ಉಡುಪಿ | ಮಲ್ಪೆಯಲ್ಲಿ ಬಾಂಬ್ ಸ್ಫೋಟ, ಐವರು ಗಂಭೀರ..! ಬಂದರಿನಲ್ಲಿ ಅಣಕು ಕಾರ್ಯಾಚರಣೆ

Date:

ಭಾರತ ಪಾಕಿಸ್ತಾನ ಯುದ್ದಭೀತಿಯ ನಡುವಲ್ಲೇ ನಗರದ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್ ಸ್ಪೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

- Advertisement -

ಸಂಜೆ ಸುಮಾರು 4.30 ಕ್ಕೆ ಪ್ರಶಾಂತವಾಗಿದ್ದ ಕಡಲಿನ ನಡುವೆ ತಣ್ಣಗೆ ಮೈಹೊದ್ದು ಕುಳಿತಿದ್ದ ಮೀನುಗಾರರಿಗೆ, ಒಮ್ಮೆಲೆ ದೊಡ್ಡ ಸದ್ದು ಕೇಳಿ, ಬೆಂಕಿ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ಗಾಬರಿಯಿಂದ ಓಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದ್ದಾರೆ. ಗಾಯಗೊಂಡ ಐವರು ಮೀನುಗಾರರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಇದು ನಿಜ ಘಟನೆ ಅಲ್ಲ. ಸಂಭಾವ್ಯ ಆತಂಕದ ಹಿನ್ನಲೆಯಲ್ಲಿ ನಡೆದ ಅಣಕು ಪ್ರದರ್ಶನ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...
1005396236

ಮಲ್ಪೆ ಮೀನುಗಾರರ ಸಂಘ, ಕರಾವಳಿ ಕಾವಲು ಪಡೆ, ಆರೋಗ್ಯ ಇಲಾಖೆ, ಮೀನುಗಾರಿಕಾ ಇಲಾಖೆ, ಅಗ್ನಿಶಾಮಕ ದಳ, ಕಸ್ಟಮ್ಸ್ ವತಿಯಿಂದ ಜಂಟಿಯಾಗಿ ಮಲ್ಪೆ ಬಂದರಿನಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು.

ಅಗ್ನಿಶಾಮಕ ವಾಹನವು ಸೈರನ್ ಮೊಳಗಿಸುತ್ತಾ ಬಂದರಿಗೆ ಬಂದು ತಾತ್ಕಾಲಿಕ ಬೆಂಕಿಯನ್ನು ನಂದಿಸಿ, ಗಾಯಗೊಂಡವರನ್ನು ರಕ್ಷಿಸುವ ಅಣುಕು ಕಾರ್ಯಾಚರಣೆ ಮಾಡಲಾಯಿತು. ನಂತರ ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್ ಅಧಿಕಾರಿಗಳು ಹಾಗು ಮೀನುಗಾರರಿಗೆ ಕಾರ್ಯಾಚರಣೆಯ ಮಹತ್ವವನ್ನು ವಿವರಿಸಿದರು.

ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ಬೋಟ್‌ನಲ್ಲಿ ಶಸ್ತ್ರಸಜ್ಜಿತರಾಗಿ ಬಂದರಿನ ಸುತ್ತಲೂ ಗಸ್ತು ತಿರುಗುವ ಮೂಲಕ ವಿಶೇಷ ಸನ್ನಿವೇಶದಲ್ಲಿ ಇಲಾಖೆಯ ಕಾರ್ಯದ ಬಗ್ಗೆ ಅರಿವು ಮೂಡಿಸಿದರು. ಕರಾವಳಿ ಕಾವಲು ಪಡೆಯ ಪೋಲಿಸ್ ನಿರೀಕ್ಷಕರಾದ ಪ್ರಮೋದ್, ಸೀತರಾಮ್, ಪಿಎಸ್ಐ ಫೆಮಿನಾ ಸೇರಿದಂತೆ ಮೊದಲಾದ ಅಧಿಕಾರಿಗಳು ಹಾಜರಿದ್ದರು.

1005396235

ಕರಾವಳಿ ಕಾವಲು ಪಡೆ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಮಾತನಾಡಿ, ಕರ್ನಾಟಕದ 12 ಪ್ರಮುಖ ಬಂದರಿನಲ್ಲಿ ಮಲ್ಪೆ ಬಂದರು ಪ್ರಮುಖವಾಗಿದೆ. ಅತೀ ಹೆಚ್ಚು ಮೀನುಗಾರಿಕಾ ಚಟುವಟಿಕೆ ನಡೆಯುವ ಬಂದರು ಇದಾಗಿದ್ದು, ಇಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆದರೇ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಅಣಕು ಕಾರ್ಯಾಚರಣೆಯನ್ನು ನೀಡಲಾಗಿದೆ. ಮೀನುಗಾರರು 3 ಬೋಟ್‌ಗಳು ಒಟ್ಟಿಗೆ ಮೀನುಗಾರಿಕೆ ತೆರಳಬೇಕು. ಸೂಕ್ಷ್ಮ ಪ್ರದೇಶಗಳಿಗೆ ಮೀನುಗಾರಿಕೆಗೆ ತೆರಳುವಾಗ ಮುಂಜಾಗ್ರತೆ ವಹಿಸಲು ಸೂಚಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...