ಕೊಡಗು | ವೈದ್ಯಕೀಯ ಶಿಕ್ಷಣಕ್ಕೆ ಸೇರುವಾಗಲೇ ಬಡಜನರ ಸೇವೆ ಮಾಡುವ ಸಂಕಲ್ಪ ಮಾಡಿ : ಶಾಸಕ ಎ ಎಸ್ ಪೊನ್ನಣ್ಣ

Date:

Advertisements

ಮಡಿಕೇರಿಯಲ್ಲಿ ಕೊಡಗು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಹತ್ತನೇ ವರ್ಷದ ವಾರ್ಷಿಕೋತ್ಸವ ‘ ಅವೆನ್ಸಿಸ್ 2025 ‘ ಬೃಹತ್ ಆರೋಗ್ಯ ಜಾಗೃತಿ ಪ್ರದರ್ಶನ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಶಾಸಕ ಎ ಎಸ್ ಪೊನ್ನಣ್ಣ ಮಾತನಾಡಿ ‘ ವೈದ್ಯಕೀಯ ಶಿಕ್ಷಣಕ್ಕೆ ಸೇರುವಾಗಲೇ ಬಡಜನರ ಸೇವೆ ಮಾಡುವ ಸಂಕಲ್ಪ ಮಾಡುವಂತೆ ‘ ಸಲಹೆ ನೀಡಿದರು.

” ವೈದ್ಯಕೀಯ ವೃತ್ತಿ ಅತ್ಯಂತ ಮಹತ್ವದ್ದಾಗಿದ್ದು ಜನಸೇವೆ ಮಾಡಲು ಸೂಕ್ತವಾಗಿದೆ. ಗ್ರಾಮೀಣ ಭಾಗದಲ್ಲಿ ಒಂದಷ್ಟು ವರ್ಷ ಕಡ್ಡಾಯವಾಗಿ ಬಡಜನರಿಗೆ ಸೇವೆ ನೀಡುವ ಮೌಲ್ಯವನ್ನು ಬೆಳೆಸಿಕೊಳ್ಳಿ. ವೈದ್ಯರಾಗಿ ಜನರ ಸೇವೆ ಮಾಡುವುದು ನಿಜವಾದ ಸಾರ್ಥಕತೆಯ ಕೆಲಸ. ಅಂತಹ ನಿಟ್ಟಿನಲ್ಲಿ ಈಗಲಿಂದಲೇ ಸನ್ನದ್ದರಾಗಿ. ಸಹಜವಾಗಿ ವೈದ್ಯ ವೃತ್ತಿಗೆ ಬರುವವರು ಪಟ್ಟಣ್ಣ, ನಗರಗಳಲ್ಲಿ ಇರಲು ಇಚ್ಚಿಸುತ್ತ ಹಳ್ಳಿಗಳ ಕಡೆಗೆ ಮುಖ ಮಾಡುತ್ತಿಲ್ಲ. ಒಂದು ವೇಳೆ ಗ್ರಾಮೀಣ ಪ್ರದೇಶದ ಕಡೆಗೆ ಬಂದರು ಇರಲು ಇಚ್ಚಿಸುವುದಿಲ್ಲ “.

” ನಗರ, ಪಟ್ಟಣಗಳಿಗಿಂತ ಹೆಚ್ಚಾಗಿ, ತುರ್ತಾಗಿ ವೈದ್ಯರ ನೆರವಿನ ಅಗತ್ಯತೆ ಇರುವುದು ಬಡಜನರಿಗೆ, ಗ್ರಾಮೀಣ ಭಾಗದ ಬಡವರಿಗೆ. ಇದನ್ನೆಲ್ಲಾ ಈಗಿಂದಲೇ ವಿದ್ಯಾರ್ಥಿಗಳು ಮನನ ಮಾಡಿಕೊಂಡು ಉತ್ತಮ ಸೇವೆ ನೀಡುವ ಕಡೆಗೆ ಲಕ್ಷ್ಯ ವಹಿಸಬೇಕು. ಈಗಲೂ ಸಹ ಗ್ರಾಮೀಣ ಭಾಗದ ಸರ್ಕಾರಿ ಪ್ರಾಥಮಿಕ, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಿದೆ, ಇಂತಹ ಪರಿಸ್ಥಿತಿ ತೊಡೆದು ಹಾಕುವಲ್ಲಿ ನಿಮ್ಮೆಲ್ಲರ ಪಾತ್ರ ದೊಡ್ಡದಿದೆ ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಕೊಡಗು | ನಾಲ್ವರ ಹತ್ಯೆ ಪ್ರಕರಣ; ಕೇರಳದಲ್ಲಿ ಆರೋಪಿ ಬಂಧನ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಲೋಕೇಶ್ ಕುಮಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಪ್ರಾಂಶುಪಾಲ ಡಾ ವಿಶಾಲ್,ಅಡಳಿತ ವಿಭಾಗದ ಮುಖ್ಯಸ್ಥ ಡಾ ಸೋಮಶೇಖರ್,ಡಾ ಕಾಮತ್,ಡಾ ಮಂಜುನಾಥ್,ಡಾ ಪುರುಷೋತ್ತಮ್, ವಿಧ್ಯಾರ್ಥಿಗಳಾದ ಪೂರ್ಣ ಚಂದ್ರ,ಮನೋಜ್ ಶೇಖರ್,ಮಿಥುನ್ ಆರ್,ಪವನ್ ವಶಿಷ್ಠ,ನೇಹಾ,ಪುನೀತ್,ಕಾವ್ಯ ಗುಪ್ತಾ, ಸೂರ್ಯ ವೈ,ಅನುದೀಪ್, ಶಶಾಂಕ್ ವೈ, ನಾಝಿಯಾ ತಸ್ವೀನ್,ಮನು,ಪ್ರಜ್ನಾ,ಜಹರಾ,ಲಿಖಿತ ಬಿ ಟಿ ಐಶ್ವರ್ಯ ರಾಜ್,ಭವಾನಿ ರೆಡ್ಡಿ,ತೃಪ್ತಿ, ಚಂದನಶ್ರೀ ಸೇರಿದಂತೆ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X