ಮಂಡ್ಯ | ರೈಲಿನಲ್ಲಿ ಮೂರ್ಛೆ ರೋಗಿ ಸಾವು; ರೈಲ್ವೆ ಸಿಬ್ಬಂದಿ ನಿರ್ಲಕ್ಷ್ಯ ಆರೋಪ

Date:

ರೈಲ್ವೆ ಸಿಬ್ಬಂದಿ ಮತ್ತು ಪೊಲೀಸರ ನಿರ್ಲಕ್ಷ್ಯದಿಂದ ಚಲಿಸುತ್ತಿದ್ದ ರೈಲಿನಲ್ಲೆ ಮೂರ್ಛೆ ರೋಗಿಯೊಬ್ಬರು ನರಳಿ ಪ್ರಾಣ ಬಿಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ.

- Advertisement -

ಮೈಸೂರಿನ ರಮಾಬಾಯಿ ನಗರದ ನಿವಾಸಿ ಸ್ವಾಮಿ( 83) ಮೃತ ವ್ಯಕ್ತಿ. ನಿನ್ನೆ ಸಂಜೆ ಮೈಸೂರಿನಿಂದ ಬೆಂಗಳೂರಿಗೆ ಪ್ಯಾಸೆಂಜರ್ ರೈಲಿನಲ್ಲಿ ಅವರು ಪ್ರಯಾಣಿಸುತ್ತಿದ್ದರು. ಮೈಸೂರಿನಲ್ಲಿ ರೈಲು ಹತ್ತುತ್ತಿದ್ದಂತೆ ಮೂರ್ಛೆ ಬಂದು ಕುಸಿದು ಬಿದ್ದಿದ್ದರು. ಸಹ ಪ್ರಯಾಣಿಕರಿಂದ ಮೈಸೂರಿನಲ್ಲೆ ರೈಲ್ವೆ ಪೊಲೀಸರಿಗೆ, ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

‌ರೋಗಿಯ ಮಾಹಿತಿ ಕೊಟ್ಟರೂ ಸಿಬ್ಬಂದಿಗಳು ಚಿಕಿತ್ಸೆ ಕೊಡಿಸಿರಲಿಲ್ಲ. ಮೈಸೂರಿನಲ್ಲಿ ಮೂರ್ಛೆ ರೋಗಿಯನ್ನು ಇಳಿಸಲೂ ಸಿಬ್ಬಂದಿ ಮುಂದಾಗಿರಲಿಲ್ಲ. ಮೈಸೂರಿನಿಂದ ಮಂಡ್ಯದವರೆಗೂ ಎಲ್ಲಿಯೂ ಚಿಕಿತ್ಸೆ ಸಿಕ್ಕಿರಲಿಲ್ಲ. ಹೀಗಾಗಿ ರೈಲು ಮಂಡ್ಯ ಸಮೀಪ ಬರುತ್ತಿದ್ದಂತೆ ಸ್ವಾಮಿ ಸಾವಿಗೀಡಾಗಿದ್ದಾರೆ ಎಂದು ಸಹಪ್ರಯಾಣಿಕರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಆರ್‌ಟಿಐ ಕಾರ್ಯಕರ್ತ ಸಾವು ಪ್ರಕರಣ; ಇಬ್ಬರು ಪೊಲೀಸರು ಅಮಾನತು

ರೈಲಿನ ಎಲ್ಲ ನಿಲ್ದಾಣಗಳಲ್ಲಿ ರೈಲ್ವೆ ಪೊಲೀಸರಿಗೆ ತಿಳಿಸಿದರೂ ಚಿಕಿತ್ಸೆ ಕೊಡಿಸಲಿಲ್ಲ. ಮೂರ್ಛೆ ರೋಗಿ ಸಾವಿಗೆ ರೈಲ್ವೆ ಅಧಿಕಾರಿಗಳು, ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಸಹ ಪ್ರಯಾಣಿಕರು ಆರೋಪಿಸಿದ್ದಾರೆ.

ಮಂಡ್ಯದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಪೊಲೀಸರು ವಾರಸುದಾರರಿಗೆ ಒಪ್ಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...

ರಾಯಚೂರು | ಗಣೇಶ ಮೆರವಣಿಗೆಯಲ್ಲಿ ಮಿತಿ ಮೀರಿ ಡಿಜೆ ಸದ್ದು, 8 ಪ್ರಕರಣ ದಾಖಲು: ಎಸ್ ಪಿ

ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ನಿಗದಿತ ಮಿತಿಗಿಂತ...