ಮಂಡ್ಯ | ಸ್ಲಂಬೋರ್ಡ್ ವಸತಿ ಗೃಹಗಳಿಗೆ ಅತಿಕ್ರಮ ಪ್ರವೇಶ; ಖಾಲಿ ಮಾಡಿಸಿದ ಅಧಿಕಾರಿಗಳು

Date:

Advertisements

ತಮಿಳು ಕಾಲೊನಿ ನಿವಾಸಿಗಳಿಗಾಗಿ ಮಂಡ್ಯ ನಗರದ ಹೊರವಲಯದ ಚಿಕ್ಕಮಂಡ್ಯ ಕೆರೆಯಂಗಳದಲ್ಲಿ ನಿರ್ಮಿಸಿದ ಸ್ಲಂಬೋರ್ಡ್ ವಸತಿ ಗೃಹಗಳಿಗೆ ಮುಸ್ಲಿಂ ಸಮುದಾಯದ ಕೆಲವು ಜನರು ಅತಿಕ್ರಮವಾಗಿ ಪ್ರವೇಶಿಸಿದ್ದರಿಂದ ಕೆಲಕಾಲ ಗೊಂದಲದ ವಾತಾವರಣದ ಸೃಷ್ಟಿಯಾಗಿತ್ತು.  

ಖಾಲಿ ಮನೆಗಳನ್ನು ಹಿಡಿದುಕೊಂಡರೆ ಆ ಮನೆಗಳು ಅವರಿಗೇ ಸೇರುತ್ತವೆಂಬ ಸುಳ್ಳು ವದಂತಿ ಹಿನ್ನೆಲೆಯಲ್ಲಿ ನಗರದ ನಾನಾ ಬಡಾವಣೆಗಳಲ್ಲಿ ವಾಸಿಸುತ್ತಿದ್ದ ಮುಸ್ಲಿಮರು ಬುಧವಾರ ಲಾರಿಗಳ ಮೂಲಕ ತಂಡೋಪ ತಂಡವಾಗಿ ಬಂದು ತಮಗಿಷ್ಟವಾದ ಮನೆಗಳಿಗೆ ಪ್ರವೇಶ ಮಾಡಿದರು. ಸಾಕಷ್ಟು ಮನೆ ಪಾತ್ರೆ ಸಾಮಾನುಗಳು ಹಾಗೂ ಬಟ್ಟೆ‌ಗಳೊಂದಿಗೆ ಬಂದಿದ್ದರು ಎನ್ನಲಾಗಿದೆ. 

ವಿಷಯ ತಿಳಿದ ಉಪವಿಭಾಗಾಧಿಕಾರಿ ಶಿವಮೂರ್ತಿ, ಡಿವೈಎಸ್‌ಪಿ ಲಕ್ಷ್ಮೀನಾರಾಯಣ ಪ್ರಸಾದ್, ಕಂದಾಯ ಇಲಾಖೆ ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಮನೆಗಳಿಗೆ ಪ್ರವೇಶ ಮಾಡಿದ ಜನರು ಮತ್ತು ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.

Advertisements

ಈ ವೇಳೆ “ತಮಗ್ಯಾರಿಗೂ ಸ್ವಂತ ಮನೆ ಅಥವಾ ನಿವೇಶನಗಳಿಲ್ಲ. ಈ ಮನೆಗಳು ಖಾಲಿ ಇರುವುದರಿಂದ ನಮಗೆ ಕೊಡಿ. ನಾವು ಇಲ್ಲೇ ವಾಸಿಸುತ್ತೇವೆ. ಕಾನೂನು ಬದ್ಧವಾಗಿ ಹಂಚಿಕೆ ಪ್ರಕ್ರಿಯೆ ನಡೆಯುವವರೆಗೆ ಬೇಕಿದ್ದರೆ ಬಾಡಿಗೆ ಪಾವತಿಸಲು ನಾವು ಸಿದ್ಧ” ಎಂದು ಮುಸ್ಲಿಂ ಸಮುದಾಯದ ಜನರು ಒತ್ತಾಯಿಸಿದರು.

“ತಮಿಳು ಕಾಲೊನಿ ನಿವಾಸಿಗಳ ಸ್ಥಳಾಂತರಕ್ಕೆ ನ್ಯಾಯಾಲಯದ ತಡೆಯಾಜ್ಞೆಯಿದೆ. ಹೀಗಾಗಿ ಸ್ಥಳಾಂತರ ಮಾಡಿಲ್ಲ. ಕೆರೆಯಂಗಳದಲ್ಲಿ ನಿರ್ಮಿಸಿರುವ ಈ ಮನೆಗಳು ತಮಿಳು ಕಾಲೊನಿ ನಿವಾಸಿಗಳಿಗಾಗಿ ಮೀಸಲಾಗಿವೆ. ನಿಮಗೆ ಮನೆಗಳಿಲ್ಲವೆಂದರೆ ನೀವು ಅರ್ಜಿಗಳನ್ನು ಕೊಡಿ. ಮುಂದಿನ ಹಂತದಲ್ಲಿ ನಿಮ್ಮ ಅರ್ಜಿಗಳನ್ನು ಪರಿಗಣಿಸುತ್ತೇವೆ” ಎಂದು ಅಧಿಕಾರಿಗಳು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕನ್ನಡ ನಾಡಿನ ಏಕೀಕರಣಕ್ಕೆ ಮುನ್ನುಡಿ ಬರೆದ ಜಿಲ್ಲೆ ಬಳ್ಳಾರಿ: ಯಶವಂತ್‌ರಾಜ್ ನಾಗಿರೆಡ್ಡಿ

ಉಪವಿಭಾಗಾಧಿಕಾರಿ ಶಿವಮೂರ್ತಿ ಮಾತನಾಡಿ, “ಅತಿಕ್ರಮ ಪ್ರವೇಶ ಮಾಡುವುದು ಕಾನೂನುಬಾಹಿರ. ಹೀಗಾಗಿ ನೀವು ತಕ್ಷಣವೇ ಮನೆಗಳನ್ನು ಖಾಲಿ ಮಾಡಬೇಕು. ಸುಳ್ಳು ವದಂತಿಯಿಂದ ನೀವೆಲ್ಲಾ ಬಂದಿದ್ದೀರಿ” ಎಂದು ಮನವರಿಕೆ ಮಾಡಿದ ಹಿನ್ನೆಲೆಯಲ್ಲಿ ಎಲ್ಲರೂ ಮನೆಗಳನ್ನು ಬಿಟ್ಟು ಹಿಂತಿರುಗಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X