ಮಂಡ್ಯ | ರಸ್ತೆ ಬದಿ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಕಾರು: ನಾಲ್ವರು ಸ್ಥಳದಲ್ಲೇ ಸಾವು

Date:

Advertisements

ರಸ್ತೆ ಬದಿ ನಿಂತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ಗೆ ವೇಗವಾಗಿ ಬಂದ್ ಕಾರ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ಳೂರು ಕ್ರಾಸ್ ಬಳಿ ನಡೆದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆ ಎದುರು ರಸ್ತೆ ಬದಿ ನಿಂತಿದ್ದ ಕೆಎಸ್​ಆರ್​ಟಿಸಿ ಬಸ್​​​ಗೆ ​ಹಾಸನ ಕಡೆಯಿಂದ ಬಂದ KA-02 MM 1802 ನಂಬರಿನ ಸ್ವಿಫ್ಟ್ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ.

ವೇಗವಾಗಿ ಬಂದ ಕಾರು ಬಸ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ, ಮೂವರು ಪುರುಷರು ಸೇರಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Advertisements

ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂದಿನ ಅರ್ಧ ಭಾಗ ಬಸ್​ನೊಳಗೆ ಹೊಕ್ಕಿದೆ. ಇನ್ನು ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಮೃತರನ್ನು ಬೆಂಡಿಗನಹಳ್ಳಿ ನಮಿತಾ, ಇನ್ಫೋಸಿಸ್ ನೌಕರ ರಾಜಸ್ಥಾನದ ಪಂಕಜ್ ಶರ್ಮಾ, ವಂಶಿಕೃಷ್ಣ ಹೊಸಕೋಟೆ ಹಾಗೂ ರಘುನಾಥ್ ಭಜಂತ್ರಿ ಧಾರವಾಡ ಎಂದು ಗುರುತಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಎಂಟಿಸಿ ಆ್ಯಪ್ ಬಿಡುಗಡೆ ; ಬಸ್‌ಗಳ ನೈಜ ಸಮಯ ಲಭ್ಯ

ಘಟನೆ ವಿಷಯ ತಿಳಿದು ಸ್ಥಳಕ್ಕೆ ಬೆಳ್ಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X