ಮಧುಗಿರಿ | ಕಲಿಯುವ ಜೊತೆಗೆ ಕಲಿಸುವ ರೀತಿ ಮಕ್ಕಳು ತಯಾರಾಗಬೇಕು : ಹೇಮಲತಾ

Date:

Advertisements

ಚಿಕ್ಕದಾಳವಟ್ಟ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಅವಿರತ ಟ್ರಸ್ಟ್ ಸಂಸ್ಥೆಯಿಂದ ನೋಟ್ ‌ಬುಕ್ ವಿತರಣೆ ಮತ್ತು ಇನ್ಸ್‌ಪೈರ್ ಇಂಡಿಯಾ ಸಂಸ್ಥೆಯಿಂದ ಕ್ರೀಡಾ ಸಮಾಗ್ರಿಗಳ ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಿಕ್ಷಣ ಸಂಯೋಜಕರಾದ ಹೇಮಲತಾ ಎಲ್ಲಿಂದಲೋ ಬಂದು ನಮ್ಮ ಸರ್ಕಾರಿ ಶಾಲೆಗಳನ್ನು ಬೆಂಬಲಿಸಿ ಬದಲಾವಣೆ ತರಲು ಸಾಕಷ್ಟು ಜನ ಪ್ರಯತ್ನಿಸುತ್ತಿದ್ದಾರೆ. ಬರಿ ನೀವು ಕಲಿಯುವುದು ಅಷ್ಟೇ ಅಲ್ಲ ನಿಮ್ಮ‌ಅಕ್ಕಪಕ್ಕ ಇರುವವರಿಗೂ ಅದನ್ನು ಕಲಿಸುವ ರೀತಿ ಜ್ಞಾನವನ್ನು ಹಂಚಿಕೊಂಡು ಬಾಳುವ ಹಾಗೆ ನೀವು ತಯಾರಗಬೇಕು ಎಂದರು

ಅವರೆಲ್ಲರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕೆಂದರೆ ಎಲ್ಲರೂ ಉತ್ತಮ ರೀತಿಯಲ್ಲಿ ಓದಿ ಮುಂದೆ ಬಂದಾಗ ಮಾತ್ರ ಸಾಧ್ಯ ಆಗುತ್ತದೆ. ದಯವಿಟ್ಟು ಎಲ್ಲಾ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ ಎಂದು ಹೇಳಿದರು

ಇನ್ಸ್‌ಫೈರ್ ಇಂಡಿಯಾ ಸಂಸ್ಥೆಯ ಮಂಜುನಾಥ್ ಅವರು ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಓದಿದವರು ಉನ್ನತ ಹುದ್ದೆಗಳಲ್ಲಿ‌ ಇದ್ದಾರೆ. ಉತ್ತಮ ರೀತಿಯಲ್ಲಿ ಓದಿ ನೀವು ಉನ್ನತ ಸ್ಥಾನಗಳಿಗೆ ಹೋಗಿ ನಾಲ್ಕು ಜನಕ್ಕೆ ಸಹಾಯ ಮಾಡಬೇಕು ಇದರಿಂದ ಉತ್ತಮ ಸಮಾಜ ನಿರ್ಮಾಣವಾಗುತ್ತದೆ.‌ ನೀವು ನಿಮ್ಮ ಭವಿಷ್ಯದಲ್ಲಿ ಏನೇ ಪಡೆಯಬೇಕಾದರೂ ಶಿಕ್ಷಣವೇ ಅತಿಮುಖ್ಯ ಎಂದು ಹೇಳಿದರು. ಲೋಕಚರಿತ ರಂಗಕೇಂದ್ರ ಟ್ರಸ್ಟ್‌ (ರಿ) ಅನಿಲ್ ಕುಮಾರ್ ಚಿಕ್ಕದಾಳವಟ್ಟ, ಮುಖ್ಯೋಪಾದ್ಯಯರಾದ ಪ್ರಸಾದ್ ,ಶಿಕ್ಷಕರಾದ ಬಷೀರ್, ಡಿಎನ್ ನರಸಿಂಹಮೂರ್ತಿ ,ಮಂಜುಳ , ಶಿವಕುಮಾರ್ ದೊಡ್ಡದಾಳವಟ್ಟ ಅಡುಗೆ ಸಿಬ್ಬಂದಿ ಉಪಸ್ಥಿತರಿದ್ದರು

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X