ಮಂಡ್ಯ | 21 ವರ್ಷಗಳ ಬಳಿಕ ಪಿಯುಸಿ ಪಾಸ್‌ ಮಾಡಿದ ಅಂಗನವಾಡಿ ಶಿಕ್ಷಕಿ

Date:

Advertisements

21 ವರ್ಷಗಳ ಹಿಂದೆ ಪಿಯು ವ್ಯಾಸಂಗವನ್ನು ಅರ್ಧಕ್ಕೆ ಕಡಿತಗೊಳಿಸಿದ್ದ ಅಂಗನವಾಡಿ ಶಿಕ್ಷಕಿಯೊಬ್ಬರು ಇದೀಗ ಪಿಯುಸಿ ಪರೀಕ್ಷೆ ಬರೆದು, ಪಾಸ್‌ ಆಗಿದ್ದಾರೆ. ಆ ಮೂಲಕ ಶಿಕ್ಷಣವನ್ನು ಅರ್ಧಕ್ಕೆ ಕಡಿತಗೊಳಿಸಿದ್ದ ಹಲವಾರು ಮಹಿಳೆಯರು ಮತ್ತೆ ಪರೀಕ್ಷೆ ಬರೆಯಲು ಪ್ರೇರಣೆಯಾಗಿದ್ದಾರೆ. ಮಾತ್ರವಲ್ಲದೆ, ತಾವು ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕೇಂದ್ರವನ್ನು ಮಾದರಿ ಕೇಂದ್ರವನ್ನಾಗಿ ಮಾಡಲು ಮುಂದಾಗಿದೆ.

ಮಂಡ್ಯ ಜಿಲ್ಲೆಯ ಡಣಾಯಕನಪುರ ಗ್ರಾಮದ ಅಂಗನವಾಡಿ ಶಿಕ್ಷಕಿ ಡಿ ಉಷಾ ಅವರು ಪಿಯುಸಿ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದಾರೆ. ಅವರು 2004ರಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆದರೆ, ಅವರಿಗೆ ಪೋಷಕರು ವಿವಾಹ ನಿಶ್ಚಯ ಮಾಡಿ, ಪಿಯುಸಿ ಪರೀಕ್ಷೆಗೆ ಒಂದು ತಿಂಗಳಿರುವಾಗಲೇ ಅವರನ್ನು ಕಾಲೇಜು ಬಿಡಿಸಿದ್ದರು. ಮದುವೆ ಮಾಡಿದ್ದರು. ಹೀಗಾಗಿ, ಅವರು ಪಿಯುಸಿ ಪರೀಕ್ಷೆ ಬರೆಯಲು ಆಗಿರಲಿಲ್ಲ ಎಂದು ತಿಳಿದುಬಂದಿದೆ.

ಮದುವೆಯ ಬಳಿಕ, 2007ರಲ್ಲಿ ಅವರು ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿ ಸೇರಿದರು. ನಾಲ್ಕು ವರ್ಷಗಳ ಹಿಂದೆ ಅಜೀಂ ಪ್ರೇಮ್‌ಜೀ ಫೌಂಡೇಷನ್ ನೀಡಿದ ತರಬೇತಿ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು. ಕಾರ್ಯಗಾರದಲ್ಲಿ ನೀಡಲಾದ ತರಬೇತಿಯಿಂದ ಪ್ರೇರಣೆಗೊಂಡ ಉಷಾ ಅವರು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ನಿರ್ಧರಿಸಿದ್ದರು.

Advertisements

ಈ ವರ್ಷ ಪರೀಕ್ಷೆ ಕಟ್ಟಿದ್ದ ಪರೀಕ್ಷೆ ಬರೆದು, ಒಟ್ಟು 600 ಅಂಕಗಳಲ್ಲಿ 341 ಅಂಕಗಳನ್ನು ಗಳಿಸಿದ್ದಾರೆ. ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ. ಅವರು ಕನ್ನಡ – 83, ಇಂಗ್ಲಿಷ್‌ – 43, ಇತಿಹಾಸ – 72, ಅರ್ಥಶಾಸ್ತ್ರ – 43, ಸಮಾಜಶಾಸ್ತ್ರ – 50 ಹಾಗೂ ರಾಜಶಾಸ್ತ್ರದಲ್ಲಿ 50 ಅಂಕಗಳನ್ನು ಪಡೆದಿದ್ದಾರೆ.

ತಮ್ಮ ಶಿಕ್ಷಣವನ್ನು ಮುಂದುವರೆಸಿರುವುದು ಮಾತ್ರವಲ್ಲದೆ, ಅವರು ಅಂಗನವಾಡಿಯ ಅಭಿವೃದ್ಧಿಗೂ ಶ್ರಮಿಸುತ್ತಿದ್ದಾರೆ. ತಮಗೆ ಬರುವ ಕಡಿಮೆ ಗೌರವಧನದ ಹಣವನ್ನೂ ಸಂಗ್ರಹಿಸಿಟ್ಟು, ಅದೇ ಹಣದಲ್ಲಿ ಅಂಗನವಾಡಿಗೆ ಬಣ್ಣ ಬಳಿದಿದ್ದಾರೆ. ಮಾತ್ರವಲ್ಲದೆ, ಅಂಗನವಾಡಿ ಗೋಡೆಗಳಿಗೆ ಆಕರ್ಷಣೀಯ ಚಿತ್ರಗಳನ್ನೂ ಬಿಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X