸ್ ಇನ್ಸ್‌ಪೆಕ್ಟರ್ ರಮೇಶ್ ಹಾಗೂ ಸಿಬ್ಬಂದಿ ವರ್ಗದವರು ದಾಳಿಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X