ಮಂಡ್ಯ | ಬ್ಯಾಂಕ್ ದರೋಡೆಗೆ ಯತ್ನ; ಸೆಕ್ಯೂರಿಟಿ ಗಾರ್ಡ್‌ಗೆ ಇರಿದ ದುಷ್ಕರ್ಮಿಗಳು

Date:

Advertisements

ಬ್ಯಾಂಕ್ ದರೋಡೆಗೆ ಬಂದ ಗುಂಪನ್ನು ತಡೆಯಲು ಯತ್ನಿಸಿದ ಸೆಕ್ಯೂರಿಟಿ ಗಾರ್ಡ್‌ಗೆ ಮಾರಕಾಸ್ತ್ರದಿಂದ ಇರಿದು ಗಾಯಗೊಳಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಹರಿಹರಪುರ ಗ್ರಾಮದಲ್ಲಿ ಭಾನುವಾರ ಮದ್ಯರಾತ್ರಿ ನಡೆದಿದೆ.

ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಮನು(30) ಇರಿತದಿಂದ ಗಾಯಗೊಂಡಿರುವ ಕರ್ತವ್ಯನಿರತ ನೌಕರ. ಇವರು ಡಿಸಿಸಿ ಬ್ಯಾಂಕ್ ಹಾಗೂ ವಿಎಸ್‌ಎಸ್‌ಎನ್ ನೌಕರ ಎಂದು ತಿಳಿದುಬಂದಿದೆ.

ಘಟನೆ ವಿವರ:

Advertisements

ಹರಿಹರಪುರ ಗ್ರಾಮದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗೆ ಮುಸುಕುದಾರಿಗಳಾಗಿದ್ದ ಮೂವರು ದರೋಡೆಕೋರರು ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಕರ್ತವ್ಯನಿರತನಾಗಿದ್ದ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಮನು(30) ದರೋಡೆಕೋರರನ್ನು ತಡೆದು, ಕಿರುಚಿಕೊಂಡಿದ್ದಾರೆ. ಇದರಿಂದ ವಿಚಲಿತರಾದ ದರೋಡೆಕೋರರು ಬ್ಯಾಂಕ್ ಬೀಗ ಒಡೆಯಲು ಸಾಧ್ಯವಾಗದೇ ಇದ್ದಾಗ ಸೆಕ್ಯೂರಿಟಿ ಗಾರ್ಡ್‌ನ ಹೊಟ್ಟೆಯ ಭಾಗಕ್ಕೆ ಮಾರಕಾಸ್ತ್ರದಿಂದ ಇರಿದು ಹತ್ಯೆಗೆ ಯತ್ನಿಸಿದ್ದಾರೆ. ಅಷ್ಟರಲ್ಲಿ ಸಾರ್ವಜನಿಕರು ಜಮಾಯಿಸುತ್ತಿರುವುದನ್ನು ಅರಿತ ದರೋಡೆಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.

ಮಾರಕಾಸ್ತ್ರದ ಇರಿತದಿಂದ ಗಾಯಗೊಂಡು ಅಸ್ವಸ್ಥಗೊಂಡಿದ್ದ ಸೆಕ್ಯೂರಿಟಿ ಗಾರ್ಡ್ ಮನು ಅವರನ್ನು ಗ್ರಾಮಸ್ಥರು ಕೆ ಆರ್ ಪೇಟೆ ಪಟ್ಟಣದ ದುಂಡಶೆಟ್ಟಿ-ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಆಗ್ರಹ

ಪ್ರಾಣಾಪಾಯದಿಂದ ಪಾರಾಗಿರುವ ಸೆಕ್ಯೂರಿಟಿ ಗಾರ್ಡ್ ಮನು ಅವರನ್ನು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್ ಕೆ ಅಶೋಕ್‌, ಹರಿಹರಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಅಧ್ಯಕ್ಷ ಮೋಹನ್, ಸಿಇಒ ಕಾಂತರಾಜು, ಮಾಜಿ ಅಧ್ಯಕ್ಷರುಗಳಾದ ನಿಂಗರಾಜು, ಕೃಷ್ಣೇಗೌಡ, ಬಾಲಗಂಗಾಧರತಿಲಕ್, ರೇವಣ್ಣ, ಡೇರಿ ಅಧ್ಯಕ್ಷ ನಾಗೇಶ್ ಸೇರಿದಂತೆ ಇತರರು ಗಾಯಾಳುವನ್ನು ಭೇಟಿ ಮಾಡಿ ಧೈರ್ಯ ತುಂಬಿದರು. ಬಳಿಕ ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿ, ದುಷ್ಕರ್ಮಿಗಳನ್ನು ಪತ್ತೆ ಮಾಡಿ ಡಿಸಿಸಿ ಬ್ಯಾಂಕ್ ಮತ್ತು ವಿಎಸ್‌ಎಸ್‌ಎನ್ ಬ್ಯಾಂಕ್ ಶಾಖೆಗಳಿಗೆ ಸೂಕ್ತ ಪೊಲೀಸ್ ಗಸ್ತು ಭದ್ರತೆ ಒದಗಿಸಿಕೊಡಬೇಕೆಂದು ಮನವಿ‌ ಮಾಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X