ಮಂಡ್ಯ | ಕಾವೇರಿ ಸಂಕಷ್ಟ: ವಿಶೇಷ ಅಧಿವೇಶನ ಕರೆಯಲು ಒತ್ತಾಯ

Date:

ಕಾವೇರಿ ಕೊಳ್ಳದ ಜನರ ಹಿತ ಕಾಪಾಡುವ ದೃಷ್ಠಿಯಿಂದ ರಾಜ್ಯ ಸರ್ಕಾರ ಕೂಡಲೇ ತುರ್ತು ವಿಧಾನಸಭಾ ಅಧಿವೇಶನ ಕರೆಯಬೇಕು ಎಂದು ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಒತ್ತಾಯಿಸಿದೆ.

- Advertisement -

ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಸಮಿತಿಯು ಮಂಡ್ಯದಲ್ಲಿ ಹೋರಾಟ ನಡೆಸುತ್ತಿದೆ. “ಕಾವೇರಿ ನದಿ ನೀರಿನ ವಿಚಾರದಲ್ಲಿ ಸಂಕಷ್ಟ ಸನ್ನಿವೇಶ ಎದುರಿಸುತ್ತಿರುವ ರೈತರ ಪರವಾಗಿ ರಾಜ್ಯ ಸರ್ಕಾರ ನಿಲ್ಲಬೇಕು. ತುರ್ತು ಅಧಿವೇಶನ ನಡೆಸಿ ಸಮಗ್ರ ಚರ್ಚೆ ನಡೆಸಬೇಕು. ರೈತರ ಹಿತ ಕಾಪಾಡಬೇಕು” ಎಂದು ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿಯವರನ್ನು ಭೇಟಿಯಾಗಿ ವಾಸವಾಂಶವನ್ನು ಮನವರಿಕೆ ಮಾಡಿಕೊಡಲು ಮುಂದಾಗಬೇಕು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ವಾಸ್ತವಾಂಶದ ಅಂಕಿ ಅಂಶಗಳ ಸಮೇತ ಸಮರ್ಥವಾದ ಮಂಡನೆಗೆ ಸರ್ಕಾರ ಮುಂದಾಗಬೇಕು, ಪ್ರಾಧಿಕಾರದ ಆದೇಶ ಪಾಲನೆ ಮಾಡಿ ಯಾವುದೇ ಕಾರಣಕ್ಕೂ ಒಂದು ಹನಿ ನೀರನ್ನು ಸರ್ಕಾರ ಬಿಡುಗಡೆ ಮಾಡಬಾರದು ಎಂದು ನಿರ್ಣಯ ಕೈಗೊಂಡಿದೆ.

ರಾಜ್ಯದ ಎಲ್ಲ ಸಂಸದರು ಪಕ್ಷಾತೀತವಾಗಿ ಒಗ್ಗೂಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕಾವೇರಿ ವಿಚಾರದಲ್ಲಿ ಸಂಕಷ್ಟದ ಸಮಯದಲ್ಲಿ ಸಂಕಷ್ಟ ಸೂತ್ರ ರಚಿಸಲು ಒತ್ತಾಯ ಮಾಡಬೇಕು, ಒಕ್ಕೂಟ ವ್ಯವಸ್ಥೆಯಲ್ಲಿ ಪ್ರಧಾನ ಮಂತ್ರಿ ಮಧ್ಯ ಪ್ರವೇಶಿಸಿ ಸಂಕಷ್ಟ ಸಮಯದಲ್ಲಿ ಸಮಸ್ಯೆ ಪರಿಹಾರಕ್ಕೆ ಮುಂದಾಗಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ದೊರಕಿಸಿ ಕೊಡಬೇಕೆಂದು ಸಮಿತಿಯು ಆಗ್ರಹಿಸಿದೆ.

ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರ ರೈತರಿಗೆ ಗುಳೆ ಭಾಗ್ಯ ನೀಡಿದೆ ಎಂದು ರೈತರು ಅಣಕು ಗುಳೆ ಯಾತ್ರೆ ಮೂಲಕ ಶ್ರೀರಂಗಪಟ್ಟಣದಲ್ಲಿ ಪ್ರತಿಭಟಿಸಿದರು.

ಭೂಮಿ ತಾಯಿ ಹೋರಾಟ ಸಮಿತಿ ಆಶ್ರಯದಲ್ಲಿ ರೈತರು ಕಾವೇರಿ ನದಿಯ ಸ್ನಾನಘಟ್ಟದ ಬಳಿ ಅಣಕು ಗುಳೆ ಯಾತ್ರೆ ಆರಂಭಕ್ಕೆ ಮುನ್ನ ಪ್ರದಕ್ಷಿಣೆ ಹಾಕಿ ಯಾತ್ರೆ ಹೊರಟರು. ಕದ್ದು ಮುಚ್ಚಿ ನೀರು ಬಿಡುತ್ತಿರುವ ಸರ್ಕಾರದ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ತಮಿಳುನಾಡಿಗೆ ನೀರು ಬಿಡುವ ಮೂಲಕ ಸರ್ಕಾರ ರೈತರ ಗುಳೆ ಭಾಗ್ಯ ಕಲ್ಪಿಸಿದೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಕೆ ಎಸ್ ನಂಜುಂಡೇಗೌಡ, ರಾಮಕೃಷ್ಣೇಗೌಡ ಮತ್ತಿತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...