ಮಾಲೂರು | ಬಿಜೆಪಿ ಅಭ್ಯರ್ಥಿ ಪರ ಮುನಿಸ್ವಾಮಿ ಮತಯಾಚನೆ; ‌ಸ್ಥಳೀಯರಿಂದ ತರಾಟೆ

Date:

  • ಬಿಜೆಪಿಗೆ ಮತ ಹಾಕುವುದಿಲ್ಲ ಎಂದ ಮಾಲೂರು ಗ್ರಾಮಸ್ಥರು
  • ಮಾಲೂರು ಕ್ಷೆತ್ರದಲ್ಲಿ ಪ್ರಬಲ ಪೈಪೋಟಿಗೆ ತಯಾರಾಗಿರುವ ವಿಜಯ ಕುಮಾರ

ಕರ್ನಾಟಕ ವಿಧಾನಸಭಾ ಚುನಾವಣೆ 2023 ಹತ್ತಿರ ಬರುತಿದ್ದಂತೆ ಎಲ್ಲ ಪಕ್ಷಗಳಿಂದ ಭರಾಟೆ ಪ್ರಚಾರ ನಡೆಯುತ್ತಿದೆ. ಮಾಲೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್ ಮಂಜುನಾಥಗೌಡ ಪರವಾಗಿಕೋಲಾರ ಸಂಸದ ಮುನಿಸ್ವಾಮಿ ಗುರುವಾರ ರಾತ್ರಿ ಮತಯಾಚನೆ ನಡೆಸಿದ್ದಾರೆ. ಈ ವೇಳೆ, ಅವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

- Advertisement -

ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಅಸಂಡಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಸಂಸದ ಮುನಿಸ್ವಾಮಿ ಮತಯಾಚನೆಗೆ ತೆರಳಿದ್ದರು. ಗ್ರಾಮದ ತಿಗಳ ಸಮುದಾಯದ ಯುವಕರು ಮತ್ತು ಗ್ರಾಮಸ್ಥರು ಸಂಸದರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

“ಹೂಡಿ ವಿಜಯ ಕುಮಾರ್ ಮೊದಲಿಂದಲೂ ಬಿಜೆಪಿ ಸಂಘಟನೆ ಮಾಡಿಕೊಂಡು ಬಂದಿದ್ದು, ಪಕ್ಷಕ್ಕಾಗಿ ಹಗಲಿರುಳು ದುಡಿದಿದ್ದರು. ಅಂಥವರಿಗೆ ಟಿಕೆಟ್‌ ತಪ್ಪಿಸಿ ಜೆಡಿಎಸ್‌ನಿಂದ ಬಿಜೆಪಿಗೆ ಬಂದವರಿಗೆ ಟಿಕೆಟ್‌ ಕೊಡಿಸಿದ್ದೀರಿ. ವಿಜಯ್‌ಗೆ ಟಿಕೆಟ್‌ ಕೈ ತಪ್ಪಲು ಮುಖ್ಯವಾಗಿ ನೀವೆ ಕಾರಣ. ಹಾಗಾಗಿ, ನೀವು ಇಲ್ಲಿ ಮತ ಕೇಳಲು ಬರಬೇಡಿ. ಬಿಜೆಪಿಗೆ ಮತ ಹಾಕುವುದಿಲ್ಲ” ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ತಿಗಳ ಸಮುದಾಯದ ಮತ್ತು ಬಿಬಿಎಂಪಿ ಮಾಜಿ ಸದಸ್ಯರೂ ಆಗಿರುವ ಹೂಡಿ ವಿಜಯ್‌ ಕುಮಾರ್ ಅವರು ಬಿಜೆಪಿಯ ಪ್ರಬಲ ಅಕಾಂಕ್ಷಿಯಾಗಿದ್ದರು. ಕಳೆದ ನಾಲ್ಕು ವರ್ಷಗಳಿಂದ ಸಕ್ರಿಯವಾಗಿ ಸಾರ್ವಜನಿಕ ಕೆಲಸದಲ್ಲಿ ತೊಡಗಿದ್ದು, ಅಪಾರ ಜನಪರ ಕೆಲಸಗಳನ್ನು ಮಾಡಿದ್ದಾರೆ. ಜೊತೆಗೆ ಅಪಾರವಾದ ತಮ್ಮದೇ ಆದ ಅಭಿಮಾನಿಗಳನ್ನು ಹೊಂದಿದ್ದರೂ ಕೂಡ ಅವರನ್ನು ಪರಿಗಣಿಸದೇ ಬಿಜೆಪಿ ಹೈಕಮಾಂಡ್‌ ಕೆ.ಎಸ್ ಮಂಜುನಾಥಗೌಡ ಅವರಿಗೆ ಟಿಕೆಟ್ ನೀಡಿದೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಅರಕಲಗೂಡು | ಎ ಮಂಜು ಪರ ರೇವಣ್ಣ ಮತಯಾಚನೆ

ಪಕ್ಷೇತರವಾಗಿ ವಿಜಯ್ ಕುಮಾರ್ ಸ್ಪರ್ಧೆ

ಟಿಕೆಟ್‌ ಕೈ ತಪ್ಪಿದ ಬೆನ್ನಲ್ಲೆ ವಿಜಯ್‌ ಕುಮಾರ್ ಅವರು ಕ್ಷೇತ್ರದಲ್ಲಿ ಸಾವಿರಾರು ಅಭಿಮಾಗಳನ್ನು ಸೇರಿಸಿ ಸಭೆ ಮಾಡುವ ಮೂಲಕ ಪಕ್ಷೇತರವಾಗಿ ಸ್ಫರ್ಧಿಸಲು ತೀರ್ಮಾನಿಸಿದ್ದಾರೆ. ಇಪ್ಪತೈದು ಸಾವಿರ ಜನರೊಂದಿಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಹೂಡಿ ವಿಜಯ್‌ ಕುಮಾರ್ ಅವರು ಈಗ ಮಾಲೂರು ಕ್ಷೆತ್ರದಲ್ಲಿ ಪ್ರಬಲ ಪೈಪೋಟಿ ಕೊಡಲು ತಯಾರಾಗಿದ್ದಾರೆ. ಕಾಂಗ್ರೆಸ್‌ ವರ್ಸಸ್‌ ಪಕ್ಷೇತರ ಎನ್ನುವಂತೆ ಕ್ಷೇತ್ರದಲ್ಲಿ ಸದ್ದು ಮಾಡುತಿದ್ದಾರೆ. ಒಟ್ಟಿನಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ-ಜೆಡಿಎಸ್‌-ಪಕ್ಷೇತರಗಳ ನಡುವೆ ಪೈಪೋಟಿ ಇದ್ದರೂ ಅದರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮೊದಲಿಗೆ ನಿಂತು ಪಕ್ಷೇತರ ಅಭ್ಯರ್ಥಿ ಎರಡನೆಯ ಸ್ಥಾನದಲ್ಲಿ ನಿಲ್ಲುವಷ್ಟು ಪ್ರಬಲವಾಗಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಳ್ಳಾಲ | ಅಪಘಾತ: ಮಗನ ಸಾವಿನ ದುಃಖದಲ್ಲೂ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ವರ್ಷಿತ್ ಕುಟುಂಬ

ಉಳ್ಳಾಲ ತಾಲೂಕಿನ ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ದ್ವಿಚಕ್ರ...

ಕಲಬುರಗಿ | ಪಿಎಸ್‌ಐ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಪೊಲೀಸ್ ಪೇದೆ

ಖಾಕಿ ಧರಿಸಿ ರಕ್ಷಣೆ ಮಾಡಬೇಕಾದವರೇ ಅಪರಾಧ ಕೃತ್ಯಕ್ಕೆ ಇಳಿದಿರುವ ಘಟನೆ...

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...