ಬಾಗಲಕೋಟೆ ಹೊರವಲಯದಲ್ಲಿರುವ ಹಾದಿ ಬಸವಣ್ಣ ಆಸರೆ ಕಾಲೋನಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಲಾರಿ ರಸ್ತೆ ಪಕ್ಕದ ಸೇತುವೆಗೆ ಡಿಕ್ಕಿ ಹೊಡೆದಿದ್ದು, ಲಾರಿಯಲ್ಲಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ವಿಜಯಪುರದಲ್ಲಿ ನಡೆದ ಜವಳದ ಕಾರ್ಯಕ್ರಮ ಮುಗಿಸಿ ತಮ್ಮೂರಿಗೆ ಮರಳುತ್ತಿದ್ದಾಗ ಭಾನುವಾರ ತಡ ರಾತ್ರಿ ಈ ಅವಘಡ ಸಂಭವಿಸಿದೆ. ಮೃತರನ್ನು ಕುಷ್ಟಗಿ ತಾಲೂಕಿನ ತಾವರಗೇರಿಯ ಶಾಮಿದಸಾಬ್ ಕಿಡದೂರನಾಯಕ್ (65), ಮೌಲಾಸಾಬ್ ಕಿಡದೂರನಾಯಕ್ (60) ಹಾಗೂ ಇಮಾಮಬಿ ಕಿಡದೂರನಾಯಕ್ (60) ಎಂದು ಗುರುತಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಕೋಲಾರ | ಅಂಬೇಡ್ಕರ್ ಭಾವಚಿತ್ರಕ್ಕೆ ಮಸಿ ಬಳಿದು ಅಪಮಾನ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
ಅಪಘಾತಕ್ಕೊಳಗಾದ ವಾಹನದಲ್ಲಿ 17 ಜನರು ಪ್ರಯಾಣಿಸುತ್ತಿದ್ದರು. ಅವರಲ್ಲಿ ಮೂವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಬಾಗಲಕೋಟೆ ನಗರದ ಸಾರ್ವಜನಿಕ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇಳಕಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.