ಮಧುಗಿರಿ | ಸಿ ಎಂ ಗೆ ಮಸಿಬಳಿಯುವ ಪ್ರಯತ್ನ : ರಾಜ್ಯಪಾಲರ ನಡೆಗೆ ಆರ್. ರಾಜೇಂದ್ರ ಆಕ್ರೋಶ

Date:

Advertisements

ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿ ಕೆಲಸ ಮಾಡುತ್ತಿರುವ ರಾಜ್ಯಪಾಲರು ಹಾಗೂ ವಿಪಕ್ಷಗಳಿಗೆ ಬುದ್ಧಿ ಕಲಿಸುವ ಕಾಲ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ತಿಳಿಸಿದರು.

ಮಧುಗಿರಿ ಪಟ್ಟಣದ ಉಪ ವಿಭಾಗಾಧಿಕಾರಿಗಳ ಕಚೇರಿ ಮುಂಭಾಗ ತಾಲೂಕು ಕಾಂಗ್ರೆಸ್ ಸಮಿತಿ ವತಿಯಿಂದ ರಾಜ್ಯಪಾಲರ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿವಿಧ ಜನಪರ ಯೋಜನೆಗಳನ್ನು ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಸುಳ್ಳು ಆರೋಪ ಮಾಡಿ ತಪ್ಪಿತಸ್ಥ ಎಂದು ಬಿಂಬಿಸಲು ಬಿಜೆಪಿಯವರು ರಾಜ್ಯಪಾಲರನ್ನು ಬಳಸಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರ ಮಾರ್ಗದರ್ಶನದಲ್ಲಿ ಇಡೀ ರಾಜ್ಯದಲ್ಲಿ ಇಂದು ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪಕ್ಷಪಾತ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು ದೂರುದಾರರು ಅರ್ಜಿ ಕೊಟ್ಟಾಕ್ಷಣ ಮುಖ್ಯಮಂತ್ರಿಗಳಿಗೆ ನೋಟಿಸ್ ನೀಡಿದ್ದಾರೆ. ಉನ್ನತ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳ ವಿರುದ್ಧ ದೂರು ನೀಡಿದರೆ ತನಿಕಾ ಸಂಸ್ಥೆಗಳ ಮೂಲಕ ತನಿಖೆ ನಡೆಸಿ ನೋಟಿಸ್ ನೀಡಬೇಕು. ಇಂತಹ ರಾಜ್ಯಪಾಲರನ್ನು ಬಳಸಿಕೊಂಡು ಮುಖ್ಯಮಂತ್ರಿಗಳಿಗೆ ಮಸಿ ಬಳೆಯಲು ಹೊರಟಿದ್ದು, ಅದನ್ನು ಖಂಡಿಸುತ್ತೇವೆ ಎಂದರು.

ಎಲ್ಲ ವರ್ಗದ ಬಡವರ ಪರ ಕೆಲಸ ಮಾಡುತ್ತಿರುವ ಹಗರಣ ರಹಿತ ಮುಖ್ಯಮಂತ್ರಿಗಳಿಗೆ ಶಕ್ತಿ ತುಂಬಲು ಇಂದು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸಹಸ್ರ ಸಂಖ್ಯೆಯಲ್ಲಿ ಸೇರಿದ್ದಾರೆ. 1998 ರಲ್ಲೇ ಮುಡಾ ಬೈಲಾ ಪ್ರಕಾರ ಸಿದ್ದರಾಮಯ್ಯನವರು ನಿವೇಶನಗಳನ್ನು ಪಡೆದುಕೊಂಡಿದ್ದಾರೆ. ಜಿ.ಟಿ ದೇವೇಗೌಡ ಮತ್ತು ಎಚ್. ಡಿ ದೇವೇಗೌಡ ಕುಟುಂಬದವರು ಕೂಡ ಮುಡಾದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ನಿವೇಶನಗಳನ್ನು ಪಡೆದಿದ್ದು, ಇಂದು ಸಿದ್ದರಾಮಯ್ಯನವರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು .

Advertisements

ಜಿ. ಪಂ. ಮಾಜಿ ಸದಸ್ಯೆ ಶಾಂತಲಾ ರಾಜಣ್ಣ ಮಾತನಾಡಿ 40 ವರ್ಷಗಳ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕಿ ಇಲ್ಲದ ರಾಜಕಾರಣಿಯಾಗಿರುವ ಸಿದ್ದರಾಮಯ್ಯನವರನ್ನು ಕುತಂತ್ರದಿಂದ ಸಿಕ್ಕಿಹಾಕಿಸಲು ಬಿಜೆಪಿ- ಜೆಡಿಎಸ್ ನವರು ಪಿತೂರಿ ನಡೆಸಿದ್ದಾರೆ. ರಾಜ ಭವನ ಎಂದರೆ ಕಾನೂನು ಪರಿಪಾಲನೆ ಮಾಡುವ ಕೇಂದ್ರವಾಗಿದೆ. ಈಗಿನ ರಾಜ್ಯಪಾಲರು ಕಾನೂನಿನ ಬಗ್ಗೆ ತಿಳುವಳಿಕೆ ಇಲ್ಲದವರಂತೆ ವರ್ತಿಸುತ್ತಿದ್ದು, ಕೇಂದ್ರ ಸರ್ಕಾರ ಈ ಕೂಡಲೇ ರಾಜ್ಯಪಾಲರನ್ನು ವಾಪಸ್ ಕರೆಸಿಕೊಂಡು ನೂತನ ರಾಜ್ಯಪಾಲರನ್ನು ರಾಜ್ಯಕ್ಕೆ ನೇಮಕ ಮಾಡಲಿ ಎಂದು ಆಗ್ರಹಿಸಿದರು.

ಮಧುಗಿರಿ ಪಟ್ಟಣದ ಡಾ.ಬಿ. ಆರ್. ಅಂಬೇಡ್ಕರ್ ವೃತ್ತದಿಂದ ನೂರಾರು ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕುರಿಕೊಂಡು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎನ್. ಗೋಪಾಲಯ್ಯ, ಆದಿ ನಾರಾಯಣ ರೆಡ್ಡಿ, ಪುರಸಭೆ ಮಾಜಿ ಅಧ್ಯಕ್ಷ ಎನ್. ಗಂಗಣ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ. ನಾಗೇಶ್ ಬಾಬು, ಮುಖಂಡರುಗಳಾದ ಎಂ. ಎಸ್. ಮಲ್ಲಿಕಾರ್ಜುನಯ್ಯ, ಟಿ. ರಾಮಣ್ಣ, ಪಿ. ಸಿ. ಕೃಷ್ಣಾರೆಡ್ಡಿ, ಮಿಡಿಗೇಶಿ ರಾಜಗೋಪಾಲ್, ಆರ್. ಕೆ. ಧ್ರುವ ಕುಮಾರ್, ಶಫೀಕ್, ಸಿದ್ದಾಪುರ ರಂಗ ಶಾಮಣ್ಣ, ಚಂದ್ರಮ್ಮ, ಇಂದಿರಾ ದೇನಾ ನಾಯಕ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X