ಮಂಡ್ಯ | ಆ.18ರಂದು 7ನೇ ಕನ್ನಡ ಅಕ್ಷರ ಜಾತ್ರೆ ಕಾರ್ಯಕ್ರಮ

Date:

Advertisements

ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಯುವಸೇನೆ ಇವರ ಸಂಯುಕ್ತಾಶ್ರಯದಲ್ಲಿ ಭಾರತದ 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 7ನೇ ಕನ್ನಡ ಅಕ್ಷರ ಜಾತ್ರೆ ಹಾಗೂ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಗಸ್ಟ್ 18ರಂದು ಮಂಡ್ಯ ನಗರದ ಗಾಂಧಿಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. 7ನೇ ಕನ್ನಡ ಅಕ್ಷರ ಜಾತ್ರೆ ಸಮೇಳನಾಧ್ಯಕ್ಷರಾಗಿ ಸಾಹಿತಿ ಈ.ಗಂಗೇಗೌಡ ಆಯ್ಕೆಯಾಗಿದ್ದು, ಅಕ್ಷರ ಜಾತ್ರೆಯನ್ನು ಖ್ಯಾತ ವೈದ್ಯ ಡಾ.ಕೆ.ಚಂದ್ರಶೇಖರ್ ಉದ್ಘಾಟಿಸಲಿದ್ದಾರೆ.

ರಾಜ್ಯ ಆರ್‌ಟಿಓ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜನ್ ಅಧ್ಯಕ್ಷತೆ ವಹಿಸಲಿದ್ದು, ಸೇವಾರತ್ನ ಪ್ರಶಸ್ತಿಯನ್ನು ಶರಣ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಬನ್ನಂಗಾಡಿ ಸಿದ್ದಲಿಂಗಯ್ಯ ಪ್ರದಾನ ಮಾಡಲಿದ್ದಾರೆ. ಎಎಸ್ಪಿ ಗಂಗಾಧರಸ್ವಾಮಿ ಕನ್ನಡರತ್ನ ಪ್ರಶಸ್ತಿ ವಿತರಿಸಲಿದ್ದಾರೆ.

Advertisements

ಕಸಾಪ ಮಾಜಿ ಜಿಲ್ಲಾಧ್ಯಕ್ಷ ಡಾ.ಎಚ್.ಎಸ್.ಮುದ್ದೇಗೌಡ, ಸಮ್ಮೇಳನಾಧ್ಯಕ್ಷರಿಗೆ ಗೌರವ ಸಲ್ಲಿಸಲಿದ್ದು, ಉದ್ಯಮಿ ಡಾ.ಶ್ರೀಕಾಂತ್, ಇಂಡಿಯನ್ ಫಿಲ್ಮ್ ಮೇಕರ್ ಅಸೋಸಿಯೇಷನ್ ಅಧ್ಯಕ್ಷ ದಿಲೀಪ್‌ಕುಮಾರ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.

ಇದನ್ನು ಓದಿದ್ದೀರಾ? ಆ. 19ಕ್ಕೆ ಮಾಲೂರು ಕ್ಷೇತ್ರದ ಮತ ಎಣಿಕೆ ದೃಶ್ಯಾವಳಿ ಸಲ್ಲಿಸಿ: ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ನಿರ್ದೇಶನ

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಹತ್ತಾರು ಗಣ್ಯರಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು ಎಂದು ವೇದಿಕೆಯ ಅಧ್ಯಕ್ಷ ಎಸ್.ಕೃಷ್ಣಸ್ವರ್ಣಸಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X