ಹೆಚ್ ಡಿ ಕೋಟೆ | ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿ ಮಹಾದೇವ ನಾಯಕ ಪುನಾರಾಯ್ಕೆ

Date:

Advertisements

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾಗಿ ಮಹಾದೇವ ನಾಯಕ ಅವರು ಪುನಾರಾಯ್ಕೆಯಾಗಿದ್ದಾರೆ.

ಕೋಟೆಯಲ್ಲಿ ಕಳೆದ ಶುಕ್ರವಾರ ರಾಜ್ಯ ಸಮಿತಿಯ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಹಾಗೂ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಅವರ ನೇತೃತ್ವದಲ್ಲಿ ತಾಲ್ಲೂಕಿನ ರೈತ ಸಂಘದ ಸಮಿತಿ ಪುನಾರಚನೆಯಾಗಿದ್ದು, ಪ್ರಸ್ತುತ ಸಾಲಿಗೆ ಮಹಾದೇವ ನಾಯಕ ಅವರು ಮರು ಆಯ್ಕೆಯಾಗುವ ಮೂಲಕ ಮತ್ತೆ ತಾಲ್ಲೂಕಿನ ಅಧ್ಯಕ್ಷರಾಗಿದ್ದಾರೆ.

ಈದಿನ.ಕಾಮ್ ಜೊತೆ ಮಾತನಾಡಿದೆ ನೂತನ ತಾಲ್ಲೂಕು ಅಧ್ಯಕ್ಷರಾದ ಮಹಾದೇವ ನಾಯಕ ಜಿಲ್ಲಾ ಮತ್ತು ರಾಜ್ಯ ಸಮಿತಿ ಹಾಗೂ ತಾಲ್ಲೂಕಿನ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿ. ತಾಲ್ಲೂಕಿನಲ್ಲಿ ಇದುವರೆಗೆ ಹಿರಿಯರು ಕಟ್ಟಿ ಬೆಳೆಸಿದ ರೈತ ಸಂಘಟನೆಯನ್ನು ಸಮರ್ಥವಾಗಿ ನಡೆಸಿಕೊಂಡು ಬಂದಿದ್ದು, ಮುಂದೆಯೂ ಸಹ ಎಲ್ಲರ ಸಹಭಾಗಿತ್ವದಲ್ಲಿ, ಎಲ್ಲರೊಟ್ಟಿಗೆ ರೈತ ಪರ ಹೋರಾಟ ನಡೆಸುವುದಾಗಿ ಹೇಳಿದರು.

ತಾಲ್ಲೂಕಿನಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಅದರ ಜೊತೆಗೆ ರೈತರಿಗೆ ಅನ್ಯಾಯವಾಗುತ್ತಿದೆ. ಇಲಾಖೆಗಳು, ಜನಪ್ರತಿನಿದಿಗಳು ಭ್ರಷ್ಟರಾಗಿ ಜನಪರ ಕೆಲಸ ಮಾಡುತ್ತಿಲ್ಲ. ರೈತ ಸಂಘ ಚಳವಳಿ ಮೂಲಕ ಚಾಟಿ ಬೀಸಲಿದೆ. ನೊಂದವರ ಪರವಾಗಿ ಇನ್ನಷ್ಟು ಕೆಲಸ ಮಾಡಲಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಹೋರಾಟಗಾರರನ್ನು ಕಳೆದುಕೊಳ್ಳುವುದು ಸಮಾಜಕ್ಕೆ ನಷ್ಟ : ಬಡಗಲಪುರ ನಾಗೇಂದ್ರ

ಪುನರಚಿತ ತಾಲ್ಲೂಕು ಸಮಿತಿಯಲ್ಲಿ ತಾಲ್ಲೂಕು ಅಧ್ಯಕ್ಷರಾಗಿ ಮಹಾದೇವನಾಯಕ, ಗೌರವ ಅಧ್ಯಕ್ಷರಾಗಿ ರವಿಕುಮಾರ್, ಕಾರ್ಯದರ್ಶಿಗಳಾಗಿ ಚಲವರಾಜು, ಸಿಂಡೇನಹಳ್ಳಿ ರವಿ, ಉಪಾಧ್ಯಕ್ಷರಾಗಿ ಗೋವಿಂದೆಗೌಡ, ರಾಜಕುಮಾರ, ವೆಂಕಟೇಗೌಡ, ಶಿವಣ್ಣ, ಚಿಕ್ಕೇಗೌಡ, ಶಿವಲಿಂಗಪ್ಪ, ಬೋರೇಗೌಡ, ಕಾರ್ಯಧ್ಯಕ್ಷರಾಗಿ ವಡ್ಡರಗುಡಿ ಬಸವರಾಜು, ಚಾಮಳ್ಳಿ ಮಹದೇವು, ಸಂಘಟನಾ ಕಾರ್ಯದರ್ಶಿಯಾಗಿ ಸಿದ್ದರಾಮೇಗೌಡ ಅವರು ಆಯ್ಕೆಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X