ಮಂಡ್ಯ | ವಿದ್ಯಾರ್ಥಿಗಳ ಸಂಕಷ್ಟಕ್ಕೆ ಕೊನೆಗೂ ಸಿಕ್ಕ ಮುಕ್ತಿ; ಕಾಲೇಜಿಗೆ ಬಸ್‌ ಸೇವೆ ಆರಂಭ

Date:

Advertisements

ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ಪಟ್ಟಣದ ಬಸ್‌ ನಿಲ್ದಾಣದಿಂದ ಸರ್ಕಾರ ಪ್ರಥಮ ದರ್ಜೆ ಕಾಲೇಜು, ಜೂನಿಯರ್ ಕಾಲೇಜು, ಮಹಿಳಾ ಸರ್ಕಾರಿ ಕಾಲೇಜು ಮತ್ತು ಸರ್ಕಾರಿ ಐಟಿಐ ಕಾಲೇಜುಗಳಿಗೆ ಬಸ್‌ ಸೇವೆ ಆರಂಭವಾಗಿದೆ. ಕೆ.ಆರ್‌ ಪೇಟೆ ಶಾಸಕ ಎಚ್‌.ಟಿ ಮಂಜು ಅವರು ಬಸ್‌ ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದಾರೆ.

ಕೆ.ಆರ್‌ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಐಟಿಐ ಕಾಲೇಜುಗಳು ಪಟ್ಟಣದ ಬಸ್‌ ನಿಲ್ಧಾಣದಿಂದ 4 ಕಿ.ಮೀ ದೂರದಲ್ಲಿವೆ. ಮಹಿಳಾ ಸರ್ಕಾರಿ ಕಾಲೇಜು ಮತ್ತು ಸರ್ಕಾರಿ ಜೂನಿಯರ್ ಕಾಲೇಜು 3 ಕಿ.ಮೀ ದೂರದಲ್ಲಿವೆ. ವಿದ್ಯಾರ್ಥಿಗಳು ಪ್ರತಿನಿತ್ಯ ಬಸ್‌ ನಿಲ್ದಾಣದಿಂದ ಕಾಲೇಜಿಗೆ, ಕಾಲೇಜಿನಿಂದ ಬಸ್‌ ನಿಲ್ದಾಣಕ್ಕೆ ನಡೆದುಕೊಂಡೇ ಹೋಗಬೇಕಿತ್ತು.

ಹೀಗಾಗಿ, ವಿದ್ಯಾರ್ಥಿಗಳು ನಡೆದೇ ಸುಸ್ತಾಗುತ್ತಿದ್ದರಿಂದ ಬೋಧನೆಯ ಕಡೆಗೆ ಗಮನವಿಟ್ಟು ಆಲಿಸಲಾಗುತ್ತಿಲ್ಲವೆಂದು ಹೇಳುತ್ತಲೇ ಇದ್ದರು. ಹಲವಾರು ವರ್ಷಗಳಿಂದ ಬಸ್‌ ನಿಲ್ದಾಣದಿಂದ ಕಾಲೇಜಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದ್ದರು. ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಬಸ್‌ ವ್ಯವಸ್ಥೆಗಾಗಿ ಒತ್ತಾಯಿಸಿ ಹಲವು ಬಾರಿ ಪ್ರತಿಭಟನೆ ನಡೆಸಿತ್ತು. ಮಾತ್ರವಲ್ಲದೆ, ಹಿಂದಿನ ಶಾಸಕರಿಗೆ ಮನವಿಯನ್ನೂ ಸಲ್ಲಿಸಿತ್ತು.

Advertisements

ಇದೀಗ, ವಿದ್ಯಾರ್ಥಿಗಳ ವರ್ಷಗಳ ಬೇಡಿಕೆ ಈಡೇರಿದೆ. ಬಸ್‌ ನಿಲ್ದಾಣದಿಂದ ಕಾಲೇಜುಗಳಿಗೆ ಬಸ್‌ ಸಂಚಾರ ವ್ಯವಸ್ಥೆ ಒದಗಿಸಲಾಗಿದೆ.

ಬಸ್‌ ವ್ಯವಸ್ಥೆಯ ಬಗ್ಗೆ ಮಾತನಾಡಿರುವ ಶಾಸಕ ಮಂಜು, “ವಿದ್ಯಾರ್ಥಿ ಜೀವನದಲ್ಲಿ ನಾನು ಸಹ ಬಹಳ ಕಷ್ಟಪಟ್ಟಿದ್ದೇನೆ. ಆದ್ದರಿಂದ ತಾಲೂಕಿನ ವಿದ್ಯಾರ್ಥಿಗಳ ಹಿತವನ್ನು ಕಾಪಾಡುವುದು ನನ್ನ ಕರ್ತವ್ಯವಾಗಿದೆ. ಪಟ್ಟಣದಲ್ಲಿರುವ ಸರ್ಕಾರಿ ಬಸ್ ನಿಲ್ದಾಣದಿಂದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಜೂನಿಯರ್ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನವರೆಗೂ ಬಸ್ ಸಂಚರಿಸಲು ನಗರ ಸಾರಿಗೆ ವ್ಯವಸ್ಥೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X