ಸಾಹಿತ್ಯ ಸಮ್ಮೇಳನ | ಮಹಿಳಾ ವಿರೋಧಿ ಸಿ ಟಿ ರವಿ ಮಂಡ್ಯಕ್ಕೆ ಕಾಲಿಡದಂತೆ ಪ್ರತಿಭಟನೆ

Date:

Advertisements

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ನಾಲಿಗೆ ಹರಿಬಿಟ್ಟಿರುವ, ಅಶ್ಲೀಲವಾಗಿ ನಿಂದಿಸಿರುವ ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ನಾಲಿಗೆಗೆ ಲಗಾಮು ಹಾಕಬೇಕು. ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆತ ಬಾರದಂತೆ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಿ ಮಂಡ್ಯದ ಪ್ರಗತಿಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.

“ಮಂಡ್ಯದಲ್ಲಿ ನಡೆಯುತ್ತಿರುವ ಸಾಹಿತ್ಯ ಸಮ್ಮೇಳನದ ಮುಖ್ಯ ವೇದಿಕೆಯ ಬಳಿ ಹಲವು ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದ್ದು, ”ಸಮ್ಮೇಳನದಲ್ಲಿ ಭಾಷಣ ಮಾಡಲು ಸಿ ಟಿ ರವಿಗೆ ಆಹ್ವಾನ ನೀಡಲಾಗಿದೆ. ಆತನಿಗೆ ಮಾತನಾಡಲು ವೇದಿಕೆಯಲ್ಲಿ ಅವಕಾಶ ಕೊಡಬಾರದು. ಆತನು ಸಮ್ಮೇಳನಕ್ಕೆ ಬಾರದಂತೆ ನಿರ್ಬಂಧ ಹೇರಬೇಕು” ಎಂದು ಒತ್ತಾಯಿಸಿದ್ದಾರೆ.

”ಮಾನವ ಪ್ರೀತಿಯ ಮಂಡ್ಯದ ಮಣ್ಣಿನ ಮೇಲೆ ಮಹಿಳಾ ವಿರೋಧಿಗಳು ಕಾಲಿಡಬಾರದು. ನೀಚ ನಾಲಿಗೆಯ ಸಿ ಟಿ ರವಿ ಭಾಷಣದ ಅಗತ್ಯ ಮಂಡ್ಯಕ್ಕಿಲ್ಲ. ಮಹಿಳಾ ವಿರೋಧಿ ಸಿ ಟಿ ರವಿ ಮಂಡ್ಯಕ್ಕೆ ಕಾಲಿಡಬಾರದು” ಎಂದು ಎಚ್ಚರಿಕೆ ನೀಡಿದ್ದಾರೆ.

Advertisements

”ಬುದ್ದ, ಬಸವ, ಅಂಬೇಡ್ಕರ್, ಸಾವಿತ್ರಿ ಬಾ ಫುಲೆ ಹಾಗೂ ಗಾಂಧಿ ಕಂಡ ದೇಶದಲ್ಲಿ ದೇಶ ವಿರೋಧಿ, ಮಹಿಳಾ ವಿರೋಧಿ, ಸಾಮರಸ್ಯ ವಿರೋಧಿಗಳಿಗೆ ಅವಕಾಶ ನೀಡಬಾರದು. ಗೋ ಬ್ಯಾಕ್ ಸಿ ಟಿ ರವಿ” ಎಂದು ಫಲಕ ಹಿಡಿದು ಪ್ರತಿಭಟಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಹಿಳಾ ಮುನ್ನಡೆಯ ಪೂರ್ಣಿಮ, ಕರ್ನಾಟಕ ಜನಶಕ್ತಿಯ ಅಂಜಲಿ, ಕೃಷ್ಣ ಪ್ರಕಾಶ್ ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X