ಯಾದಗಿರಿ | ಒಳ ಮೀಸಲಾತಿ ಎತ್ತಿಹಿಡಿದ ಸುಪ್ರೀಂ ಕೋರ್ಟ್: ಮಾದಿಗ ಮುಖಂಡರಿಂದ ಸಂಭ್ರಮಾಚರಣೆ

Date:

Advertisements

ಒಳ ಮೀಸಲಾತಿ ವರ್ಗೀಕರಣದ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಕಕ್ಕೇರಾ ಗ್ರಾಮದಲ್ಲಿ ಮಾದಿಗ ಸಮುದಾಯದ ಮುಖಂಡರು ಸಂಭ್ರಮಾಚರಣೆ ನಡೆಸಿದರು.

ಸುರಪುರ ತಾಲೂಕಿನ ಕಕ್ಕೇರಾ ಗ್ರಾಮದ ಡಾ. ಬಿ. ಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಮ ವೃತ್ತದಲ್ಲಿ ಪಟಾಕಿ ಹಚ್ಚಿ ಸಂಭ್ರಮಾಚರಣೆ ಮಾಡಲಾಯಿತು.

ವಿಜಯೋತ್ಸವ ಆಚರಿಸಿದ ಮುಖಂಡರು, ಮೂರು ದಶಕಗಳ ಮಾದಿಗ ಮತ್ತು ಒಳ ಮೀಸಲಾತಿ ಪರ ಹೋರಾಟಕ್ಕೆ ಸಂದ ಜಯ ಎಂದರು.

Advertisements

ಈ ವೇಳೆ ಭೀಮಣ್ಣ ಮ್ಯಾಗೇರಿ ಮಾತನಾಡಿ, ಮಾದಿಗ ದಂಡೋರ ರಾಷ್ಟ್ರೀಯ ನಾಯಕರಾದ ಮಂದಕೃಷ್ಣ ಅವರ 30 ವರ್ಷದ ಹೋರಾಟದ ಫಲ ಎಂದು ಅಭಿಪ್ರಾಯಪಟ್ಟರು.

1001187984

“ಇದೊಂದು ಐತಿಹಾಸಿಕ ತೀರ್ಪು, ಆಂಧ್ರ ಪ್ರದೇಶದಲ್ಲಿ ಜಾರಿಯಲ್ಲಿದ್ದ ಒಳಮೀಸಲಾತಿ ಜಾರಿ ಕುರಿತಂತೆ ಇದ್ದ ಕೇಸಿಗೆ ಏಳು ನ್ಯಾಯಾಮೂರ್ತಿಗಳು ಗುರುವಾರ ತೀರ್ಪು ನೀಡಿದ್ದು, ಒಳಮೀಸಲಾತಿ ವರ್ಗೀಕರಣ ಆಯಾ ರಾಜ್ಯಗಳು ಮಾಡಲು ಒಪ್ಪಿಗೆ ನೀಡಿದೆ” ಎಂದರು.

ನಿರಂತರ ಹೋರಾಟದ ಫಲವಾಗಿ ಈ ತೀರ್ಪು ನೀಡಿದೆ. ಒಳಮೀಸಲಾತಿ ಜಾರಿಗೆ ಕಲಂ 341 ತಿದ್ದುಪಡಿ ಅಗತ್ಯವಿಲ್ಲ. ರಾಜ್ಯ ಸರ್ಕಾರಗಳೇ ಜಾರಿಗೆ ತರಬಹುದು ಎಂದು ತೀರ್ಪು ನೀಡಿದೆ. ಈ ತೀರ್ಪಿಗಾಗಿ ಹೋರಾಟ ನಡೆಸಿದ ಎಲ್ಲರಿಗೂ ಜಯ ಸಲ್ಲಬೇಕು ಎಂದರು.

ರಾಜ್ಯಾಧ್ಯಕ್ಷ ಬಿ. ನರಸಪ್ಪ, ರಾಜ್ಯ ಉಪಾಧ್ಯಕ್ಷ ಗಣೇಶ್ ದುಪಲ್ಲಿ ಹಾಗೂ ಜಿಲ್ಲಾಧ್ಯಕ್ಷ ಕಾಶೆಪ್ಪ ಹೇಗಣ್ಣಗೇರಾ, ಹೋಬಳಿ ಶಾಖೆ ಅಧ್ಯಕ್ಷ ಭೀಮಣ್ಣ ಮ್ಯಾಗೇರಿ ಸೇರಿದಂತೆ ಸರ್ವ ಸದಸ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X