ಉಡುಪಿ | ಮಾಹೆಯ ಭಾಷಾ ವಿಭಾಗದ ವತಿಯಿಂದ ಕೊರಗ ಭಾಷೆಯ ಅಧ್ಯಯನ

Date:

Advertisements

ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ನ ಭಾಷಾ ವಿಭಾಗದ ವತಿಯಿಂದ ಕೊರಗ ಭಾಷೆಯ ಕುರಿತ ಕ್ಷೇತ್ರಾಧ್ಯಯನವು ಪಡುಬಿದ್ರಿ ಸಮೀಪದ ಪಾದೆಬೆಟ್ಟುವಿನಲ್ಲಿ ಇತ್ತೀಚೆಗೆ ನಡೆಯಿತು, ಕೊರಗ ಭಾಷಾ ತಜ್ಞ , ಲೇಖಕರಾದ ಪಾಂಗಾಳ ಬಾಬು ಕೊರಗ ಅವರು ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಸಹಕರಿಸಿದ್ದು ದೆಹಲಿಯ ಅಶೋಕ ವಿಶ್ವವಿದ್ಯಾನಿಲಯದ ಸಂದರ್ಶಕ ಪ್ರಾಧ್ಯಾಪಕಿ, ಲೇಖಕಿ, ಭಾಷಾಶಾಸ್ತ್ರಜ್ಞೆ ಡಾ. ಪೆಗ್ಗಿ ಮೋಹನ್‌ ಅವರು ಕ್ಷೇತ್ರಾಧ್ಯಯನವನ್ನು ನಡೆಸಿಕೊಟ್ಟರು.

‌ಬಾಬು ಕೊರಗ ಅವರು ಕೊರಗಭಾಷೆಯಲ್ಲಿ ಒಂದು ಕತೆಯನ್ನು ಹೇಳುವುದರ ಮೂಲಕ ಕ್ಷೇತ್ರಾಧ್ಯಯನಕ್ಕೆ ಅನುವು ಮಾಡಿಕೊಟ್ಟರು. ಪೆಗ್ಗಿ ಮೋಹನ್‌ ಅವರು ಕೊರಗಭಾಷೆಯ ಸೂಕ್ಷ್ಮ ಸ್ವರಗಳನ್ನು ವಿಶ್ಲೇಷಿಸಿದರು. ಭಾಷೆಯ ಕ್ಷೇತ್ರಾಧ್ಯಯನದ ಸಂದರ್ಭದಲ್ಲಿ ಅನುಸರಿಸಬೇಕಾದ ಅಂಶಗಳನ್ನು ವಿವರಿಸಿದರು. ಕೊರಗ ಭಾಷೆ ಮತ್ತು ಇತರ ಭಾರತದ ಮತ್ತು ಜಗತ್ತಿನ ಇತರ ಬುಡಕಟ್ಟಿನ ಭಾಷೆಗಳ ಕುರಿತ ತೌಲನಿಕ ಅಧ್ಯಯನದ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು.

ಮಾಹೆಯ ಭಾಷಾ ವಿಭಾಗದ ಮುಖ್ಯಸ್ಥರಾದ ರಾಹುಲ್‌ ಪುಟ್ಟಿ ಅವರು ಪ್ರಸ್ತಾವನೆಯಲ್ಲಿ ಒಂದು ಭಾಷೆಯನ್ನು ಅದು ಬಳಕೆಯಲ್ಲಿರುವ ಪ್ರದೇಶದಲ್ಲಿ ಅಧ್ಯಯನ ಮಾಡುವ ಆವಶ್ಯಕತೆಯನ್ನು ವಿವರಿಸಿದರು. ಮಾಹೆಯ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಕೇಂದ್ರದ ಸಂಯೋಜಕರಾದ ಡಾ. ಪೃಥ್ವೀರಾಜ ಕವತ್ತಾರು ಕ್ಷೇತ್ರಾಧ್ಯಯನದ ಕಲಾಪವನ್ನು ಸಂಯೋಜಿಸಿದರು. ಕೊರಗ ಸಮುದಾಯದ ಸಂಘಟಕರಾದ ಸುಂದರ ಮಂಗಳೂರು, ಕುಡುಪ ಉಡುಪಿ ಅವರು ಸಹಸಂಪನ್ಮೂಲ ವ್ಯಕ್ತಿಗಳಾಗಿ ಸಹಕರಿಸಿದರು. ಭಾಷಾ ವಿಭಾಗದ ಪ್ರಾಧ್ಯಾಪಕರಾದ ಡಾ. ಅರವಿಂದ ಭಟ್‌, ಆದಿತ್ಯ ದಿವ್ಯಾ ಸಿಂಗ್‌, ಕ್ರಿಸ್ಟಾಫ್‌ ಕ್ರೋಝಿಕ್‌, ಶ್ವೇತಾ ದೇಶಪಾಂಡೆ, ಅಮೃತರಾಜ್‌ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X