ಮಂಡ್ಯ | ಕೆ ವಿ ಶಂಕರಗೌಡರು ಆಧುನಿಕ ಮಂಡ್ಯದ ನಿರ್ಮಾತೃ: ನ್ಯಾ.‌‌ಜೀರಹಳ್ಳಿ ರಮೇಶ್ ಗೌಡ

Date:

ಪ್ರಪಂಚದಲ್ಲಿ ಬೇರೆ ಬೇರೆ ಆದಾಯದ ಮೂಲಗಳಿಂದ ಹಲವು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿರಬಹುದು, ಆದರೆ ಮಂಡ್ಯ, ನಾಗಮಂಗಲ ಹಾಗೂ ಪಾಂಡವಪುರ ಭಾಗದಲ್ಲಿ ನಾಟಕಗಳ ಪ್ರದರ್ಶನ ಮಾಡಿ, ಆದರಿಂದ ಬಂದ ಆದಾಯದಿಂದ, ನಿತ್ಯ ಸಚಿವ ಕೆ.ವಿ.ಶಂಕರಗೌಡರ ಪರಿಶ್ರಮದಿಂದ ಕಟ್ಟಿದ ಶಿಕ್ಷಣ ಸಂಸ್ಥೆ ಎಂದರೆ ಮಂಡ್ಯದ ಪಿಇಎಸ್ ಶಿಕ್ಷಣ ಸಂಸ್ಥೆಯಾಗಿದೆ ಎಂದು ನ್ಯಾಯವಾದಿ ಜೀರಹಳ್ಳಿ ರಮೇಶ್ ಗೌಡ ತಿಳಿಸಿದರು.

- Advertisement -

ಚಿತ್ರಕೂಟ ಬಳಗದಿಂದ ಮಂಡ್ಯ ತಾಲೂಕಿನ ಚಿಕ್ಕಮಂಡ್ಯ ಸರ್ಕಾರಿ ಶಾಲೆಯಲ್ಲಿ ನಡೆದ ಮಿಂಚಿನ ಓಟಗಾರ ಶಂಕರ್‌ನಾಗ್ ಜನ್ಮದಿನ ಮತ್ತು ನಿತ್ಯಸಚಿವ ಕೆವಿ ಶಂಕರಗೌಡರ ನೆನಪಿನಲ್ಲಿ ಸಂಗೀತ, ಶ್ರಮದಾನ, ಸರ್ಕಾರಿ ಶಾಲೆಗೆ ಸುಣ್ಣ ಬಣ್ಣ ಬಳಿಯುವ ‘ಶಂಕರ ನಿರಂತರ’ ಕಾರ್ಯಕ್ರಮದಲ್ಲಿ ‘ಕೆ.ವಿ. ಶಂಕರಗೌಡರು ಮತ್ತು ಆಧುನಿಕ ಮಂಡ್ಯ’ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಧೀರಭಗತ್‌ರಾಯ್ ಚಿತ್ರದ ಉದಯೋನುಖ ನಟ ರಾಜೇಶ್ ದಳವಾಯಿ ಅವರನ್ನು ಚಿತ್ರಕೂಟ ಬಳಗದ ವತಿಯಿಂದ ಸನ್ಮಾನಿಸಲಾಯಿತು.

1960ರ ದಶಕದಲ್ಲಿ ಮೈಸೂರು ಭಾಗದಲ್ಲಿ ಇಂಜಿನಿಯರಿಂಗ್ ಶಿಕ್ಷಣ ಸಂಸ್ಥೆಗಳೇ ಇರಲಿಲ್ಲ, ಅಂತಹ ಸಂದರ್ಭದಲ್ಲಿ ಮಂಡ್ಯದಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸಿದ ಕೆ.ವಿ.ಶಂಕರಗೌಡರು, ಕುವೆಂಪು ಅವರಿಂದ ನಿತ್ಯ ಸಚಿವ ಎಂದು ಕರೆಸಿಕೊಂಡರು. ಶಾಸಕ, ಸಂಸದರಾಗಿ ರಾಜಕಾರಣದಲ್ಲಿದ್ದರೂ ಸಾರ್ವಜನಿಕರ ಸೇವೆಗಾಗಿ ಸಾಲ ಮಾಡಿದ್ದ ಮಹಾನುಭವ ಎಂದರೆ ಅದು ಶಂಕರಗೌಡರು ಮಾತ್ರ,  ಅವರು ಸಾವನ್ನಪ್ಪಿದಾಗ ಅವರ ಮೇಲೆ 19 ಲಕ್ಷ ರೂ.ಗಳ ಸಾಲ ಇತ್ತು. ಸಮಾಜಸೇವೆ ಮಾಡುವುದಕ್ಕಾಗಿ ಸಾಲ ಮಾಡಿಕೊಂಡಿದ್ದ ಏಕೈಕ ವ್ಯಕ್ತಿ ಎಂದರೆ ಶಂಕರಗೌಡರು ಮಾತ್ರ. ಅವರು ಬಹುದೊಡ್ಡ ಶಿಕ್ಷಣ ಪ್ರೇಮಿಯಷ್ಟೇ ಅಲ್ಲದೇ ಮಂಡ್ಯದ ಅಸ್ಮಿತೆ, ಜನಪರ ರಾಜಕಾರಣಿ, ಸಾಹಿತಿ, ಪತ್ರಕರ್ತ, ಸಂಘಟಕ, ಸಹಕಾರಿ ದುರೀಣ, ರಂಗಕರ್ಮಿ, ಶಿಕ್ಷಣ ತಜ್ಞರು ಕೂಡ ಆಗಿದ್ದರು, ಆಧುನಿಕ ಮಂಡ್ಯದ ನಿರ್ಮಾತೃ ಕೂಡ ಆಗಿದ್ದಾರೆ ಎಂದು ಸ್ಮರಿಸಿದರು.

80-90 ರ ದಶಕದಲ್ಲಿ ಕೆ.ವಿ.ಶಂಕರಗೌಡರು ಸಹಕಾರಿ ಕ್ಷೇತ್ರದಲ್ಲಿ ಕ್ರಾಂತಿ ಮಾಡಿ, ರೈತರ ವ್ಯವಸಾಯೋತ್ಪನ್ನ ಸಹಕಾರ ಸಂಘದ ಮೂಲಕ ಅಕ್ಕಿ, ಎಣ್ಣೆ, ಸೋಪು ಮುಂತಾದ ದಿನಸಿ ಪದಾರ್ಥಗಳ ಮಾರಾಟ ಆರಂಭಿಸಿದ್ದರು. ಇದು ಅಂದಿನ ಒಕ್ಕೂಟ ಮಂತ್ರಿಯಾಗಿದ್ದ ಅಶೋಕ್ ಮಹ್ತಾ ಗಮನಕ್ಕೆ ಬಂದು, ಅವರು, ಮಂಡ್ಯದಲ್ಲಿ ಆಗಿರುವ ಸಹಕಾರಿ ಕೆಲಸ ಇಂಡಿಯಾದಲ್ಲೂ ಆಗಬೇಕು, ಹಾಗಾಗಿ ಇಡೀ ಇಂಡಿಯಾ ಮಂಡ್ಯವಾಗಬೇಕೆಂದು ಹೇಳಿದ್ದರು. ಆದ್ದರಿಂದ ಮಂಡ್ಯ ಎಂದರೆ ಇಂಡಿಯಾ’ ಎಂಬ ಮಾತು ಚಾಲ್ತಿಯಲ್ಲಿದೆ ಎಂದು ಉಲ್ಲೇಖಿಸಿದರು.

1952ರ ಮೊದಲ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದರು. 1954ರಲ್ಲಿ  ಅಂದಿನ ಸರ್ಕಾರ ರೈತರ ಭೂ ಕಂದಾಯ ಹೆಚ್ಚಳ ಮಾಡುವುದಾಗಿ ಪ್ರಕಟಿಸಿತು, ಆಗ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಕಂದಾಯ ಹೆಚ್ಚಳ ಅನಿವಾರ್ಯ ಎಂದು ದನಿಗೂಡಿಸಿದರು. ಆಗ ಇದಕ್ಕೆ ವಿರೋಧ ವ್ಯಕ್ತಿಪಡಿಸಿದ ಕೆ.ವಿ.ಶಂಕರಗೌಡ ರಾಜೀನಾಮೆ ನೀಡಿ ಹೊರ ಬಂದರು. ಸ್ವತಂ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯರೇ ಶಂಕರಗೌಡ ಮನೆಗೆ ಹೋಗಿ ರಾಜೀನಾಮೆ ಪಡೆಯುವಂತೆ ಕೇಳಿಕೊಂಡರು. ರಾಜೀನಾಮೆ ವಾಪಸ್ ಪಡೆಯಲಿಲ್ಲ. ಇಂದಿನ ರಾಜಕಾರಣಿಗಳ ರಾಜಕೀಯ ಪ್ರಹಸನದ ನಡುವೆ ಶಂಕರಗೌಡರು ಬಹು ಎತ್ತರಕ್ಕೆ ನಿಲ್ಲುತ್ತಾರೆಂದು ತಿಳಿಸಿದರು.

1002335172

1957ರಲ್ಲಿ ಹೊರಗಿನವರಾದ ಸಾಹುಕಾರ್ ಚನ್ನಯ್ಯ ಮಂಡ್ಯದಲ್ಲಿ ಬಂದು ಚುನಾವಣೆಗೆ ನಿಂತರು, ಇದನ್ನು ಅಂದು ಕೆ.ವಿ.ಶಂಕರಗೌಡರ ಸಹಿತ ಮಂಡ್ಯದ ರಾಜಕಾರಣಿಗಳೆಲ್ಲ ವಿರೋಧಿಸಿ, ತಾವೇ ಹೊಂಬಯ್ಯರನ್ನು ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿಕೊಂಡು ಬಂದರು. ಆಗ ಕೆವಿಎಸ್ ಮಂಡ್ಯದಲ್ಲಿ ಹೊರಗಿನವರು ಬಂದು ರಾಜಕಾರಣ ಮಾಡುವುದನ್ನು ಪ್ರಬಲವಾಗಿ ವಿರೋಧಿಸಿದ್ದರು. ಈ ಮೂಲಕ ಸ್ವಾಭಿಮಾನ ಪ್ರದರ್ಶನ ಮಾಡಿದ್ದರು ಎಂದು ಜೀರಹಳ್ಳಿ ರಮೇಶ್ ಗೌಡ ತಿಳಿಸಿದರು.

ಸಮಾಜಮುಖಿ ಶಂಕರ್ ನಾಗ್ ಒಂದು ಅವಲೋಕನ ಕುರಿತು ಸಾಮಾಜಿಕ ಚಿಂತಕ ವಿನಯ್ ಕುಮಾರ್ ವಿಶೇಷ ಉಪನ್ಯಾಸ ನೀಡಿದರು. ಕರ್ನಾಟಕ ಜನಶಕ್ತಿ ಹೋರಾಟಗಾರ್ತಿ ಪೂರ್ಣಿಮ, ಶಿಲ್ಪ ‘ಅರಿವಿನ ಪಯಣ’ ಎಂಬ ಕಿರುನಾಟಕ ಪ್ರದರ್ಶನ ಮಾಡಿ ಗಮನ ಸೆಳೆದರು.

ವೇದಿಕೆಯಲ್ಲಿ ರೈತರ ಶಾಲೆಯ ಸಂಸ್ಥಾಪಕ ಪ್ರೊ.ಸತ್ಯಮೂರ್ತಿ, ಕರುನಾಡ ಸೇವಕರು ಸಂಘಟನೆಯ ಎಂ.ಬಿ. ನಾಗಣ್ಣಗೌಡ,  ಚಿಕ್ಕಮಂಡ್ಯ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎಚ್.ಎನ್ ದೇವರಾಜು, ನುಡಿಕರ್ನಾಟಕ ಸಂಪಾದಕ ಸಂತೋಷ್ ಜಿ, ಚಿತ್ರಕೂಟ ಬಳಗದ ಅರವಿಂದ ಪ್ರಭು, ಧನುಷ್ ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಶಿಕ್ಷಕ ಶ್ರೀಧರ ಮೂರ್ತಿ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...