ಮೈಸೂರು | ಹೋರಾಟಗಾರರನ್ನು ಕಳೆದುಕೊಳ್ಳುವುದು ಸಮಾಜಕ್ಕೆ ನಷ್ಟ : ಬಡಗಲಪುರ ನಾಗೇಂದ್ರ

Date:

Advertisements

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆಯಲ್ಲಿ ನಡೆದ ಹೆಗ್ಗನೂರು ಅಣ್ಣೆಗೌಡ ಅವರ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ‘ಹೋರಾಟಗಾರರನ್ನು ಕಳೆದುಕೊಳ್ಳುವುದು ಸಮಾಜಕ್ಕೆ ನಷ್ಟ’ ಎಂದು ಅಭಿಪ್ರಾಯಪಟ್ಟರು.

“ಇಂದಿನ ಯುವ ಪೀಳಿಗೆ ಸಂಘಟನೆ ಕಡೆಗೆ ಮುಖ ಮಾಡದಿರುವ ಹೊತ್ತಿನಲ್ಲಿ ಹಿರಿಯ ಹೋರಾಟಗಾರರನ್ನು
ಕಳೆದುಕೊಳ್ಳುತ್ತಿರುವುದು ಸಮಾಜಕ್ಕೆ ನಷ್ಟ. ಅದೇ ರಾಜಕೀಯ ಕ್ಷೇತ್ರವಾದರೆ ಹಾಗಲ್ಲ, ಮಗದೊಬ್ಬ, ಮತ್ತೊಬ್ಬ ಬರಲು ಅವಕಾಶ. ಯಾವತ್ತಿಗೂ ಹೋರಾಟಗಾರರು ಸಮಾಜದ ಆಸ್ತಿ” ಎಂದರು.

ಹಿರಿಯ ಮುಖಂಡರಾದ ಜೆ ಪಿ ನಾಗರಾಜು ಮಾತನಾಡಿ ಅಣ್ಣೆಗೌಡರು ಸರಳ ಜೀವಿಯಾಗಿದ್ದು, ತಾಲ್ಲೂಕಿನಲ್ಲಿ ಸ್ವತಃ ತಮ್ಮ ಖರ್ಚಿನಿಂದ ಓಡಾಟ ನಡೆಸಿ ಸಂಘಟನೆ ಕಟ್ಟಲು ಶ್ರಮಿಸಿದವರು. ಇಂದು ದೊಡ್ಡ ಮಟ್ಟದಲ್ಲಿ ಸಂಘಟನೆ ಬೆಳೆಯಲು ಕಾರಣರಾದರು ಎಂದು ತಿಳಿಸಿದರು. ಜಿಲ್ಲಾ ಉಪಾಧ್ಯಕ್ಷ ಪಳನಿಸ್ವಾಮಿ ಮಾತನಾಡಿ ಪ್ರೊ. ನಂಜುಂಡಸ್ವಾಮಿ, ದಿವಂಗತ ಕೆ. ಎಸ್. ಪುಟ್ಟಣ್ಣಯ್ಯ ಅವರ ಸಾಂಗತ್ಯದಿಂದ, ಅಂದಿನಿಂದಲೂ ಹೋರಾಟದಲ್ಲಿ ತೊಡಗಿಸಿಕೊಂಡು ಇಂದಿನವರಿಗೆ ಸ್ಫೂರ್ತಿಯಾಗಿದ್ದಾರೆ ಎಂದರು. ತಾಲ್ಲೂಕು ಅಧ್ಯಕ್ಷರಾದ ಮಹಾದೇವ ನಾಯಕ ಮಾತನಾಡಿ ತಾಲ್ಲೂಕಿನ ಮಟ್ಟಿಗೆ ಹಿರಿಯರ ಕೊಡುಗೆ ಅಪಾರವಾಗಿದೆ. ತಾಲ್ಲೂಕಿನಲ್ಲಿ ನಡೆದ ಹೋರಾಟಗಳಲ್ಲಿ ಅವರ ಪಾತ್ರ ಎಂದಿಗೂ ಸ್ಮರಣಿಯ ಎಂದರು.

ಕಾರ್ಯಕ್ರಮದ ಲೈವ್ ವೀಕ್ಷಿಸಿ : https://www.youtube.com/live/TZlz_Dcln6E?si=RpgkA8txp2pmUg6D

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ವಿಭಾಗಿಯ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X