ಮೈತ್ರಿ ಮುಟ್ಟಿನ ಕಪ್ ಯೋಜನೆ: ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್

Date:

  • ‘ಮೈತ್ರಿ ಮುಟ್ಟಿನ ಕಪ್’ ಯೋಜನೆಗೆ ‘ಕಾಂತಾರ’ ಸಿನಿಮಾದ ನಟಿ ಸಪ್ತಮಿ ಗೌಡ ರಾಯಭಾರಿ
  • ರಾಜ್ಯದ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರಿಗೆ ವಿತರಣೆ

ರಾಜ್ಯದ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಮೈತ್ರಿ ಮುಟ್ಟಿನ ಕಪ್ ಯೋಜನೆಯ ಬೃಹತ್ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌, ಪ್ರತಿಯೊಬ್ಬ ವಿದ್ಯಾರ್ಥಿನಿಯರು ಮೈತ್ರಿ ಯೋಜನೆಯ ರಾಯಭಾರಿಗಳಾಗಿ, ಮುಟ್ಟಿನ ಕಪ್ ಹೆಚ್ಚು ಹೆಚ್ಚು ಬಳಕೆಗೆ ಪ್ರೇರಕರಾಗಬೇಕು. ಮೈತ್ರಿ ಯೋಜನೆ ಮಂಗಳೂರಿನಲ್ಲಿ ಯಶಸ್ವಿಯಾಗಿದೆ. ಆದ್ದರಿಂದ ಇದನ್ನು ರಾಜ್ಯಾದ್ಯಂತ ತೆಗೆದುಕೊಂಡು ಹೋಗಲಿದ್ದೇವೆ ಎಂದು ಹೇಳಿದರು.

“ಮಂಗಳೂರಿನಲ್ಲಿ‌11 ಸಾವಿರ ಹಾಗೂ ಚಾಮರಾಜನಗರದಲ್ಲಿ 4 ಸಾವಿರ ಮೈತ್ರಿ ಯೋಜನೆಯ ಮುಟ್ಟಿನ ಕಪ್ ಸೇರಿ ಒಟ್ಟು 15 ಸಾವಿರ ಶಾಲಾ – ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತವಾಗಿ ಮುಟ್ಟಿನ ಕಪ್ ವಿತರಣೆ ಮಾಡಲಾಗಿದೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ಮೈತ್ರಿ ಮುಟ್ಟಿನ ಕಪ್’ ಯೋಜನೆಗೆ ರಾಯಭಾರಿ ಆಗಿ ನೇಮಕವಾಗಿರುವ ‘ಕಾಂತಾರ’ ಸಿನಿಮಾ ಖ್ಯಾತಿಯ ನಟಿ ಸಪ್ತಮಿ ಗೌಡ, ಶುಚಿ ನನ್ನ ಮೈತ್ರಿ ಯೋಜನೆಯ ರಾಯಭಾರಿಯನ್ನಾಗಿ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಋತುಚಕ್ರದ ಕಾರಣಕ್ಕೆ ಹೆಣ್ಣುಮಕ್ಕಳು ಚಟುವಟಿಕೆಯಿಂದ ಹಿಂದೆ ಸರಿಯುವುದನ್ನು ತಡೆಯಲು ಮುಟ್ಟಿನ ಕಪ್ ಸಹಕಾರಿ. ನನ್ನ ವೈಯಕ್ತಿಕ ಅನುಭವದಿಂದ ಈ ಮಾತನ್ನು ಹೇಳುತ್ತಿದ್ದೇನೆ” ಎಂದು ಹೇಳಿದರು.

“ಈಜು ಸ್ಪರ್ಧೆಯಲ್ಲಿ ಮೊದಲ ಬಾರಿಗೆ ಚಿನ್ನದ ಪದಕ ಪಡೆದಿದ್ದು ಮಂಗಳೂರಿನಲ್ಲಿ, ಸಿನಿಮಾದಲ್ಲಿ ಹೆಸರು ಬಂದಿದ್ದು ಮಂಗಳೂರಿನಿಂದಲೇ ಅದೇ ರೀತಿ ಮೈತ್ರಿ ಯೋಜನೆಗೆ ಮಂಗಳೂರಿನಿಂದಲೇ ರಾಯಭಾರಿಯಾಗಿ ಆಗಿರುವುದಕ್ಕೆ ಹೆಮ್ಮೆಯಿದೆ. ಹೆಣ್ಣುಮಕ್ಕಳು ಎಲ್ಲಾ ಕ್ಷೇತ್ರಗಳಲ್ಲೂ ಮುಂದಿದ್ದಾರೆ. ಆದರೆ ಮುಟ್ಟಿನ ಕಾರಣಕ್ಕೆ ಹಿಂದೆ ಉಳಿಯಬಾರದು. ಪ್ಯಾಡ್‌ನ ತ್ಯಾಜ್ಯವನ್ನು ಎಸೆಯೋದು ಹೇಗೆ ಎಂಬುದೇ ಕಷ್ಟ. ಆದರೆ ಮುಟ್ಟಿನ ಕಪ್‌ನಿಂದ ಅಂತಹ ಯಾವುದೇ ತೊಂದರೆಯಿಲ್ಲ” ಎಂದು ನಟಿ ಸಪ್ತಮಿಗೌಡ ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ. ರಂದೀಪ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕ ಡಾ. ಎಂ. ಇಂದುಮತಿ, ವಿಧಾನ ಪರಿಷತ್ ಸದಸ್ಯರಾದ ಕೆ. ಮಂಜುನಾಥ ಭಂಡಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಯೋಜನಾ ನಿರ್ದೇಶಕ ಡಾ. ಶ್ರೀನಿವಾಸ್ ಜಿ.ಎನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗಿಯ ಸಹ ನಿರ್ದೇಶಕಿ ಡಾ.ರಾಜೇಶ್ವರಿ ದೇವಿ ಎಚ್. ಆರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪನಿರ್ದೇಶಕಿ ಡಾ. ವೀಣಾ ವಿ., ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಭಾಗವಹಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಕೇಳಿದ್ದು 18 ಸಾವಿರ ಕೋಟಿ – ಕೊಟ್ಟಿದ್ದು 3 ಸಾವಿರ ಕೋಟಿ; ಬಿಜೆಪಿ ವಿರುದ್ಧ ನೆಟ್ಟಿಗರ ಕಿಡಿ

ರಾಜ್ಯದಲ್ಲಿ ತೀವ್ರ ಬರ ಎದುರಾಗಿದ್ದರೂ, ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

2ನೇ ಹಂತದ ಚುನಾವಣೆ | ಮತಗಟ್ಟೆಗೆ ಬಾರದ ಹೆಚ್ಚಿನ ಮತದಾರರು; ಬಿಜೆಪಿ ವಿರೋಧಿ ಅಲೆಯ ಸೂಚನೆಯೇ?

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಶುಕ್ರವಾರ ಮುಗಿದಿದೆ. 13 ರಾಜ್ಯಗಳ...