ಮಡಿಕೇರಿ | ʼಬಡವರಿಗೆ ಭೂಮಿ, ನಿವೇಶನʼಕ್ಕಾಗಿ ಆಗ್ರಹ; ಜ.17ರಂದು ಬೃಹತ್ ಪ್ರತಿಭಟನೆ

Date:

Advertisements

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ʼಬಡವರಿಗೆ ಭೂಮಿ, ನಿವೇಶನʼ ನೀಡುವಂತೆ ಆಗ್ರಹಿಸಿ ಭೂ ಗುತ್ತಿಗೆ ಹೋರಾಟ ಸಮಿತಿಯಿಂದ ಜನವರಿ 17ರಂದು ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಯಲ್ಲಿದ್ದು, ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಆಯೋಜಿಸಲಾಗಿದೆ ಎಂದು ಸಂಘಟನಾಕಾರರು ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಪ್ರಕಟಣೆಗೆ ತಿಳಿಸಿರುವ ಪ್ರತಿಭಟನಾಕಾರರು, “ಇರುವ ಭೂಮಿಯನ್ನೆಲ್ಲ ಹಣ ಕಟ್ಟಿ ಗುತ್ತಿಗೆ ಪಡೆದುಕೊಂಡರೆ ನಿವೇಶನ ರಹಿತರು, ಭೂ ರಹಿತರಿಗೆ ಜಾಗವೇ ಇರುವುದಿಲ್ಲ. ಎಲ್ಲವೂ ಭೂ ಮಾಲೀಕರ ಕೈ ಸೇರಲಿದ್ದು, ಕೊಡಗಿನಲ್ಲಿ ಬಡವರ ಬದುಕಿನ ಕರಾಳ ಅಧ್ಯಾಯಕ್ಕೆ ಮುನ್ನುಡಿಯಾಗಲಿದೆ. ಕೊಡಗಿನಲ್ಲಿ ಅಪಾಯಕಾರಿ ಭೂ ಗುತ್ತಿಗೆ ಆದೇಶ ಜಾರಿಯಾಗಿ ಉಳ್ಳವರಿಗೆ ಭೂಮಿಯನ್ನು ಗುತ್ತಿಗೆ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ. ಇದು ಕೊಡಗಿನ ಆದಿವಾಸಿ, ಶೋಷಿತ ವರ್ಗಗಳು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಬದುಕಿಗೆ ಉರುಳಾಗಲಿದೆ” ಎಂದು ಸಂಘಟನಾಕಾರರು ಆರೋಪ ಮಾಡಿದ್ದಾರೆ.

ಭೂ ಗುತ್ತಿಗೆ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ನಿರ್ವಾಣಪ್ಪ ಈ ದಿನ ಡಾಟ್‌ ಕಾಮ್ ಜತೆಗೆ ಮಾತನಾಡಿ, “ನಮ್ಮ ಹೋರಾಟ ನಿವೇಶನಕ್ಕಾಗಿ, ನಮ್ಮ ಹಕ್ಕಿಗಾಗಿ ಭೂ ಗುತ್ತಿಗೆ ಆದೇಶದಿಂದ ಕೊಡಗಿನಲ್ಲಾಗುವ ಅನಾಹುತ ಅರಿತು ಹೋರಾಟಕ್ಕೆ ಮುಂದಾಗಿದ್ದೇವೆ. ಕೊಡಗಿನಲ್ಲಿ ಈಗಾಗಲೇ ನೂರಾರು ಎಕರೆ ಭೂಮಿ ಇರುವ ಭೂ ಮಾಲೀಕರಿಗೆ ಭೂಮಿ ಗುತ್ತಿಗೆ ನೀಡುವುದಾದರೆ ಬಡವರಿಗೂ ನೀಡಬೇಕು. ನಿವೇಶನ ರಹಿತರಿಗೆ ಭೂಮಿ ಕಾಯ್ದಿರಿಸಿ, ಜಾಗ ಕೊಡಲು ಆಗದ ಸರ್ಕಾರ ಉಳ್ಳವರ ಪರ ಗುತ್ತಿಗೆ ನೀಡುವ ಆದೇಶ ಮಾಡಿ ಬಡವರ ಜೀವನದ ಜತೆ ಚೆಲ್ಲಾಟವಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಸಮಿತಿಯ ಜಿಲ್ಲಾ ಸಂಚಾಲಕ ಕೆ ಮೊನ್ನಪ್ಪ ಮಾತನಾಡಿ, “ಕೊಡಗಿನಲ್ಲಿ ಈವರೆಗೆ ದಲಿತರು, ಆದಿವಾಸಿಗಳು, ಬಡ ಜನರು ಹೋರಾಟ ಮಾಡುತ್ತಿರುವುದು ಕೇವಲ ತುಂಡು ಭೂಮಿಗಾಗಿ, ಒಂದೇ ಒಂದು ಸೂರಿಗಾಗಿ. ನಮ್ಮನ್ನು ಆಳುವ ಸರ್ಕಾರಗಳು ಜನಹಿತ ಯೋಚಿಸದೆ ಕೇವಲ ಉಳ್ಳವರ ಪರವಾಗಿ ಓಲೈಸುವ ನಿಟ್ಟಿನಲ್ಲಿ ಬಡಜನರ ಶೋಷಣೆ ಮಾಡುತ್ತಿದೆ. ಇಲ್ಲಿನ ಜನಪ್ರತಿನಿಧಿಗಳಿಗೆ ಬಹುಸಂಖ್ಯಾತರಾದ ಹಿಂದುಳಿದ ವರ್ಗಗಳ, ದಲಿತ, ಆದಿವಾಸಿ ಜನಗಳ ಮತ ಬೇಕು. ಆದರೆ ಅವರ ಹಿತ ಬೇಕಿಲ್ಲ. ಸರ್ಕಾರ ಕೂಡಲೇ ಇದನ್ನೆಲ್ಲ ಮನಗಂಡು ಭೂಮಿಯನ್ನು ಹಂಚಿಕೆ ಮಾಡಬೇಕು. ಬಡ ಜನರಿಗೆ ಭೂಮಿ ಕಾಯ್ದಿರಿಸಿ ನಿವೇಶನ ನೀಡಬೇಕು, ಬಡ ಜನರ ಬದುಕಿಗೆ ನೆರವಾಗಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?: ಕರ್ನಾಟಕದ ಕಾಶ್ಮೀರ ಎನಿಸಿಕೊಂಡಿರುವ ಕೊಡಗಿನ ‘ಮಡಿಕೇರಿ’ಗೆ ಪರಿಶುದ್ಧ ಗಾಳಿ ಪಟ್ಟಿಯಲ್ಲಿ ಅಗ್ರಸ್ಥಾನ

“ಸರ್ಕಾರದ ಅನ್ಯಾಯ ಧೋರಣೆಯನ್ನು ಖಂಡಿಸಿ ಕೊಡಗಿನ ಎಲ್ಲ ಪ್ರಗತಿಪರ ಸಂಘಟನೆಗಳು ಸೇರಿ, ಸರ್ಕಾರದ ಭೂ ಗುತ್ತಿಗೆ ಆದೇಶ ರದ್ದುಪಡಿಸುವಂತೆ ಆಗ್ರಹಿಸಿ ನಾಳೆ ಹೋರಾಟಕ್ಕಿಳಿಯಲಿವೆ. ನಾಳೆ ಸುದರ್ಶನ ವೃತ್ತದಿಂದ ಆರಂಭವಾಗುವ ಜಾಥಾ ಜಿಲ್ಲಾಧಿಕಾರಿ ಕಚೇರಿ ಮುಂಭಾಗಕ್ಕೆ ಜಮಾವಣೆ ಆಗಿ ಧರಣಿ ನಡೆಸಲಿವೆ” ಎಂದು ಸಮಿತಿ ತಿಳಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X