ರಾಯಚೂರು | ಒಳಮೀಸಲಾತಿ ಜಾರಿಗೆ ಮಲ್ಲಿಕಾರ್ಜುನ್ ಖರ್ಗೆ ಅಡ್ಡಿ ಆರೋಪ ಸುಳ್ಳು : ಶಿವರಾಜ್ ಜಾನೇಕಲ್

Date:

Advertisements

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಛಲವಾದಿ ಸಮಾಜ ಹಾಗೂ ಮುಖಂಡರ ಯಾರ ವಿರೋಧವೂ ಇಲ್ಲ. ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರು ಸಹ ವಿರೋಧಿಸುತ್ತಿಲ್ಲ. ಕೆಲವರು ವೈಯಕ್ತಿಕವಾಗಿ ವಿರೋಧಿಸುವುದು ಸರಿಯಾದ ಬೆಳವಣಿಗೆಯಲ್ಲ ಎಂದು ಛಲವಾದಿ ಮಹಾಸಭಾದ ಅಧ್ಯಕ್ಷ ಶಿವರಾಜ ಜಾನೇಕಲ್ ಹೇಳಿದರು.

ರಾಯಚೂರು ಪ್ರೆಸ್ ಕ್ಲಬ್‌ನಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಇತ್ತೀಚಿಗೆ ಮಾದಿಗ ಸಮಾಜದ ಮುಖಂಡರುಗಳು ಒಳಮೀಸಲಾತಿಗೆ ಮಲ್ಲಿಕಾರ್ಜುನ‌ ಖರ್ಗೆಯವರು ಅಡ್ಡಿಯಾಗಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಅವರೆಲ್ಲಿಯೂ ಒಳ ಮೀಸಲಾತಿ ವಿರೋಧಿಸಿ ಹೇಳಿಕೆ ನೀಡಿಲ್ಲ. ಅಲ್ಲದೇ, ಅಡ್ಡಿಯೂ ಆಗಿಲ್ಲ. ಪದೇ ಪದೇ ಟೀಕೆ ಮಾಡುತ್ತಿರುವುದು ಸರಿಯಲ್ಲ ಎಂದರು.

ಸದಾಶಿವ ಆಯೋಗದ ವರದಿಯಲ್ಲಿ ಆದಿ ದ್ರಾವಿಡ ಮತ್ತು ಆದಿ ಕರ್ನಾಟಕ ಉಪ ಜಾತಿಗಳು, ಮಾದಿಗ ಮತ್ತು ಛಲವಾದಿ ಸಮಾಜಗಳಲ್ಲಿವೆ. ಉಪಜಾತಿ ಜನರನ್ನು ಯಾವ ಜಾತಿಗೆ ಸೇರಿಸಲಾಗುತ್ತದೆ ಎಂದು ಸ್ಪಷ್ಟನೆ ಕೋರಿ ಪತ್ರ ಬರೆಯಲಾಗಿದೆಯೇ ಹೊರತು ಒಳ ಮೀಸಲಾತಿಗೆ ವಿರೋಧಿಸಿಲ್ಲ. ಸುಪ್ರಿಂ ಕೋರ್ಟಿನ ತೀರ್ಪು ಜಾರಿಗೊಳಿಸುವುದು ರಾಜ್ಯ ಸರ್ಕಾರದ ನಿರ್ಧಾರವಾಗಿದೆ. ಮಲ್ಲಿಕಾರ್ಜುನ ಖರ್ಗೆಯವರವಾಗಲಿ, ಇತರೆ ಛಲವಾದಿ ಸಮಾಜದ ಮುಖಂಡರು ತಡೆಯುವ ಪ್ರಯತ್ನವೂ ಮಾಡಿಲ್ಲ. ಸುಳ್ಳು ಆರೋಪ ಮಾಡುವುದರಿಂದ ಸಮಾಜದಲ್ಲಿಯೇ ಬಿರುಕು ಮೂಡಿಸಲು ಕಾರಣವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisements

ಮಹಾಸಭಾ ಮಾಜಿ ಅಧ್ಯಕ್ಷ ಜಗನ್ನಾಥ ಸುಂಕಾರಿ ಮಾತನಾಡಿ, ಕಳೆದ 3 ವರ್ಷಗಳಿಂದ ನ್ಯಾಯಮೂರ್ತಿ ಸದಾಶಿವ ಆಯೋಗ ವರದಿ ಜಾರಿಗೆ ಮಾದಿಗ ಸಮುದಾಯದೊಂದಿಗೆ ಛಲವಾದಿ ಸಮಾಜವೂ ಒತ್ತಾಯಿಸುತ್ತಲೇ ಬಂದಿದೆ. ಜನಸಂಖ್ಯೆಯಲ್ಲಿ ಆಗುವ ವ್ಯತ್ಯಾಸ ಮೀಸಲಾತಿ ಹಂಚಿಕೆ ಮೇಲೂ ಆಗುವ ಆತಂಕದಿಂದ ಸ್ಪಷ್ಟನೆ ಕೋರಲಾಗಿದೆಯೇ ಹೊರತು ಒಳ ಮೀಸಲಾತಿ ಜಾರಿಗೆ ವಿರೋಧಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಮೀಸಲಾತಿ ಜಾರಿಗೆ ಬಗ್ಗೆ ಹೇಳಿಕೆ, ಇನ್ನಿತರ ಅಡ್ಡಿಯಾಗಿಲ್ಲ. ಮಾದಿಗ ಸಮಾಜದ ಜೊತೆಯಲ್ಲಿ ಛಲವಾದಿ ಸಮಾಜವು ರಾಜ್ಯದಲ್ಲಿ ಹೋರಾಟದೊಂದಿಗೆ ಬೆಂಬಲಿಸುತ್ತಾ, ನಿರಂತರ ಕೈ ಜೋಡಿಸಿ ಬೆಂಬಲವಾಗಿದ್ದೇವೆ ಎಂದರು.

ಸುಪ್ರಿಂ ಕೋರ್ಟ್ ತೀರ್ಮಾನದಂತೆಯೇ ಖಚಿತ ಜನಸಂಖ್ಯೆ ಮಾಹಿತಿಯ ಆಧಾರದ ಮೇಲೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ. ಆಯೋಗದಲ್ಲಿರುವ ಗೊಂದಲ ನಿವಾರಿಸಲು ಕೇಳಲಾಗಿದೆ ಹೊರತು ಜಾರಿಗೆ ವಿರೋಧವಿಲ್ಲ. ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ಕೆಲಸವಾಗಬಾರದು ಎಂದು ಶಿವರಾಜ್ ಹೇಳಿದರು.

ಈ ಸಂದರ್ಭದಲ್ಲಿ ಮಹಾಸಭಾ ಪ್ರಧಾನ ಕಾರ್ಯದರ್ಶಿ ತಮ್ಮಣ್ಣ ವಕೀಲ, ಶಿವುಕಮಾರ ಜೆ.ಹನುಮಾಪುರು, ಮಧುಕಾಂತ, ಮಧುಕಾಂತ, ಸಚ್ಚಿದಾನಂದ, ನರಸಿಂಹ ಇನ್ನಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X