ಮಂಡ್ಯ | ‘ವಧು ಭಾಗ್ಯʼಕ್ಕೆ ಒತ್ತಾಯ; ಆದಿಚುಂಚನಗಿರಿಗೆ ಯುವಕರ ಪಾದಯಾತ್ರೆ

Date:

Advertisements

ಕೃಷಿಯಲ್ಲಿ ತೊಡಗಿರುವ ಯುವಕರಿಗೆ ‘ವಧು ಭಾಗ್ಯʼ ಕಲ್ಪಿಸಲು ರಾಜ್ಯ ಸರ್ಕಾರ ಕ್ರಿಯಾ ಯೋಜನೆ ಜಾರಿಗೆ ತರಬೇಕೆಂದು ಒತ್ತಾಯಿಸಿ ಮಂಡ್ಯದ ಯುವಕರು ಆದಿಚುಂಚನಗಿರಿ ಮಠಕ್ಕೆ ಪಾದಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದಾರೆ.

ನೂರಾರು ತೊಂದರೆಗಳಿಂದ ನಮ್ಮ ಹಳ್ಳಿ ಯುವಕರು ಮದುವೆಯ ಕನಸು ಕಾಣುವುದನ್ನು ನಿಲ್ಲಿಸಿದ್ದಾರೆ. ಅದೆಷ್ಟೋ ಯುವಕರು ವಧು ಸಿಗದೆ ಜಿಗುಪ್ಸೆಗೆ ಒಳಗಾಗುತ್ತಿದ್ದಾರೆ. ಯುವ ರೈತರಿಗೆ ನಮ್ಮ ಮಗಳನ್ನು ಕೊಡುವುದಿಲ್ಲವೆಂದು ಪೋಷಕರು ನೇರವಾಗಿ ಹೇಳುತ್ತಿದ್ದಾರೆ.

ಕೊರೊನಾ ನಂತರ ಯುವಕರು ಖಾಸಗಿ ಉದ್ಯೋಗ ತೊರೆದು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಆದರೆ, ಇವರಿಗೆ ಯಾವ ಪೋಷಕರು ಕನ್ಯೆ ಕೊಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಂಡ್ಯದ 30ವರ್ಷ ಮೇಲ್ಪಟ್ಟ ಯುವಕರು ಡಿಸೆಂಬರ್‌ನಲ್ಲಿ, ಅದೃಷ್ಟದ ಬದಲಾವಣೆಗೆ ಮತ್ತು ಅವರ ಸಂಕಟದ ಬಗ್ಗೆ ಜಾಗೃತಿ ಮೂಡಿಸಲು ಆದಿಚುಂಚನಗಿರಿ ಮಠಕ್ಕೆ ಪಾದಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದಾರೆ.

Advertisements

ಈ ವರ್ಷ ನಡೆಯುತ್ತಿರುವ ಎರಡನೇ ಪಾದಯಾತ್ರೆ ಇದಾಗಿದೆ. ಕೃಷಿಯಲ್ಲಿ ತೊಡಗಿರುವ ಯುವಕರಿಗೆ ‘ವಧು ಭಾಗ್ಯʼ ಕಲ್ಪಿಸಲು ರಾಜ್ಯ ಸರ್ಕಾರ ಕ್ರಿಯಾ ಯೋಜನೆ ಜಾರಿಗೆ ತರಬೇಕು ಎಂದು ಮಂಡ್ಯದ ಯುವಕರು ಒತ್ತಾಯಿಸುತ್ತಿದ್ದಾರೆ.

ಇದೇನು ಮೊದಲ ಪಾದಯಾತ್ರೆಯಲ್ಲ ಈ ಹಿಂದೆ ಫೆಬ್ರವರಿಯಲ್ಲಿ ಯುವ ಕೃಷಿಕರು ಕನ್ಯೆ ಸಿಗುತ್ತಿಲ್ಲವೆಂದು ಮಳವಳ್ಳಿ ತಾಲೂಕಿನಿಂದ ಚಾಮರಾಜನಗರ ಜಿಲ್ಲೆಯ ಎಂ.ಎಂ.ಹಿಲ್ಸ್‌ವರೆಗೆ ಪಾದಯಾತ್ರೆ ಕೈಗೊಂಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X