ಮದ್ದೂರು ಘಟನೆ | ಪೊಲೀಸರು, ಪ್ರತಿಭಟನಾಕಾರರ ನಡುವೆ ತೀವ್ರ ವಾಗ್ವಾದ; ಲಾಠಿಚಾರ್ಜ್

Date:

Advertisements

ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನಾ ಸ್ಥಳದಲ್ಲಿ ಪೊಲೀಸರು ಲಘು ಲಾಠಿಚಾರ್ಜ್​ ನಡೆಸಿದ್ದು, ಈ ವೇಳೆ ಯುವತಿಯೊಬ್ಬರ ಮೇಲೆ ಪೊಲೀಸ್ ಕಾನ್​ಸ್ಟೆಬಲ್​ ಲಾಠಿಯಿಂದ ಬಲವಾಗಿ ಹೊಡೆದಿದ್ದಾರೆಂಬ ಆರೋಪ ವ್ಯಕ್ತವಾಗಿದೆ.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಗಲಾಟೆಗೆ ಸಂಬಂಧಿಸಿದಂತೆ ಬಿಜೆಪಿ, ಹಿಂದೂ ಸಂಘಟನೆಗಳ ಯುವಕ, ಯುವತಿಯರು‌ ಮತ್ತು ಮಹಿಳೆಯರೂ ಕೂಡ ಪ್ರತಿಭಟನೆಯಲ್ಲಿ ಭಾಗಿದ್ದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನಡೆದ ವಾಗ್ವಾದ ತೀವ್ರಗೊಂಡಿದ್ದರಿಂದ ಪೊಲೀಸರು ಲಾಠಿ ಬೀಸಿದ್ದಾರೆ.

ಲಾಠಿಯ ಏಟಿಗೆ ಭಯಬಿದ್ದ ಯುವತಿ ರಸ್ತೆ ಮೇಲೆಯೇ ಕಿರುಚಾಡಿ, ಗೋಗರೆದಿದ್ದಾಳೆ. ರಸ್ತೆ ಮೇಲೆ ಕುಳಿತು ಒದ್ದಾಡಿದ್ದಾಳೆ. ಸದ್ಯ ಮದ್ದೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದ ಕಾರಣ ಪೊಲೀಸರು ಫುಲ್ ಅಲರ್ಟ್​ ಆಗಿ ಸ್ಥಳದಲ್ಲಿ ನಿಗಾವಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮದ್ದೂರು ಕಲ್ಲು ತೂರಾಟ | ಎರಡು ಪ್ರಕರಣ ದಾಖಲು, 21 ಜನರ ಬಂಧನ: ಮಂಡ್ಯ ಎಸ್​​ಪಿ ಬಾಲದಂಡಿ

ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ದೂರು ಪೊಲೀಸರು ಜಾಗೃತರಾಗಿದ್ದು, ಮಧ್ಯರಾತ್ರಿಯೇ 21ಕ್ಕೂ ಅಧಿಕ ಮಂದಿ ಯುವಕರನ್ನು ವಶಕ್ಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X