ಮಂಡ್ಯ | ಕಾವೇರಿಗೆ ನಮಿಸಲು ಅವಕಾಶ ನಿರಾಕರಣೆ; ನಿಗಮದ ಮುಖ್ಯ ಎಂಜಿನಿಯರ್ ಕ್ಷಮೆ ಕೋರುವಂತೆ ರೈತ ಸಂಘ ಆಗ್ರಹ

Date:

Advertisements

ಕಾವೇರಿ ಮಾತೆಗೆ ನಮಿಸಲು ಅವಕಾಶ ನಿರಾಕರಣೆ ಮಾಡಿದ ಕಾವೇರಿ ನಿಗಮದ ಮುಖ್ಯ ಎಂಜಿನಿಯರ್ ರಘುರಾಮ್ ಅವರು ಕ್ಷೇಮೆ ಕೋರಬೇಕು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹಾಗೂ ಕಾರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪಟ್ಟುಹಿಡಿದರು.

ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಬಳಿ ದರ್ಶನ್ ಪುಟ್ಟಣ್ಣಯ್ಯ ಹಾಗೂ ಕಾರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಆಹೋರಾತ್ರಿ ಧರಣಿ ವೇಳೆ ಪ್ರತಿಭಟನಾಕಾರರು ಪ್ರತಿಭಟನಾ ಸ್ಥಳದಿಂದ ಬೃಂದಾವನದ ಒಳಗಿರುವ ಕಾವೇರಿ ಮಾತಿಗೆ ನಮಿಸಲು ಪಂಜಿನ ಮೆರವೆಣೆಗೆ ಮೂಲಕ ಮುತ್ತಿಗೆ ಹಾಕಿದರು.

ಈ ವೇಳೆ ಕಾವೇರಿ ನಿಗಮದ ಮುಖ್ಯ ಎಂಜಿನಿಯರ್ ರಘುರಾಮ್ ಅವರು ಕಾವೇರಿ ಮಾತೆಗೆ ನಮಿಸಲು ಅವಕಾಶ ನಿರಾಕರಿಸಿದ್ದರಿಂದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಾತನಾಡಿ, “ನಿಗಮದ ಎಂಜಿನಿಯರ್‌ ಪ್ರತಿಭಟನಾಕಾರರ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಕಾವೇರಿ ಮಾತೆ ಪ್ರತಿಮೆ ಬಳಿಯೇ ಚಳವಳಿ ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಇಲಾಖೆಗಳಲ್ಲಿನ ಬೇಕಾಬಿಟ್ಟಿ ವರ್ಗಾವಣೆಗೆ ಕಡಿವಾಣ ಹಾಕಿದ ಸಿಎಂ ಸಿದ್ದರಾಮಯ್ಯ

ಕಾವೇರಿ ನಿಗಮದ ಮುಖ್ಯ ಎಂಜಿನಿಯರ್ ರಘುರಾಮ್ ಅವರು ಶಾಸಕರು ಹಾಗೂ ರೈತ ಸಂಘದ ಕ್ಷಮೆ ಕೋರಿದ ಬಳಿಕ ಎಂದಿನಂತೆ ಆಹೋರಾತ್ರಿ ಧರಣಿ ಸ್ಥಳದಲ್ಲಿ ಪ್ರತಿಭಟನೆ ಮುಂದುವರಿಸಿದರು.

ಈ ವೇಳೆ ಬಡಗಪುರ ನಾಗೇಂದ್ರ, ಕೆಂಪೂಗೌಡ್ರು, ಪಿ ನಾಗರಾಜ್, ಕೊಡಗಿನ ಮನುಸೋಮಯ್ಯ, ಹೋಸಕೋಟೆ ಬಸವರಾಜ್ ಸೇರಿದಂತೆ ಪಾಂಡವಪುರ, ಶ್ರೀರಂಗಪಟ್ಟಣದ ರೈತ ಸಂಘದ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X