ಬೀದರ್‌ | ಮಹಮೂದ್ ಗವಾನ್ ಮದರಸಾ ದತ್ತು ಪಡೆದ ʼಶಾಹೀನ್‌ʼ

Date:

Advertisements

ಬೀದರ್‌ ನಗರದ ಐತಿಹಾಸಿಕ ಮಹಮೂದ್ ಗವಾನ್ ಮದರಸಾವನ್ನು ಇಲ್ಲಿನ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ದತ್ತು ಪಡೆದಿದೆ.

ಶಾಹೀನ್‌ ಶಿಕ್ಷಣ ಸಮೂಹದ ಅಧ್ಯಕ್ಷ ಡಾ.ಅಬ್ದುಲ್ ಖದೀರ್ ಅವರು ಈ ಕುರಿತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ನಿರ್ದೇಶಕ ಜುಲ್ಫೇಕರ್‌ ಅಲಿ ಅವರೊಂದಿಗೆ ನವದೆಹಲಿಯಲ್ಲಿ ಒಡಂಬಡಿಕೆ ಮಾಡಿಕೊಂಡಿದ್ದಾರೆ. ಸಮೂಹವು ಮುಂದಿನ ಐದು ವರ್ಷಗಳ ಅವಧಿಗೆ ಸ್ಮಾರಕದ ನಿರ್ವಹಣೆ ನೋಡಿಕೊಂಡು ಹೊಸ ಕಳೆ ನೀಡಲಿದೆ.

ʼಶುದ್ಧ ಕುಡಿಯುವ ನೀರು, ಶೌಚಾಲಯ, ತ್ಯಾಜ್ಯ ನಿರ್ವಹಣೆ, ಶಿಶು ಪಾಲನಾ ಕೋಣೆಗಳು, ರ‍್ಯಾಂಪ್ ನಿರ್ಮಾಣ, ವಿದ್ಯುತ್ ಚಾಲಿತ ರಿಕ್ಷಾ, ಆಹಾರ ಮಳಿಗೆ, ದೀಪಾಲಂಕಾರ, ವಾಚನಾಲಯ, ಪ್ರಥಮ ಚಿಕಿತ್ಸಾ ಕೇಂದ್ರ, ಸಿಸಿಟಿವಿ ಕ್ಯಾಮೆರಾ, ವೈ-ಫೈ ಮೊದಲಾದ
ಸೌಲಭ್ಯಗಳನ್ನು ಒದಗಿಸಲಿದೆ. ಪ್ರವಾಸಿಗರಿಗೆ ಗವಾನ್ ಮದರಸಾದ ಇತಿಹಾಸವನ್ನು ವಿವರಿಸಲು ಗೈಡ್‍ಗಳನ್ನು‌ ಸಹ ನೇಮಕ ಮಾಡಿಕೊಳ್ಳಲಿದೆ.

Advertisements

ಮಹಮೂದ್ ಗವಾನ್ ಮದರಸಾ ಹಿಂದೆ ವಿಶ್ವವಿದ್ಯಾಲಯ ಆಗಿತ್ತು. ದೇಶ, ವಿದೇಶದ ವಿದ್ಯಾರ್ಥಿಗಳು ಇಲ್ಲಿಗೆ ಅಧ್ಯಯನಕ್ಕೆ ಬರುತ್ತಿದ್ದರು. ಜಿಲ್ಲೆಯ ಐತಿಹಾಸಿಕ ಸ್ಮಾರಕವನ್ನು ಅಭಿವೃದ್ಧಿಪಡಿಸಲು ಸ್ಮಾರಕ ದತ್ತು ಯೋಜನೆಯಡಿ ದತ್ತು ತೆಗೆದುಕೊಂಡಿದೆ. ಸಂಘ-ಸಂಸ್ಥೆ ಹಾಗೂ ಸಾರ್ವಜನಿಕರು ಕಲೆ, ಇತಿಹಾಸ, ಪರಂಪರೆಯ ಹೆಗ್ಗುರುತು ಆಗಿರುವ ಜಿಲ್ಲೆಯ ಸ್ಮಾರಕಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಸರ್ಕಾರದೊಂದಿಗೆ ಕೈಜೋಡಿಸಬೇಕಿದೆʼ ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತಿಳಿಸಿದರು.

MAHMUD GAWAN MADRASA 1
ಬೀದರ್‌ನಲ್ಲಿರುವ ಮಹಮೂದ್ ಗವಾನ್ ಮದರಸಾ ವಿಶ್ವವಿದ್ಯಾಲಯ

ʼಜಿಲ್ಲೆಯಲ್ಲಿ ಇರುವಷ್ಟು ಐತಿಹಾಸಿಕ ಮಹತ್ವದ ಸ್ಮಾರಕಗಳು ಸುತ್ತಮುತ್ತಲಿನ ಪ್ರದೇಶದಲ್ಲಿ ಇಲ್ಲ. ಆದರೂ, ಅವುಗಳಿಗೆ ಪ್ರಾಮುಖ್ಯತೆ ನೀಡುವ ಕೆಲಸ ಅಷ್ಟಾಗಿ ಆಗಿಲ್ಲ. ಹರ್ಷಗುಪ್ತಾ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಕಾರ್ಯಗಳು ಆಗಿದ್ದವು. ಇದೀಗ ಮತ್ತೆ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ದಿಸೆಯಲ್ಲಿ ಚಟುವಟಿಕೆಗಳು ನಡೆಯುತ್ತಿವೆʼ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳು ಇವೆ. ಪ್ರವಾಸೋದ್ಯಮ ಬೆಳೆದರೆ ಜಿಲ್ಲೆಯ ಅಭಿವೃದ್ಧಿಗೆ ಅನುಕೂಲವಾಗಲಿದೆʼ ಎಂದು ತಿಳಿಸಿದರು.

14ನೇ ಶತಮಾನದ ಪ್ರಮುಖ ಶಿಕ್ಷಣ ಕೇಂದ್ರ :

ಬಹಮನಿ ರಾಜವಂಶರ ಪ್ರಧಾನಿ ಆಗಿದ್ದ ಮಹಮೂದ್ ಗವಾನ್ ಅವರು 1472 ರಲ್ಲಿ ಕಟ್ಟಿಸಿದ ಮದರಸಾ ಆ ಕಾಲದಲ್ಲಿ ಪ್ರಸಿದ್ಧ ಶಿಕ್ಷಣ ಕೇಂದ್ರವಾಗಿತ್ತು. ಇಲ್ಲಿ ಒಂದು ಸಾವಿರ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅವಕಾಶ ಇತ್ತು. ಅರೇಬಿಕ್ ಹಾಗೂ ಪರ್ಷಿಯನ್ ಭಾಷೆಗಳಲ್ಲಿ ದೇವತಾಶಾಸ್ತ್ರ, ತತ್ವಶಾಸ್ತ್ರ, ಖಗೋಳಶಾಸ್ತ್ರ, ಗಣಿತಶಾಸ್ತ್ರ ಶಿಕ್ಷಣ ನೀಡಲಾಗುತ್ತಿತ್ತು. ಮದರಸಾ 3,000 ಪುಸ್ತಕಗಳ ಗ್ರಂಥಾಲಯ ಹೊಂದಿತ್ತು. ಪ್ರಾರ್ಥನಾ ಸ್ಥಳ, ಉಪನ್ಯಾಸ ಸಭಾಂಗಣ, ಪ್ರಾಧ್ಯಾಪಕರು, ವಿದ್ಯಾರ್ಥಿಗಳ ವಸತಿ ಗೃಹಗಳು ಸೇರಿ ವಿವಿಧ ವ್ಯವಸ್ಥೆಗಳು ಹೊಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X