ಕಲಬುರಗಿ | ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ವ್ಯಕ್ತಿ 18 ದಿನಗಳ ಬಳಿಕ ಸಾವು

Date:

Advertisements

ಜಾತಿ ನಿಂದನೆ ಮತ್ತು ಹಲ್ಲೆಗೆ ಒಳಗಾಗಿದ್ದ ಕಲಬುರಗಿ ಜಿಲ್ಲೆಯ ಜಗದೇವಪ್ಪ ಶಂಕರ ಕ್ವಾಟನೂರು ಅವರು ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

ಜಿಲ್ಲೆಯ ಕಮಲಾಪುರ ತಾಲೂಕಿನ ಹರಕಂಚಿ ಗ್ರಾಮದಲ್ಲಿ ಅಕ್ಟೋಬರ್ 27ರಂದು ಜಗದೇವಪ್ಪ ಮೇಲೆ ಕಲೆವು ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನೆಡಸಿದ್ದರು. 18 ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿದ್ದ ಜಗದೇವಪ್ಪ ಮಂಗಳವಾರ ಕೊನೆಯುಸಿರೆಳಿದಿದ್ದಾರೆ.

ಘಟನೆ ಸಂಬಂಧ ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಎಂಟು ಮಂದಿ ವಿರುದ್ಧ ಜಾತಿ ನಿಂದನೆ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ.

Advertisements

ಅಕ್ಟೋಬರ್ 26ರಂದು ಹರಕಂಚಿ ಗ್ರಾಮದಲ್ಲಿ ಮೆಹಬೂಬ ಸುಬಾನಿ ಸಂದಲ ಜಾತ್ರೆ ಇತ್ತು.ಜಾತ್ರೆಯ ಸಂಭ್ರಮದಲ್ಲಿದ್ದ ಜಗದೇವಪ್ಪ ಮತ್ತು ಸ್ನೇಹಿತರು ಗ್ರಾಮದ ಹನುಮಾನ ಕಟ್ಟೆ ಬಳಿ ಕುಳಿತಿದ್ದರು. ಅಲ್ಲಿಗೆ ಬಂದ ಆರೋಪಿ, ರೌಡಿಶೀಟರ್ ಶಂಕರ ಹಾಗೂ ಸಹಚರರು ಜಗದೇವಪ್ಪ ಮತ್ತು ಸ್ನೇಹಿತರಿಗೆ ಅವಾಜ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿದ್ದರು.

ಆರೋಪಿಗಳು ಮದ್ಯಪಾನದ ಮತ್ತಿನಲ್ಲಿದ್ದ ಕಾರಣ ಜಗದೇವಪ್ಪ, ಹೀಗೆಲ್ಲ ಮಾತನಾಡಬೇಡಿ. ನಿಮ್ಮ ಮನೆಯವರಿಗೆ ಹೇಳುತ್ತೇನೆ ಎಂದಿದ್ದರು. ಇದರಿಂದ ಕುಪಿತಗೊಂಡ ಆರೋಪಿ ಶಂಕರ ಮತ್ತು ಸಹಕರರು ಜಗದೇವಪ್ಪ ಮೇಲೆ ಹಲ್ಲೆ ಮಾಡಿದ್ದರು. ಜಗದೇವಪ್ಪನಿಗೆ ಶಂಕರ ರಾಡ್‌ನಿಂದ ಹೊಡೆದಿದ್ದಾನೆ. ಕುಸಿದು ಬಿದ್ದ ಜದೇವಪ್ಪನ ಮೇಲೆ ಶಂಕರನ ಸಹಚರರು ಮತ್ತೆ ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡ ಜಗದೇವಪ್ಪ ಪ್ರಜ್ಞೆತಪ್ಪಿ ಬಿದ್ದಿದ್ದರು ಎಂದು ತಿಳಿದುಬಂದಿತ್ತು.

ಬಳಿಕ ಗ್ರಾಮಸ್ಥರು ಮತ್ತು ಕುಟುಂಬಸ್ಥರು ಜಗದೇವಪ್ಪನನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಸತತ 18 ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿದ ಜಗದೇವಪ್ಪ, ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

ಪೊಲೀಸರು ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ರೌಡಿಶೀಟರ್ ಶಂಕರ ಮತ್ತು ಆತನ ಸಹಚರರಾದ ಪರಮೇಶ್ವರ ನಾಯ್ಕೋಡಿ, ದೇವರಾಜ ಗುಂಡಪ್ಪ ನಾಯಕೋಡಿ, ಸುನಿಲ ಶಿವಶರಣಪ್ಪ ನಾಯಕೋಡಿ, ಮಾಣಿಕ ಶಾಮರಾವ ನಾಯಕೋಡಿ, ವಿಶಾಲ ತಿಪ್ಪಣ್ಣ ನಾಯಕೋಡಿ, ಅನಿಲ ಗುಂಡಪ್ಪ ನಾಯಕೋಡಿ ಹಾಗೂ ಸಿದ್ರಾಮ ಶಾಮರಾವ ನಾಯಕೋಡಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಶಂಕರ ಪರಮೇಶ್ವರ ನಾಯಕೋಡಿ, ದೇವರಾಜ ಗುಂಡಪ್ಪ ನಾಯಕೋಡಿ, ಸುನೀಲ ಶಿವಶರಣಪ್ಪ ನಾಯಕೋಡಿ, ಮಾಣಿಕ ಶಾಮರಾವ ನಾಯಕೋಡಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಶಾಲ ತಿಪ್ಪಣ್ಣ ನಾಯಕೋಡಿ, ಅನಿಲ ಗುಂಡಪ್ಪ ನಾಯಕೋಡಿ ಹಾಗೂ ಸಿದ್ರಾಮ ಶಾಮರಾವ ನಾಯಕೋಡಿ ಪರಾರಿಯಾಗಿದ್ದಾರೆ.

ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ಮಹಾಗಾಂವ ಠಾಣೆಯ ಇಬ್ಬರು ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X