ಮಂಡ್ಯ | ರಾಷ್ಟ್ರಮಟ್ಟದ ಬಾಲಕಿಯರ 39ನೇ ಹ್ಯಾಂಡ್ ಬಾಲ್ ಕ್ರೀಡಾಕೂಟ; ಕರ್ನಾಟಕಕ್ಕೆ ದ್ವಿತೀಯ ಸ್ಥಾನ

Date:

Advertisements

ಬಾಲಕಿಯರ ರಾಷ್ಟ್ರಮಟ್ಟದ 39ನೇ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಕರ್ನಾಟಕ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕಳೆದ ಐದು ದಿನಗಳಿಂದ ನಡೆದ ಬಾಲಕಿಯರ ರಾಷ್ಟ್ರಮಟ್ಟದ 39ನೇ ಹ್ಯಾಂಡ್ ಬಾಲ್ ಕ್ರೀಡಾಕೂಟದಲ್ಲಿ ಗುಜರಾತ್‌ಗೆ ಪ್ರಥಮ ಸ್ಥಾನ, ಕರ್ನಾಟಕಕ್ಕೆ ದ್ವಿತೀಯ ಸ್ಥಾನ ಹಾಗೂ ಉತ್ತರ ಪ್ರದೇಶ ಹಾಗೂ ಯಶಸ್ವಿ ಅಕಾಡೆಮಿ ತೃತೀಯ ಸ್ಥಾನ ಪಡೆದುಕೊಂಡಿವೆ.

ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಹ್ಯಾಂಡ್ ಬಾಲ್ ಅಸೋಸಿಯೇಷನ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಆನಂದೇಶ್ವರ ಪಾಂಡೆ, ಕರ್ನಾಟಕ ಹ್ಯಾಂಡ್ ಬಾಲ್ ಅಸೋಸಿಯನ್ ಡಾ. ಮನೋಜ್ ಪಿ ಸಾಹುಕಾರ್, ಪ್ರಧಾನ ಕಾರ್ಯದರ್ಶಿ ಬಿ ಎಲ್ ಲೋಕೇಶ್, ಖಜಾಂಚಿ ಪ್ರಕಾಶ್ ನರಗಟ್ಟಿ, ಹಿರಿಯ ಗಾಂಧಿವಾದಿ ಡಾ. ಬಿ ಸುಜಯ್ ಕುಮಾರ್ ಶ್ರೀರಂಗಪಟ್ಟಣ, ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್‌ ಶಿವಲಿಂಗ ದಳವಾಯಿ, ಮಂಡ್ಯ ಹ್ಯಾಂಡ್ ಬಾಲ್ ಅಸೋಸಿಯೇಷನ್ ಅಧ್ಯಕ್ಷ ಮಂಜುರಾಮ್‌, ಪುಟ್ಟೇಗೌಡ, ಪ್ರಧಾನ ಕಾರ್ಯದರ್ಶಿ ಹಾಗೂ ಕ್ರೀಡಾ ಸಂಘಟನಾಕಾರ ಡಾ. ರಾಘವೇಂದ್ರ ಸೇರಿದಂತೆ ಹಲವಾರು ಗಣ್ಯರು ಸೇರಿ ಬಹುಮಾನ ವಿತರಣಾ ಕಾರ್ಯಕ್ರಮ ನೆರವೇರಿಸಿದರು.‌

Advertisements
ಹ್ಯಾಂಡ್‌ ಬಾಲ್‌ ಕ್ರೀಡಾಕೂಟ 1

ಈ ಕ್ರೀಡಾಕೂಟಕ್ಕೆ ದೇಶದ 24 ರಾಜ್ಯಗಳು ಭಾಗವಹಿಸಿದ್ದವು. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹ್ಯಾಂಡ್ ಬಾಲ್ ಅಸೋಸಿಯೇಷನ್‌ನ ಎಲ್ಲ ಪದಾಧಿಕಾರಿಗಳು, ಮಂಡ್ಯ ಜಿಲ್ಲಾ ಹ್ಯಾಂಡ್ ಬಾಲ್ ಅಸೋಸಿಯೇಷನ್ ಪದಾಧಿಕಾರಿಗಳು,
ಪರಿವರ್ತನಾ ಶಾಲಾ ಕಾಲೇಜಿನ ಸಿಬ್ಬಂದಿಗಳು, ಶೇಷಾದ್ರಿಪುರಂ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಚಿವ ಅಕಾಡೆಮಿ ವಿದ್ಯಾರ್ಥಿಗಳು ಭಾಗವಹಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಜಾತಿಗಣತಿಯಲ್ಲಿ ಪರಿಶಿಷ್ಟ ಜಾತಿಯೆಂದು ಸ್ಪಷ್ಟವಾಗಿ ದಾಖಲಿಸಬೇಕು: ಶಿವಕುಮಾರ್ ಮನವಿ

ಕ್ರೀಡಾಕೂಟದಲ್ಲಿ ಚಂದ್ರನಾಗ್, ರಾಜೇಶ್ ದೀಪಕ್, ದೇವರಾಜ್ ರುಕ್ಮಾಂದ, ನಾಗೇಂದ್ರ, ಅನನ್ಯ, ಗುರುಪ್ರಸಾದ್ ಸೇರಿದಂತೆ ಇನ್ನು ಮುಂತಾದವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X