ಮಂಡ್ಯ | ಮೈಷುಗರ್ ವ್ಯಾಪ್ತಿಯ ರೈತರಿಗೆ ಕಬ್ಬಿನ ಹಣ ಪಾವತಿಯ ಬಗ್ಗೆ ಆತಂಕ ಬೇಡ: ಜಿಲ್ಲಾಧಿಕಾರಿ ಡಾ.ಕುಮಾರ್

Date:

Advertisements

ಮೈಷುಗರ್ ವ್ಯಾಪ್ತಿಯ ರೈತರು ಕಬ್ಬಿನ ಹಣ ಪಾವತಿಯ ಬಗ್ಗೆ ಯಾವುದೇ ಆತಂಕಕ್ಕೆ ಒಳಗಾಗದೇ ತಮ್ಮ ಕಬ್ಬನ್ನು ಇತರೆ ಖಾಸಗಿ ಕಾರ್ಖಾನೆಗಳಿಗೆ ಪರಭಾರೆ ಮಾಡದೇ ಮೈಷುಗರ್ ಕಂಪನಿಗೆ ಸರಬರಾಜು ಮಾಡಿ ಮೈಷುಗರ್ ಕಾರ್ಖಾನೆಯ ಉಳಿವಿಗೆ ಕೈ ಜೋಡಿಸಬೇಕೆಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ತಿಳಿಸಿದ್ದಾರೆ.

ಮೈಷುಗರ್ ವ್ಯಾಪ್ತಿಯ ಕಬ್ಬು ಬೆಳೆಗಾರರು ತಮ್ಮ ಕಬ್ಬನ್ನು ಮೈಷುಗರ್ ಕಂಪನಿಗೆ ಸರಬರಾಜು ಮಾಡುವುದು ಮತ್ತು ಕಬ್ಬು ಸರಬರಾಜು ಮಾಡಿದ ಹಣವನ್ನು ಸರಕಾರದ ನಿಯಮದಂತೆ 14 ದಿವಸಗಳ ಒಳಗಾಗಿ ರೈತರಿಗೆ ಕಬ್ಬಿನ ಹಣ ಪಾವತಿಸಲು ಮಂಡ್ಯ ಮೈಷುಗರ್ ಸಕ್ಕರೆ ಕಾರ್ಖಾನೆ ವತಿಯಿಂದ ಕೊಡಿಸುವ ಸಂಬಂಧ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಪ್ರಸ್ತುತ ಈ ಕಾರ್ಖಾನೆಯು ಈಗಾಗಲೇ ಹಣಕಾಸಿನ ಮುಗ್ಗಟ್ಟಿನಲ್ಲಿದೆ. ಹಣಕಾಸಿನ ಯಾವುದೇ ರೀತಿಯ ಪರ್ಯಾಯ ಏರ್ಪಾಡು ಇಲ್ಲದೆ ಕಾರ್ಖಾನೆ ಪ್ರಾರಂಭಿಸಿ ಕಬ್ಬು ನುರಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದಿದ್ದಾರೆ.

Advertisements

2024-25ನೇ ಸಾಲಿನ ಹಂಗಾಮಿನಲ್ಲಿ ಮೈಷುಗರ್ ಕಾರ್ಖಾನೆ, ಮಂಡ್ಯ ವ್ಯಾಪ್ತಿಯ ರೈತರ ಕಬ್ಬನ್ನು ಇತರೆ ಕಾರ್ಖಾನೆಗಳಾದ ಎನ್‌ಎಸ್‌ಎಲ್ ಷುಗರ‍್ಸ್, ಕೊಪ್ಪ, ಐಸಿಎಲ್ ಷುಗರ‍್ಸ್, ಕೆ.ಆರ್.ಪೇಟೆ, ಶ್ರೀ ಚಾಮುಂಡೇಶ್ವರಿ ಷುಗರ‍್ಸ್, ಕೆ.ಎಂ ದೊಡ್ಡಿ ಹಾಗೂ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆ, ಅಳಗಂಚಿ ಮತ್ತು ಕುಂತೂರು ಸಕ್ಕರೆ ಕಾರ್ಖಾನೆಗಳಿಗೆ ರೈತರಾಗಲೀ ಇಲ್ಲವೇ ಕಾರ್ಖಾನೆಯವರಾಗಲೀ ಅನಧಿಕೃತ ಪರಭಾರೆ ಮಾಡಬಾರದೆಂದು ಸೂಚಿಸಿದೆ. ಹಾಗೂ ಅವರಿಗೆ ಮೈಷುಗರ್ ವ್ಯಾಪ್ತಿಯ ಕಬ್ಬು ಖರೀದಿಸದಂತೆ ನೋಟಿಸ್ ನೀಡಿ ಎಚ್ಚರಿಕೆ ನೀಡಿದ್ದಾರೆ.

ಮೈಸೂರು ಸಕ್ಕರೆ ಕಾರ್ಖಾನೆ ಕಂಪನಿಯು ಮಂಡ್ಯ ಜಿಲ್ಲೆಯ ಶತಮಾನದ ಭವ್ಯ ಇತಿಹಾಸವನ್ನು ಹೊಂದಿದ್ದು, ಸದರಿ ಸಕ್ಕರೆ ಕಾರ್ಖಾನೆೆಯನ್ನು ಉಳಿಸುವುದು ನಮ್ಮೆಲ್ಲರ ಹೊಣೆಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದಿ ಮೈಸೂರು ಶುಗರ್ ಕಂಪನಿ ಲಿ ಮಂಡ್ಯ ಕಾರ್ಖಾನೆಯ ವ್ಯಾಪ್ತಿಯಲ್ಲಿನ ಕಬ್ಬುನ್ನು ಒಪ್ಪಿಗೆ ಮತ್ತು ಒಪ್ಪಿಗೆ ರಹಿತ ಖಾಸಗಿ ಸಕ್ಕರೆ ಕಾರ್ಖಾನೆಗಳಿಗೆ ಪರಭಾರೆಯಾದರೆ ಕಾರ್ಖಾನೆಯನ್ನು ಪ್ರಾರಂಭಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಕಬ್ಬು ಬೆಳೆಗಾರರು ಕಬ್ಬು ಸರಬರಾಜು ಮಾಡುವ ಮೂಲಕ ಸಹಕರಿಸಬೇಕು ಎಂದು ಕೋರಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X