ಮಡಿಕೇರಿ | ‘ಕೊಡವಾಮೆ ಬಾಳೋ’ ಪಾದಯಾತ್ರೆ ಸಮಾರೋಪ : ಬೇಡಿಕೆ ಈಡೇರಿಸಲು ಕೊಡವರಿಂದ ಜಿಲ್ಲಾಡಳಿತಕ್ಕೆ ಮನವಿ

Date:

Advertisements

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕಳೆದ ಆರು ದಿನಗಳಿಂದ ನಡೆದ ‘ಕೊಡವಾಮೆ ಬಾಳೋ’ ಬೃಹತ್ ಪಾದಯಾತ್ರೆ ಮಡಿಕೇರಿಯಲ್ಲಿ ಸಮಾರೋಪಗೊಂಡಿತು.

ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಕೊಡವರು ಪಾದಯಾತ್ರೆಯ ಮೂಲಕ ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದರು. ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿ ಇರುವ ಕೊಡವ ಮಂದ್‍ನಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ್ ಅವರಿಗೆ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಅವರು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು.

ಕಳೆದ ಐದು ದಿನ 78 ಕಿಲೋಮೀಟರ್ ಕ್ರಮಿಸಿ ಮಡಿಕೇರಿಗೆ ತಲುಪಿದ ಬೃಹತ್ ಪಾದಯಾತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ಸಾಂಪ್ರದಾಯಿಕ ಉಡುಗೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲರೂ ಒಟ್ಟಾಗಿ ಭಾಗಿಯಾಗಿದ್ದರು.

Advertisements

ಇದನ್ನು ಓದಿದ್ದೀರಾ? ಮೈಕ್ರೋ ಫೈನಾನ್ಸ್‌ ಕಿರುಕುಳ: ಸರ್ಕಾರದ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು

ಕೊಡವ 3

ಕೊಡಗಿನ ವಿವಿಧ ಕಡೆಗಳಿಂದ ಹಾಗೂ ಬೆಂಗಳೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಮತ್ತಿತರ ಕಡೆಗಳಿಂದ ಹಲವಾರು ಸಂಖ್ಯೆಯಲ್ಲಿ ಕೊಡವರು ಹಾಗೂ ಭಾಷಿಕ ಜನಾಂಗದವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X