ಮಂಡ್ಯ | ನಗರಸಭೆಯ ನಿರ್ಲಕ್ಷ್ಯಕ್ಕೆ ಮುಚ್ಚಿದ ಶೌಚಾಲಯ; ಸಾರ್ವಜನಿಕರ ಪರದಾಟ

Date:

Advertisements

ಮಂಡ್ಯ ನಗರಸಭೆಯ ಅಸಡ್ಡೆಯ ಪರಿಣಾಮವಾಗಿ ಸಾವಿರಾರು ಜನರು ನಿತ್ಯವೂ ಉಪಯೋಗಿಸಬೇಕಾದ ಊರೊಟ್ಟಿನ ಶೌಚಾಲಯದ ಬಾಗಿಲು ಮುಚ್ಚಿದೆ. ಸಾರ್ವಜನಿಕರಿಗೆ ಶೌಚಾಲಯ ವ್ಯವಸ್ಥೆಯಿಲ್ಲದೆ ಪರದಾಡುವಂತಾಗಿದೆ ಎಂದು ಕರ್ನಾಟಕ ಜನಶಕ್ತಿ ಜಿಲ್ಲಾ ಕಾರ್ಯದರ್ಶಿ ಸಿದ್ದರಾಜು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಪ್ರಕಟಣೆಗೆ ನೀಡಿರುವ ಅವರು, “ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲೇ ಕಟ್ಟಿರುವ ಊರೊಟ್ಟಿನ ಶೌಚಾಲಯಕ್ಕೆ ಬೀಗ ಬಿದ್ದಿದ್ದು, ಕಳೆದ ಒಂದು ವರ್ಷದಿಂದ ಉಪಯೋಗಕ್ಕಿಲ್ಲದಂತಾಗಿರುವುದು ಅತ್ಯಂತ ಬೇಸರದ ವಿಷಯವಾಗಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಈ ಶೌಚಾಲಯಗಳು ಈಗ ನಾಗರಿಕರ ಪ್ರಯೋಜಕ್ಕೆ ಬಾರದಂತಾಗಿವೆ. ನಗರಸಭೆಯ ನಿರ್ವಹಣೆ ಕೊರತೆಯಿಂದ ಈ ಶೌಚಾಲಯ ಮುಚ್ಚಿದ್ದು, ಸಾರ್ವಜನಿಕರು ತೀವ್ರ ತೊಡಕು ಅನುಭವಿಸುತ್ತಿದ್ದಾರೆ” ಎಂದು ಹರಿಹಾಯ್ದರು.

“ಜಿಲ್ಲಾ ಕಚೇರಿ ಕೆಲಸಕ್ಕೆಂದು ನಿತ್ಯವೂ ಸಾವಿರಾರು ಜನರು ಬರುತ್ತಾರೆ. ಶೌಚಾಲಯದ ಕೊರತೆಯಿಂದ ಸಾರ್ವಜನಿಕರು ತೊಡಕು ಅನುಭವಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಂತಹ ಪ್ರಮುಖ ಸ್ಥಳದಲ್ಲಿ ಶೌಚಾಲಯ ವ್ಯವಸ್ಥೆ ನಿರ್ವಹಿಸದ ಮಟ್ಟಿಗೆ ನಗರಸಭೆಯ ಆಡಳಿತ ವಿಫಲವಾಗಿದೆ” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ʼಈ ದಿನʼ ವರದಿಗೆ ಎಚ್ಚೆತ್ತ ಅಧಿಕಾರಿಗಳು; ನ್ಯೂಮಂಡ್ಲಿ ಉರ್ದು ಶಾಲೆಗೆ ಬಿಇಒ ಭೇಟಿ, ಸಮಸ್ಯೆ ಬಗೆಹರಿಸುವ ಭರವಸೆ

“ಜಿಲ್ಲಾಧಿಕಾರಿ ಕಚೇರಿ ಬಳಿ ನಿತ್ಯವೂ ವಿವಿಧ ಹೋರಾಟಗಳು ಮತ್ತು ಪ್ರತಿಭಟನೆಗಳು ನಡೆಯುತ್ತವೆ. ಹೀಗಾಗಿ, ಪ್ರತಿಭಟನಾಕಾರರು ಕೂಡ ಮೂತ್ರ ವಿಸರ್ಜನೆಗಾಗಿ ಅನುಕೂಲಕರ ಜಾಗವಿಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ. ಸಾರ್ವಜನಿಕರ ಉಪಯೋಗಕ್ಕೆ ಶೌಚಾಲಯವನ್ನು ಸರಿಪಡಿಸಿ ಮತ್ತೆ ತೆರೆಯಬೇಕು” ಎಂದು ಒತ್ತಾಯಿಸಿದರು.

ಊರೊಟ್ಟಿನ ವ್ಯವಸ್ಥೆ ಏಳಿಗೆಗೆ ಆದ್ಯತೆ ಕೊಟ್ಟು ಮಂಡ್ಯ ಜಿಲ್ಲಾಡಳಿತ ಮತ್ತು ನಗರಸಭೆ ಅಧಿಕಾರಿಗಳು ಕೂಡಲೇ ಈ ಸಮಸ್ಯೆ ಬಗೆಹರಿಸಿ, ಶೌಚಾಲಯವನ್ನು ಪುನಃ ಕಾರ್ಯ ಎಸಗುವಂತೆ ಮಾಡಬೇಕಿದೆ ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X