ಮಧುಗಿರಿ | ದಲಿತನ ಭೀಕರ ಕೊಲೆ : ಸಮಗ್ರ ತನಿಖೆಗೆ ದಸಂಸ ಒತ್ತಾಯ

Date:

Advertisements

ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿ ಪೋಲೆನಳ್ಳಿಯ ದಲಿತ ವ್ಯಕ್ತಿಯ ಭೀಕರ  ಕೊಲೆ ಪ್ರಕರಣವನ್ನು ಸಮಗ್ರ ತನಿಖೆ ನಡೆಸಿ   ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಗೊಟೂರು ಶಿವಪ್ಪನವರಿಗೆ ಮನವಿ ಪತ್ರ ಸಲ್ಲಿಸಿದರು.

ಪೋಲೆನಹಳ್ಳಿ ಗ್ರಾಮದಲ್ಲಿ ನಡೆದಿರುವ ಮಾದಿಗ ಜನಾಂಗದ ವ್ಯಕ್ತಿಯನ್ನು ಅಮಾನುಷವಾಗಿ ವಾಹನ ಚಲಾಯಿಸಿ ಕೊಲೆ ಮಾಡಿದ್ದು, ಕುಟುಂಬದವರಿಂದ ಯಾವುದೆ ಮಾಹಿತಿ ಪಡೆಯದೆ ಎಫ್ ಐ ಆರ್ ದಾಖಲಿಸಿ, ಅನ್ಯಾಯ ಮಾಡಿದ್ದಾರೆ. ಹಾಗಾಗಿ ಸಮಗ್ರವಾಗಿ ತನಿಖೆ ನಡೆಸಿ ನ್ಯಾಯ ಕೊಡಿಸಬೇಕೆಂದು ಡಿಎಸ್ಎಸ್ ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದರು.

ದಲಿತ ವ್ಯಕ್ತಿ ಕೊಲೆ ಸಂಬಂಧಿಸಿದಂತೆ ಯಾರೆ ಅಪರಾಧಿಗಳಾದರೂ ಅವರು ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಚಿವ ಎನ್ ಮಹೇಶ್ ಆಗ್ರಹಿಸಿದರು.

ಮಧುಗಿರಿ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದ ಸಮೀಪ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಮೃತಪಟ್ಟಿರುವ ಯುವಕನ ಕುಟುಂಬಕ್ಕೆ ಸರಕಾರದಿಂದ ದೊರೆಯಬಹುದಾದ ಸವಲತ್ತುಗಳನ್ನು ಅವರ ಕುಟುಂಬದವರಿಗೆ ಸಕಾಲಕ್ಕೆ ದೊರೆಯಬೇಕು.  ಹಾಗೂ ಮೃತನ ಪತ್ನಿಗೆ ಸರ್ಕಾರದಿಂದ ಉದ್ಯೋಗ ನೀಡಬೇಕು. ಪ್ರಕರಣದಲ್ಲಿ ಕೆಲವರ ಹೆಸರುಗಳು ಬಿಟ್ಟು ಹೋಗಿದ್ದು ಅವರುಗಳನ್ನು ಸೇರ್ಪಡೆ ಮಾಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಜಿಪಂ ಸದಸ್ಯ ಹೆಚ್ ಡಿ ಕೃಷ್ಣ ಪ್ಪ,ವಕೀಲ ನರಸಿಂಹಮೂರ್ತಿ, ದೊಡ್ಡೇರಿ ಕಣಿಮಯ್ಯ, ತೊಂಡೊಟಿ ರಾಮಾಂಜಿ,ರಾಧಕೃಷ್ಣ,ಎಂ.ವೈ ಶಿವಕುಮಾರ್,ಕದರಪ್ಪ,ರಂಗನಾಥ್,ನರಸೀಯಪ್ಪ, ಕೊರಟಗೆರೆ ನಾಗರಾಜು ಹಾಗೂ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X