ಮಹಾಧರಣಿ | ಎರಡನೇ ಸ್ವಾತಂತ್ರ್ಯ ಹೋರಾಟ ಕಟ್ಟಬೇಕಿದೆ: ಎಸ್‌.ಆರ್ ಹಿರೇಮಠ್

Date:

Advertisements

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ‘ಪೂರ್ಣ ಸ್ವರಾಜ್ಯ’ ಎಂಬ ಪ್ರತಿಜ್ಞೆಯನ್ನು ಘೋಷಿಸಿದ್ದರು. ಅದರ ಉದ್ದೇಶ, ದೇಶದ ಪ್ರತಿಯೊಬ್ಬ ಪ್ರಜೆಯೂ ಗೌರವಯುವ ಬದುಕನ್ನ ಕಟ್ಟಿಕೊಳ್ಳಬೇಕೆಂಬುದಾಗಿತ್ತು. ಯಾವ ಸರ್ಕಾರ ಜನರನ್ನು ಶೋಷಣೆ ಮಾಡುತ್ತದೆಯೋ, ಅಂತಹ ಸರ್ಕಾರವನ್ನು ಕಿತ್ತೊಗೆಯಬೇಕು ಎಂದೂ ಆ ಹೋರಾಟಗಾರರು ಹೇಳಿದ್ದರು. ಈಗ ನಾವೂ ‘ಚಲೇ ಜಾವ್’ ಚಳುವಳಿಯನ್ನ ಮಾಡಬೇಕಿದೆ ಎಂದು ಹಿರಿಯ ಹೋರಾಟಗಾರ ಎಸ್‌.ಆರ್ ಹಿರೇಮಠ್ ಹೇಳಿದ್ದಾರೆ.

“ಅಂಬೇಡ್ಕರ್ ಅವರು ಸಂವಿಧಾನದ ರಾಜ್ಯ ನಿರ್ದೇಶಕ ತತ್ವಗಳಲ್ಲಿ ಸರ್ಕಾರಗಳು ಜನಪರವಾದ ನೀತಿಗಳನ್ನು ತರಬೇಕು ಎಂದು ಹೇಳಿದ್ದಾರೆ. ಆದರೆ, ಅವರ ಆಶಯಕ್ಕೆ ವಿರೋಧವಾಗಿ ನೀತಿಗಳು ಜಾರಿಯಾಗುತ್ತಿವೆ. ಅದಾನಿ, ಅಂಬಾನಿಗಳಂತಹ ಬಂಡವಾಳಿಗರ ಸಂಪತ್ತು ಹೆಚ್ಚುತ್ತಿವೆ. ಸುಳ್ಳು ಭರವಸೆಗಳನ್ನು ನೀಡಿ, ಜನರನ್ನು ಸರ್ಕಾರಗಳು ಯಾಮಾರಿಸುತ್ತಿವೆ” ಎಂದರು.

“ಈಗ ಎರಡನೇ ಸ್ವಾತಂತ್ರ್ಯ ಹೋರಾಟವನ್ನ ನಾವೆಲ್ಲರೂ ಮಾಡಬೇಕಾಗಿದೆ. ಕೋಮುವಾದಿ, ಬಂಡವಾಳಶಾಹಿ ಪರವಾದ ಬಿಜೆಪಿ ಸರ್ಕಾರವನ್ನು ಸೋಲಿಸಬೇಕಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದ್ದೇವೆ. ಆದರೆ, ಅವರು ಮುಂದೆ ಮತ್ತೆ ಮುನ್ನೆಲೆಗೆ ಬರುತ್ತಾರೆ. ಹೀಗಾಗಿ, ಸುದೀರ್ಘ ಹೋರಾಟಗಳು ಕೋಮುವಾದಿ, ಬಂಡವಾಳಶಾಹಿಗಳ ವಿರುದ್ಧ ನಡೆಯಬೇಕಿದೆ. ರಾಷ್ಟ್ರವನ್ನ ಕಟ್ಟುವಲ್ಲಿ ನಾವೆಲ್ಲರೂ ದುಡಿಯಬೇಕಿದೆ” ಎಂದು ಎಸ್‌.ಆರ್ ಹಿರೇಮಠ್ ಹೇಳಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X